“ಸಂಸ್ಕೃತಿ ಮನೆ ಮನೆಗೆ ಪರಿಚಯವಾಗಲಿ”
Team Udayavani, Jan 28, 2021, 2:18 PM IST
ಧಾರವಾಡ: ದಾಸರ ಸಾಹಿತ್ಯ ಜತೆಗೆ ನಮ್ಮ ಸಂಸ್ಕೃತಿಯ ಪರಿಚಯ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಅಷ್ಟೇ ಅಲ್ಲ ಮನೆಮನೆಗೂ ತಲುಪುವಂತಾಗಬೇಕೆಂದು ಹಿರಿಯ ಮನೋರೋಗ ತಜ್ಞ ಡಾ| ಆನಂದ ಪಾಂಡುರಂಗಿ ಹೇಳಿದರು.
ನಗರದ ಕವಿಸಂನಲ್ಲಿ ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನ, ಉತ್ತರಾದಿಮಠದತ್ತಿ ಕಾರ್ಯಕ್ರಮ ಅಂಗವಾಗಿ ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರಶಸ್ತಿ-2021 ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯೇ ಮೊದಲ ಪಾಠ ಶಾಲೆ. ಹೀಗಾಗಿ ದಾಸ ಸಾಹಿತ್ಯ ಮನೆ ಮನಕ್ಕೆ ತೀವ್ರಗತಿಯಲ್ಲಿ ತಲುಪಬೇಕಾದಲ್ಲಿ ಹಿರಿಯರು ಮೊದಲು ನಿತ್ಯ ಮನೆಯಲ್ಲಿ ಅವುಗಳನ್ನು ಅನುಸರಿಸಬೇಕು. ಅಂದಾಗ ಮಕ್ಕಳು ನಮ್ಮನ್ನು ನೋಡಿ ಕಲಿಯುತ್ತಾರೆ ಎಂದರು.
ನರಹರಿ ಅವತಾರ ವಿಷಯ ಕುರಿತು ಡಾ|ವೆಂಕಟ ನರಸಿಂಹಾಚಾರ್ಯ ಜೋಶಿ ಮಾತನಾಡಿ,ಹರಿದಾಸರು ಪರಿಪರಿಯಾಗಿ ಭಕ್ತಿ ಪರವಾಗಿ ಹಾಡಿದ ಸಾಹಿತ್ಯವೇ ದಾಸ ಸಾಹಿತ್ಯವಾಗಿದೆ ಎಂದರು.
ಇದನ್ನೂ ಓದಿ:ಅಲೆಮಾರಿಗಳಿಗೆ ಸರ್ಕಾರಿ ಸೌಲಭ್ಯ ಮರೀಚಿಕೆ
ವಿದ್ವಾನ್ ಗೋವಿಂದ ವಿಠಲರಾವ್ ನವಲಗುಂದ ಮಾತನಾಡಿ, ಮನುಷ್ಯರಲ್ಲಿ ನರ ಮತ್ತು ಪಶು ಎರಡು ಸ್ವಭಾವ ಗುಣಗಳಿರುತ್ತವೆ. ಈಗ ಎಲ್ಲರೂ ಹೆಚ್ಚು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದರು. ಸಾನಿಧ್ಯ ವಹಿಸಿದ್ದ ಹುಬ್ಬಳ್ಳಿಯ ವಿಶ್ವಭಾರತಿ ವೇದಪೀಠದ ಅಧ್ಯಕ್ಷ ಡಾ| ಸಮೀರಾಚಾರ್ಯ ಕಂಠಪಲ್ಲಿ ಮಾತನಾಡಿದರು.
ಸದಾನಂದ ಶಿವಳ್ಳಿ, ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎಸ್.ಬಿ.ಗುತ್ತಲ ಇದ್ದರು. ಪ್ರಕಾಶಎಸ್. ಉಡಿಕೇರಿ ಸ್ವಾಗತಿಸಿದರು. ಶಿವಾನಂದ ಭಾವಿಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸತೀಶ ತುರುಮರಿ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್.ಬಿ. ಗಮನಗಟ್ಟಿ, ಶ್ರೀಧರ ಕುಲಕರ್ಣಿ ಸೇರಿದಂತೆ ಮಹಿಳಾ ಮಂಡಳದ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ