ನಾಳೆಯಿಂದ ನಿತ್ಯವಚನೋತ್ಸವ


Team Udayavani, Jul 23, 2017, 11:54 AM IST

hub4.jpg

ಧಾರವಾಡ: ಬಸವ ಕೇಂದ್ರ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿರುವ ನಿತ್ಯ ವಚನೋತ್ಸವ ಜು. 24ರಿಂದ ಆರಂಭಗೊಳ್ಳಲಿದ್ದು, ನಗರದ 15 ಬಡಾವಣೆಯಲ್ಲಿ ಆ. 20ರ ವರೆಗೆ ನಡೆಯಲಿದೆ ಎಂದು ಸಾಹಿತಿ ಡಾ| ವೀರಣ್ಣ ರಾಜೂರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  

24ರಂದು ಸಂಜೆ 5:00 ಗಂಟೆಗೆ ಮುರುಘಾಮಠದಲ್ಲಿ ನಿತ್ಯ ವಚನೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಚಾಲನೆ ನೀಡಲಿದ್ದು, ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಚನ ಚಿಂತನೆಗಾಗಿ ಆಯ್ದುಕೊಂಡ ವಚನ ಪರಿಮಳ ಭಾಗ-2 ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. 

ವಚನೋತ್ಸವ ಕಾರ್ಯಕ್ರಮದಲ್ಲಿ 95 ಸಂಚಾಲಕರ ನೇತೃತ್ವದಲ್ಲಿ 600ಕ್ಕೂ ಅಧಿಕ ಮನೆಗಳಲ್ಲಿ ಏಕಕಾಲಕ್ಕೆ ವಚನ ವಿಶ್ಲೇಷಣೆ ಹಾಗೂ ಪ್ರತಿ ರವಿವಾರ ಸಾಮೂಹಿಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಈ ಬಾರಿ ಮಕ್ಕಳಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. 

ಮಕ್ಕಳಿಗೆ ವಚನ ಲೇಖನ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಲಾಗುವುದು. ಶಾಲಾ ಮಕ್ಕಳಿಗಾಗಿ ಬಸವಾದಿ ಶರಣ-ಶರಣೆಯರ ರೂಪಕ ಪ್ರದರ್ಶನ, ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. ಗ್ರಾಮಾಂತರ ಪ್ರದೇಶದಲ್ಲಿ ಇಷ್ಟಲಿಂಗ ಧಾರಣೆ ಹಾಗೂ ಬಸವತತ್ವ ಸಂದೇಶ ಸಾರುವ ಕಾರ್ಯಕ್ರಮ ನಡೆಯಲಿದೆ.

ಬಸವ ಪಂಚಮಿ ನಿಮಿತ್ತ ಜು. 27ರಂದು ಬೆಳಗ್ಗೆ 10:00 ಗಂಟೆಗೆ ಬುದ್ಧರಕ್ಕಿತ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಲು, ಉಂಡಿ ವಿತರಣೆ ಮಾಡಲಾಗುವುದು ಎಂದು ಹೇಳಿದರು. ಜು. 30ರಂದು ಬೆಳಗ್ಗೆ 10:00 ಗಂಟೆಗೆ ನಗರದ ಆರ್‌ಎಲ್‌ಎಸ್‌ ಶಾಲೆಯಲ್ಲಿ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ, ಬರೆಯುವ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ನಡೆಯಲಿದೆ.

ಅಂದು ಬೆಳಗ್ಗೆ 10:30 ಗಂಟೆಗೆ ಚರಂತಿಮಠ ಗಾರ್ಡನ್‌ನ ಶ್ರೀ ಬನಶಂಕರಿ ಭವನದಲ್ಲಿ, ನಾರಾಯಣ ಹೃದಯಾಲಯದಲ್ಲಿ ವೈದ್ಯರಿಂದ ಸಾರ್ವಜನಿಕರಿಗೆ ಹೃದಯ ತಪಾಸಣೆ, ರಕ್ತದೊತ್ತಡ, ರಕ್ತ ತಪಾಸಣೆ, ಇಸಿಜಿ ಮತ್ತು ಇಕೋ ತಪಾಸಣೆ ಶಿಬಿರ ಜರುಗಲಿದೆ ಎಂದು ವಿವರಿಸಿದರು.

ಆ. 6ರಂದು ಮಧ್ಯಾಹ್ನ 3:30 ಗಂಟೆಗೆ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುತ್ಛಯ ಭವನದಲ್ಲಿ 1ರಿಂದ 7ನೇ ತರಗತಿಯ ಮಕ್ಕಳಿಗಾಗಿ ಬಸವಾದಿ ಶರಣ-ಶರಣೆಯರ ರೂಪಕಗಳು, ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. ವೇಷಭೂಷಣ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಜು. 30 ರೊಳಗಾಗಿ ಹೆಸರು ನೋಂದಾಯಿಸಬೇಕು.

ಆ. 7ರಂದು ಬೆಳಗ್ಗೆ 10:00 ಗಂಟೆಗೆ ಹೆಬ್ಬಳ್ಳಿ ಗ್ರಾಮದ ಕಲ್ಮೇಶ್ವರ ದೇವಸ್ಥಾನ ಆವರಣದಲ್ಲಿ ಇಷ್ಟಲಿಂಗ ದೀûಾ ಕಾರ್ಯಕ್ರಮ, ಸಹಜ ಶಿವಯೋಗ ಕಾರ್ಯಕ್ರಮ ಜರುಗಲಿದೆ. ಆ. 13ರಂದು ಸಂಜೆ 5:00 ಗಂಟೆಗೆ ಜಯನಗರದಲ್ಲಿ ಶರಣ ಸಂಗಮ ನಡೆಯಲಿದ್ದು, ವಿಶೇಷ ಉಪನ್ಯಾಸ ಹಾಗೂ ಅನುಭಾವಗೋಷ್ಠಿ ಜರುಗಲಿದೆ.

ಆ. 20ರಂದು ಸಂಜೆ 4:00 ಗಂಟೆಗೆ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ವಚನೋತ್ಸವದ ಸಮಾರೋಪ ಸಮಾರಂಭ ಜರುಗಲಿದೆ ಎಂದರು. ಹೆಚ್ಚಿನ ಮಾಹಿತಿಗೆ ಮಲ್ಲಿಕಾರ್ಜುನ ನಡಕಟ್ಟಿ (9480323411), ಶಂಕ್ರಪ್ಪ ಕೋರಿಶೆಟ್ಟಿ(8892789392), ಸುಲೋಚನಮ್ಮ ಲಕಮನಹಳ್ಳಿ(9611685027), ಶಾರದಾ ಕುಮಾರಮಠ (9741164699) ಅವರನ್ನು ಸಂಪರ್ಕಿಸಬಹುದು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಶಿವಣ್ಣ ಶರಣವರ, ಮಲ್ಲಿಕಾರ್ಜುನ ನಡಕಟ್ಟಿ, ಶಿವಶರಣ ಕಲಬಶೆಟ್ಟರ, ಉಮೇಶ ಕಟಗಿ, ಶಿವಾನಂದ ಲೋಲೆನವರ ಇತರರಿದ್ದರು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.