ಕಬ್ಬಿನ ಬಾಕಿ ಹಣ ಪಾವತಿಸಲು ಡಿಸಿ ಸೂಚನೆ 


Team Udayavani, Jun 30, 2018, 4:51 PM IST

30-june-19.jpg

ಬೆಳಗಾವಿ: 2017-18ನೇ ಸಾಲಿನಲ್ಲಿ ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ತಕ್ಷಣವೇ ಎಫ್‌ಆರ್‌ಪಿ ಪ್ರಕಾರ ರೈತರಿಗೆ ಕಬ್ಬಿನ ಬಿಲ್‌ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್‌. ಸೂಚನೆ ನೀಡಿದರು.  ಕಬ್ಬಿನ ಬಿಲ್‌ ಬಾಕಿ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಕ್ಕರೆ ಕಾರ್ಖಾನೆಗಳ ಪ್ರತಿನಿ ಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈಗಾಗಲೇ ಜೂನ್‌ 6, 2018ರಂದು ಒಂದು ಸುತ್ತಿನ ಸಭೆ ನಡೆಸಿ ಬಾಕಿ ಹಣ ಪಾವತಿಸುವಂತೆ ಸೂಚನೆ ನೀಡಲಾಗಿತ್ತು. ಅದಾದ ಬಳಿಕ ಅನೇಕ ಕಾರ್ಖಾನೆಗಳು ಬಾಕಿ ಹಣ ಪಾವತಿಸಿವೆ ಎಂದರು.

ಕಾರ್ಖಾನೆಗಳಿಗೆ ಕಬ್ಬು ಪೂರೈಸಿರುವ ರೈತರು ಸಂಕಷ್ಟದಲ್ಲಿದ್ದು, ಕಾರ್ಖಾನೆಗಳು ಇದನ್ನು ಅರಿತು ಬಾಕಿ ಹಣ ಪಾವತಿಸಬೇಕು. ಇಲ್ಲದಿದ್ದರೆ ಬಾಕಿ ಹಣ ವಸೂಲಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದು ತಿಳಿಸಿದರು.

43,998 ಲಕ್ಷ ರೂ. ಬಾಕಿ ಮೊತ್ತ ಪಾವತಿ: ಜಿಲ್ಲೆಯ 17 ಸಕ್ಕರೆ ಕಾರ್ಖಾನೆಗಳು 6-6-2018ರವರೆಗೆ ಒಟ್ಟು 56,898 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದವು. ಜಿಲ್ಲಾಧಿಕಾರಿ ಎಸ್‌.ಜಿಯಾವುಲ್ಲಾ 6-06-2018ರಂದು ಕಾರ್ಖಾನೆ ಪ್ರತಿನಿ ಗಳು ಹಾಗೂ ರೈತ ಮುಖಂಡರ ಸಭೆ ನಡೆಸಿ, ಬಾಕಿ ಪಾವತಿಗೆ ಗಡುವು ನೀಡಿದ್ದರು. ಇದಾದ ಬಳಿಕ ಅನೇಕ ಕಾರ್ಖಾನೆಗಳು ಕಬ್ಬಿನ ಬಾಕಿ ಬಿಲ್‌ ಪಾವತಿಸುವ ಪ್ರಕ್ರಿಯೆ ಆರಂಭಿಸಿದ್ದು, 17 ಕಾರ್ಖಾನೆಗಳು ಇದುವರೆಗೆ ಒಟ್ಟು 43,998 ಲಕ್ಷ ರೂ. ಬಾಕಿ ಪಾವತಿಸಿವೆ. ಬಾಕಿ ಉಳಿದಿರುವ 12,900 ಲಕ್ಷ ರೂ. ಕಾರ್ಖಾನೆಗಳು ಕೇಳಿರುವ ಕಾಲಮಿತಿಯೊಳಗೆ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾಲಮಿತಿಯಲ್ಲಿ ಪಾವತಿಸಿ: ಕಬ್ಬು ಅಭಿವೃದ್ಧಿ ಆಯುಕ್ತಾಲಯವು ಬಾಕಿ ಉಳಿಸಿಕೊಂಡಿರುವ ಜಿಲ್ಲೆಯ 17 ಕಾರ್ಖಾನೆಗಳಿಗೆ ನೋಟಿಸ್‌ ನೀಡಿತ್ತು. ಈ 17 ಕಾರ್ಖಾನೆಗಳ ಪೈಕಿ ಕೆಲವು ಕಾರ್ಖಾನೆಗಳು ಈಗಾಗಲೇ ಎಫ್‌ಆರ್‌ಪಿ ಪ್ರಕಾರ ಬಾಕಿ ಬಿಲ್‌ ಪಾವತಿಸಿವೆ. ಇನ್ನುಳಿದ ಕಾರ್ಖಾನೆಗಳು ತಾವು ಕೇಳಿರುವ ಕಾಲಾವಕಾಶದ ಮಿತಿಯೊಳಗೆ ಬಾಕಿ ಹಣ ಪಾವತಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಕಾರ್ಖಾನೆಗಳ ಪ್ರತಿನಿಧಿಗಳು, ಈಗಾಗಲೇ ರೈತರಿಗೆ ಬಾಕಿ ಹಣ ಪಾವತಿಸುವ ಪ್ರಕ್ರಿಯೆ ಆರಂಭಿಸಿದ್ದು, ಕಾಲಮಿತಿಯಲ್ಲಿ ಹಣ ಪಾವತಿಸುವುದಾಗಿ ಹೇಳಿದರು. 

ಮುನವಳ್ಳಿಯ ರೇಣುಕಾ ಶುಗರ್ ಪ್ರತಿನಿಧಿ ಮಾತನಾಡಿ, ಕಳೆದ ಸಭೆಯ ಬಳಿಕ ಇದುವರೆಗೆ 64 ಕೋಟಿ ರೂ. ಬಾಕಿ ಹಣ ಪಾವತಿಸಿದ್ದು, ಉಳಿದ ಹಣ ಪಾವತಿಗೆ 15 ದಿನಗಳ ಕಾಲಾವಕಾಶ ಕೋರಿದರು. ಅದೇ ರೀತಿ ಹಾಲಸಿದ್ಧನಾಥ ಕಾರ್ಖಾನೆಯ ಪ್ರತಿನಿಧಿ ಎಂಟು ದಿನದಲ್ಲಿ ಬಾಕಿ ಪಾವತಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ರೇಣುಕಾ ಶುಗರ್, ಕೊಕಟನೂರ; ಸೋಮೇಶ್ವರ ಸಕ್ಕರೆ ಕಾರ್ಖಾನೆ, ಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ, ಶಿರಗುಪ್ಪಿ ಶುಗರ್, ಕೊಳವಿಯ ಗೋಕಾಕ ಶುಗರ್ ಸೇರಿದಂತೆ ಕೆಲವು ಕಾರ್ಖಾನೆಗಳ ಪ್ರತಿನಿ ಧಿಗಳು ಬಾಕಿ ಹಣವನ್ನು ಈಗಾಗಲೇ ಪಾವತಿಸಲಾಗಿದೆ ಹೇಳಿದರು. ಅಥಣಿ ಫಾರ್ಮರ್ಸ್‌ ಲಿಮಿಟೆಡ್‌, ಉಗಾರ್‌ ಶುಗರ್, ಸತೀಶ್‌ ಶುಗರ್, ಘಟಪ್ರಭಾ ಎಸ್‌ ಎಸ್‌ಕೆ ಲಿಮಿಟೆಡ್‌, ಮಲಪ್ರಭಾ ಎಸ್‌ಎಸ್‌ಕೆ ಲಿಮಿಟೆಡ್‌, ಬೆಳಗಾವಿ ಶುಗರ್ ಕಾರ್ಖಾನೆಯ ಪ್ರತಿನಿಧಿಗಳು 8ರಿಂದ 15 ದಿನದೊಳಗೆ ಬಾಕಿ ಹಣ ಪಾವತಿಸುವುದಾಗಿ ತಿಳಿಸಿದರು. ಜಿಪಂ ಸಿಇಒ ರಾಮಚಂದ್ರನ್‌ ಆರ್‌., ಮೊಖಾಶಿ, ಸೈಯದ್‌ ಆಫ್ರಿನ್‌ಬಾನು ಬಳ್ಳಾರಿ ಇದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.