ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Team Udayavani, Mar 7, 2022, 6:07 PM IST

ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಧಾರವಾಡ: ಕೋವಿಡ್‌-19 ಕಾರಣದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಗಳ ನಡುವೆಯೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯರಾದ ಭಾರತಿ ಶಾನಭಾಗ ಹೇಳಿದರು.

ಜೆಎಸ್ಸೆಸ್‌ ಆರ್‌.ಎಸ್‌ ಹುಕ್ಕೇರಿಕರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ಪ್ರತಿಭಾ ಪರೀಕ್ಷೆ ಹಾಗೂ ವಿಜ್ಞಾನ ಪ್ರತಿಭಾ ಪರೀಕ್ಷೆಗಳಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಪಠ್ಯದ ಜತೆ ಜತೆಗೆ ಸಹಪಠ್ಯ ಚಟುವಟಿಕೆಗಳ ವಿವಿಧ ಸ್ಪರ್ಧೆ ಹಾಗೂ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಇವು ವಿದ್ಯಾರ್ಥಿಗಳ ಸೃಜನಶೀಲತೆಯ ಪ್ರತೀಕ ಎಂದರು. ಸಂಯೋಜಕ ಡಾ| ಜಿ.ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಶ್ರಮ-ಆಸಕ್ತಿಯಿಂದ ಪ್ರತಿವರ್ಷವೂ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ಮಹಾವಿದ್ಯಾಲಯದ ಸಾಧನೆ ಏರುಮುಖದಲ್ಲಿ ಸಾಗುತ್ತಿದೆ. ಅದಕ್ಕೆ ಆಡಳಿತ ಮಂಡಳಿ ಸಹಕಾರವೂ ತುಂಬಾ ಶ್ಲಾಘನೀಯವಾದುದು ಎಂದು ಹೇಳಿದರು.

ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ, ಮಾರ್ಗದರ್ಶಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ಡಾ| ಶಿವಾನಂದ ಟವಳಿ ಅವರಿಗೆ ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಹ ಮಾರ್ಗದರ್ಶಿ ಉಪನ್ಯಾಸಕ ವೀರೇಂದ್ರಕುಮಾರ ಎಂ.ಎಸ್‌. ಅವರಿಗೆ ಗೌರವಿಸಲಾಯಿತು. ವಿಜ್ಞಾನ ಪ್ರತಿಭಾ ಪರೀಕ್ಷೆಯನ್ನು ಸಂಘಟಿಸಿ ರಾಜ್ಯ ರ್‍ಯಾಂಕ್‌ ಪಡೆಯುವಂತೆ ಪ್ರೇರೇಪಿಸಿದ ಮಾರ್ಗದರ್ಶಿ ಉಪನ್ಯಾಸಕಿ ಡಾ| ವಿಜಯಲಕ್ಷ್ಮೀ ದಂಡಿನ ಅವರಿಗೆ ರಾಜ್ಯಮಟ್ಟದ ಉತ್ತಮ ಸಂಘಟಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹ ಮಾರ್ಗದರ್ಶಿ ಉಪನ್ಯಾಸಕಿ ವಿಜಯಲಕ್ಷ್ಮೀ ಬೆಟಗೇರಿ ಹಾಗೂ ಸೌಭಾಗ್ಯವತಿ ಮೆಣಶಿ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಸಾಧನೆಗೆ ಕಾರಣೀಕರ್ತ ಉಪನ್ಯಾಸಕರನ್ನು ಮತ್ತು ರ್‍ಯಾಂಕ್‌ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ, ವಿತ್ತಾಧಿಕಾರಿ ಡಾ| ಅಜಿತಪ್ರಸಾದ ಹಾಗೂ ಅಭಿವೃದ್ಧಿ ಅಧಿಕಾರಿ ಡಾ| ಸೂರಜ ಜೈನ ಅಭಿನಂದಿಸಿದ್ದಾರೆ. ಕನ್ನಡ ವಿಭಾಗ ಮುಖ್ಯಸ್ಥ ಡಾ| ಗೋವಿಂದರಾಜ ತಳಕೋಡ ಪ್ರಾಸ್ತಾವಿಕ ಮಾತನಾಡಿದರು. ಡಾ| ಶಿವಾನಂದ ಟವಳಿ ನಿರೂಪಿಸಿದರು. ಡಾ| ಸಂಗಯ್ಯ ಶಿವಪ್ಪಯ್ಯನಮಠ ಸ್ವಾಗತಿಸಿದರು. ಡಾ| ವಿಜಯಲಕ್ಷ್ಮೀ ದಂಡಿನ ವಂದಿಸಿದರು.

ಫಲಿತಾಂಶ ಪ್ರಕಟ
120 ವಿದ್ಯಾರ್ಥಿಗಳು ಕನ್ನಡ ಪ್ರತಿಭಾ ಪರೀಕ್ಷೆಗೆ ಹಾಜರಾಗಿದ್ದು, ರಾಜ್ಯಕ್ಕೆ ಮೂರು ರ್‍ಯಾಂಕ್‌ಗಳು ಬಂದಿವೆ. ವೀಣಾ ಗೌಡಪ್ಪಗೌಡ ದ್ವಿತೀಯ ಹಾಗೂ ಸ್ನೇಹಾ ಬಾಲರೆಡ್ಡಿ, ಸಾಕ್ಷಿ ಹಿರೇಮಠ ತೃತೀಯ ರ್‍ಯಾಂಕ್‌ ಪಡೆದಿದ್ದಾರೆ. ಇದಲ್ಲದೇ 5 ವಿದ್ಯಾರ್ಥಿಗಳು ಜಿಲ್ಲಾ ರ್‍ಯಾಂಕ್‌, 4 ವಿದ್ಯಾರ್ಥಿಗಳು ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದು, ಝಾಖೀಯಾ ಶಿರಹಟ್ಟಿ ರಾಜ್ಯಮಟ್ಟದಲ್ಲಿ 4ನೇ ರ್‍ಯಾಂಕ್‌ ಪಡೆದಿದ್ದಾಳೆ. ಇಬ್ಬರು ಜಿಲ್ಲಾ ರ್‍ಯಾಂಕ್‌, ಒಬ್ಬ ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.

 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.