ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಡಿಸಿ ಭೇಟಿ
Team Udayavani, Jun 11, 2019, 12:16 PM IST
ಧಾರವಾಡ: ನೂತನವಾಗಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮ ಶಾಲೆಗಳಿಗೆ ಡಿಸಿ ದೀಪಾ ಚೋಳನ್ ಭೇಟಿ ನೀಡಿ ಪರಿಶೀಲಿಸಿದರು.
ಧಾರವಾಡ: ಕರ್ನಾಟಕ ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಸೋಮವಾರ ಬೆಳಗ್ಗೆ ಡಿಸಿ ದೀಪಾ ಚೋಳನ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಆಲೂರು ವೆಂಕಟರಾವ್ ವೃತ್ತದ ಮಹಿಳಾ ಶಿಕ್ಷಕಿಯರ ತರಬೇತಿ ಶಾಲೆ ಆವರಣದಲ್ಲಿರುವ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ, ಒಂದನೇ ವರ್ಗಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರ ಪಾಠ, ಪಠ್ಯ ಹಾಗೂ ದಿನಚರಿ ಕುರಿತು ವಿಚಾರಿಸಿದರು. ಶಾಲಾ ಪ್ರಧಾನ ಗುರುಮಾತೆ ಎಸ್.ಎಂ. ಖಾನ್ ಹಾಗೂ ಸಹ ಶಿಕ್ಷಕಿಯರಾದ ಬಿ.ಎಸ್. ಯರಗಟ್ಟಿ ಮತ್ತು ಕ್ಯೂ.ಎ. ತರಗಾರ ಮಾಹಿತಿ ನೀಡಿದರು.
ನಂತರ ಕಮಲಾಪುರದ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂ.4ರಲ್ಲಿ ಆರಂಭವಾಗಿರುವ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಮತ್ತು ಪಾಲಕರಿಂದ ಶಾಲೆ ಕುರಿತು ಮಾಹಿತಿ ಪಡೆದರು. ಪ್ರಧಾನ ಗುರುಮಾತೆ ಎಸ್.ಡಿ. ಇಳಕಲ್ಲ ಹಾಗೂ ಸಹ ಶಿಕ್ಷಕಿ ಆರ್.ಎಸ್. ಸಕ್ಕರನಾಯ್ಕರ ವಿದ್ಯಾರ್ಥಿಗಳ ಪ್ರವೇಶ, ದಾಖಲಾತಿ ಕುರಿತು ವಿವರ ನೀಡಿದರು.
ಪರಿಶೀಲನೆ ನಂತರ ಡಿಸಿ ದೀಪಾ ಮಾತನಾಡಿ, ಆಂಗ್ಲ ಮಾಧ್ಯಮಕ್ಕೆ ಒಂದನೇ ವರ್ಗಕ್ಕೆ ಪ್ರವೇಶ ಪಡೆದ ಮಕ್ಕಳಿಗೆ ಪಠ್ಯಪುಸ್ತಕ ಬರುವವರೆಗೆ ಬೇರೆ ಪುಸ್ತಕಗಳನ್ನು ಬಳಸಿ ಸಾಮಾನ್ಯ ಮಾಹಿತಿ ನೀಡಬೇಕು. ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆಯುವ ಮಕ್ಕಳ ಪಠ್ಯಪುಸ್ತಕವು ಕನ್ನಡ ಮತ್ತು ಆಂಗ್ಲ ಭಾಷೆ ಸೇರಿ ದ್ವಿಭಾಷೆಯಲ್ಲಿ ಇರುತ್ತದೆ. ಮಕ್ಕಳಿಗೆ ಓದಿಸಲು, ಬರೆಸಲು ಇದು ಪಾಲಕರಿಗೆ ನೆರವಾಗುತ್ತದೆ. ಈ ಕುರಿತು ಪಾಲಕರಿಗೆ ತಿಳಿವಳಿಕೆ ನೀಡಬೇಕು ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
1ನೇ ವರ್ಗಕ್ಕೆ ವಿದ್ಯಾರ್ಥಿಗಳ ಕಲಿಕೆಗಾಗಿ ಸರಳ ವಿಷಯವಿರುವ ಕನ್ನಡ ಅಥವಾ ಉರ್ದು(ಉರ್ದು ಶಾಲೆಗಳಲ್ಲಿ ಆರಂಭವಾಗಿರುವ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗಾಗಿ), ಪರಿಸರ ಅಧ್ಯಯನ, ಸರಳ ಗಣಿತ ಮತ್ತು ಇಂಗ್ಲಿಷ್ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದೆ. ಒಟ್ಟು 4 ಪಠ್ಯಗಳಿದ್ದು, ಬೋಧಿಸಲು ಸಮರ್ಥ ಶಿಕ್ಷಕರನ್ನು ನೇಮಿಸಲಾಗಿದೆ. ನೂತನ ಆಂಗ್ಲ ಮಾಧ್ಯಮ ಶಾಲೆಗಳನ್ನು ಈಗಿರುವ ಪ್ರಾಥಮಿಕ ಶಾಲೆಗಳಲ್ಲಿಯೇ ಆರಂಭಿಸಲಾಗಿದೆ. ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. ಆಂಗ್ಲ ಭಾಷೆ ಕಲಿಯಲು ಆಸಕ್ತಿಯಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ. ಎಲ್ಲ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬೂಟು, ಸಾಕ್ಸ್ ನೀಡಲಾಗುತ್ತಿದೆ ಎಂದು ದೀಪಾ ತಿಳಿಸಿದರು.
ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ಉಪನಿರ್ದೇಶಕ ಕಚೇರಿ ಅಧಿಕಾರಿ ಶಿವಲೀಲಾ ಕಳಸನ್ನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ