ಅತಿಕ್ರಮಣ ತೆರವು ಕಾರ್ಯಾರಂಭಕ್ಕೆ ಗಡುವು


Team Udayavani, Dec 16, 2019, 10:40 AM IST

huballi-tdy-3

ಹುಬ್ಬಳ್ಳಿ: ಬಿಆರ್‌ಟಿಎಸ್‌ ರಸ್ತೆ ಹಾಗೂ ಕೇಂದ್ರ ರಸ್ತೆ ನಿಧಿಯಡಿ (ಸಿಆರ್‌ಎಫ್‌) ನಿರ್ಮಿಸಲಾದ ರಸ್ತೆಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು 10 ದಿನಗಳಲ್ಲಿ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳಿಗೆ ಗಡುವು ನೀಡಿದರು.

ನಗರದ ಸರ್ಕಿಟ್‌ ಹೌಸ್‌ನಲ್ಲಿ ರವಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅತಿಕ್ರಮಣ ತೆರವಿಗೆ ಎಲ್ಲ ಜನಪ್ರತಿನಿಧಿಗಳು ಬೆಂಬಲಿಸುತ್ತಾರೆ. ಮುಲಾಜಿಲ್ಲದೆ ಅತಿಕ್ರಮಣ ತೆರವು ಮಾಡಬೇಕು. ಅತಿಕ್ರಮಣದಿಂದಾಗಿ ಬಿಆರ್‌ಟಿಎಸ್‌ ಹಾಗೂ ಸಿಆರ್‌ ಎಫ್‌ ರಸ್ತೆಗಳಲ್ಲಿ ಸಂಚಾರ ದುಸ್ತರವಾಗಿದೆ. ಸರಕಾರಿ ಜಾಗ ಅತಿಕ್ರಮಣ ಮಾಡಿಕೊಂಡವರ ಮೇಲೆ ಪೊಲೀಸ್‌ ಇಲಾಖೆ ಸಹಕಾರ ಪಡೆದುಕೊಂಡು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

43 ಕೋಟಿ ವೆಚ್ಚದಲ್ಲಿ ಗೋಕುಲ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡುವ ಅವಶ್ಯಕತೆಯಿಲ್ಲ. ವಿನ್ಯಾಸ ಬದಲಾವಣೆ ಮಾಡಿ. ಫುಟ್‌ಪಾತ್‌ಗೆ ಆದ್ಯತೆ ನೀಡಿ. ಸೈಕಲ್‌ ಪಾತ್‌ಗೆ ವಿರೋಧವಿಲ್ಲ. ಆದರೆ ಯಾವುದೇ ಕಾರಣಕ್ಕೂ ರಸ್ತೆಯ ಅಗಲವನ್ನು ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಎಲ್ಲರೂ ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುವ ಅವಶ್ಯಕತೆಯಿಲ್ಲ. ಆರೋಗ್ಯ ವಿಮಾ ಸೌಲಭ್ಯ ನೀಡುತ್ತಿರುವುದರಿಂದ ಆರೋಗ್ಯ ವಿಮಾ ಸಮಾಜ ಮಾಡುವುದು ಕೇಂದ್ರ ಸರಕಾರದ ಉದ್ದೇಶವಾಗಿದೆ. ಆದ್ದರಿಂದ ವಿಮೆ ಹೊಂದಿದವರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.

ಉಣಕಲ್‌ ಕೆರೆ ಅಭಿವೃದ್ಧಿಯ 3ನೇ ಹಂತದ 45 ಕೋಟಿ ರೂ. ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಿ. ಉಣಕಲ್‌ ಕೆರೆ ದಡದಲ್ಲಿರುವ ದೇವಸ್ಥಾನದ ಸಮೀಪದ ಖಾಸಗಿ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೆರೆಯನ್ನು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಬೇಕು. ಅಲ್ಲಿ ಜಲಸಾಹಸ ಕ್ರೀಡೆಗಳಿಗೆ ಅವಕಾಶ ಕಲ್ಪಿಸಬೇಕಿದೆ ಎಂದರು. ವೈಟ್‌ ಟಾಪಿಂಗ್‌ ರಸ್ತೆಗಳಿಂದ ಕೆಲ ಸಮಸ್ಯೆಗಳು ಉದ್ಭವಿಸುತ್ತಿವೆ. ರಸ್ತೆಗಳ ಎತ್ತರ ಹೆಚ್ಚಾಗುತ್ತಿರುವುದರಿಂದ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಮನೆಗೆ ನೀರು ನುಗ್ಗುವುದೆಂಬ ಭೀತಿ ಜನರಲ್ಲಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಸ್ಮಾರ್ಟ್‌ ಸಿಟಿ ಎಂ.ಡಿ. ಶಕೀಲ ಅಹ್ಮದ್‌, ಎಸ್‌.ಎಚ್‌. ನರೇಗಲ್‌, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮೊದಲಾದವರಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.