ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Team Udayavani, Mar 7, 2022, 6:07 PM IST

ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಧಾರವಾಡ: ಕೋವಿಡ್‌-19 ಕಾರಣದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಗಳ ನಡುವೆಯೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯರಾದ ಭಾರತಿ ಶಾನಭಾಗ ಹೇಳಿದರು.

ಜೆಎಸ್ಸೆಸ್‌ ಆರ್‌.ಎಸ್‌ ಹುಕ್ಕೇರಿಕರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ಪ್ರತಿಭಾ ಪರೀಕ್ಷೆ ಹಾಗೂ ವಿಜ್ಞಾನ ಪ್ರತಿಭಾ ಪರೀಕ್ಷೆಗಳಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಪಠ್ಯದ ಜತೆ ಜತೆಗೆ ಸಹಪಠ್ಯ ಚಟುವಟಿಕೆಗಳ ವಿವಿಧ ಸ್ಪರ್ಧೆ ಹಾಗೂ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಇವು ವಿದ್ಯಾರ್ಥಿಗಳ ಸೃಜನಶೀಲತೆಯ ಪ್ರತೀಕ ಎಂದರು. ಸಂಯೋಜಕ ಡಾ| ಜಿ.ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಶ್ರಮ-ಆಸಕ್ತಿಯಿಂದ ಪ್ರತಿವರ್ಷವೂ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ಮಹಾವಿದ್ಯಾಲಯದ ಸಾಧನೆ ಏರುಮುಖದಲ್ಲಿ ಸಾಗುತ್ತಿದೆ. ಅದಕ್ಕೆ ಆಡಳಿತ ಮಂಡಳಿ ಸಹಕಾರವೂ ತುಂಬಾ ಶ್ಲಾಘನೀಯವಾದುದು ಎಂದು ಹೇಳಿದರು.

ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ, ಮಾರ್ಗದರ್ಶಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ಡಾ| ಶಿವಾನಂದ ಟವಳಿ ಅವರಿಗೆ ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಹ ಮಾರ್ಗದರ್ಶಿ ಉಪನ್ಯಾಸಕ ವೀರೇಂದ್ರಕುಮಾರ ಎಂ.ಎಸ್‌. ಅವರಿಗೆ ಗೌರವಿಸಲಾಯಿತು. ವಿಜ್ಞಾನ ಪ್ರತಿಭಾ ಪರೀಕ್ಷೆಯನ್ನು ಸಂಘಟಿಸಿ ರಾಜ್ಯ ರ್‍ಯಾಂಕ್‌ ಪಡೆಯುವಂತೆ ಪ್ರೇರೇಪಿಸಿದ ಮಾರ್ಗದರ್ಶಿ ಉಪನ್ಯಾಸಕಿ ಡಾ| ವಿಜಯಲಕ್ಷ್ಮೀ ದಂಡಿನ ಅವರಿಗೆ ರಾಜ್ಯಮಟ್ಟದ ಉತ್ತಮ ಸಂಘಟಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹ ಮಾರ್ಗದರ್ಶಿ ಉಪನ್ಯಾಸಕಿ ವಿಜಯಲಕ್ಷ್ಮೀ ಬೆಟಗೇರಿ ಹಾಗೂ ಸೌಭಾಗ್ಯವತಿ ಮೆಣಶಿ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಸಾಧನೆಗೆ ಕಾರಣೀಕರ್ತ ಉಪನ್ಯಾಸಕರನ್ನು ಮತ್ತು ರ್‍ಯಾಂಕ್‌ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ, ವಿತ್ತಾಧಿಕಾರಿ ಡಾ| ಅಜಿತಪ್ರಸಾದ ಹಾಗೂ ಅಭಿವೃದ್ಧಿ ಅಧಿಕಾರಿ ಡಾ| ಸೂರಜ ಜೈನ ಅಭಿನಂದಿಸಿದ್ದಾರೆ. ಕನ್ನಡ ವಿಭಾಗ ಮುಖ್ಯಸ್ಥ ಡಾ| ಗೋವಿಂದರಾಜ ತಳಕೋಡ ಪ್ರಾಸ್ತಾವಿಕ ಮಾತನಾಡಿದರು. ಡಾ| ಶಿವಾನಂದ ಟವಳಿ ನಿರೂಪಿಸಿದರು. ಡಾ| ಸಂಗಯ್ಯ ಶಿವಪ್ಪಯ್ಯನಮಠ ಸ್ವಾಗತಿಸಿದರು. ಡಾ| ವಿಜಯಲಕ್ಷ್ಮೀ ದಂಡಿನ ವಂದಿಸಿದರು.

ಫಲಿತಾಂಶ ಪ್ರಕಟ
120 ವಿದ್ಯಾರ್ಥಿಗಳು ಕನ್ನಡ ಪ್ರತಿಭಾ ಪರೀಕ್ಷೆಗೆ ಹಾಜರಾಗಿದ್ದು, ರಾಜ್ಯಕ್ಕೆ ಮೂರು ರ್‍ಯಾಂಕ್‌ಗಳು ಬಂದಿವೆ. ವೀಣಾ ಗೌಡಪ್ಪಗೌಡ ದ್ವಿತೀಯ ಹಾಗೂ ಸ್ನೇಹಾ ಬಾಲರೆಡ್ಡಿ, ಸಾಕ್ಷಿ ಹಿರೇಮಠ ತೃತೀಯ ರ್‍ಯಾಂಕ್‌ ಪಡೆದಿದ್ದಾರೆ. ಇದಲ್ಲದೇ 5 ವಿದ್ಯಾರ್ಥಿಗಳು ಜಿಲ್ಲಾ ರ್‍ಯಾಂಕ್‌, 4 ವಿದ್ಯಾರ್ಥಿಗಳು ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದು, ಝಾಖೀಯಾ ಶಿರಹಟ್ಟಿ ರಾಜ್ಯಮಟ್ಟದಲ್ಲಿ 4ನೇ ರ್‍ಯಾಂಕ್‌ ಪಡೆದಿದ್ದಾಳೆ. ಇಬ್ಬರು ಜಿಲ್ಲಾ ರ್‍ಯಾಂಕ್‌, ಒಬ್ಬ ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.