ಪ್ರತ್ಯೇಕ ಪಾಲಿಕೆಗಾಗಿ 22ರಿಂದ ಹೋರಾಟಕ್ಕೆ ನಿರ್ಧಾರ

ಧಾರವಾಡಕ್ಕೆ ಮಹತ್ವ ನೀಡದೇ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಬೇಸರದ ಸಂಗತಿ.

Team Udayavani, Feb 16, 2022, 5:53 PM IST

ಪ್ರತ್ಯೇಕ ಪಾಲಿಕೆಗಾಗಿ 22ರಿಂದ ಹೋರಾಟಕ್ಕೆ ನಿರ್ಧಾರ

ಧಾರವಾಡ: ನಗರಕ್ಕೆ ಪ್ರತ್ಯೇಕ ಪಾಲಿಕೆಯ ಹೋರಾಟದ ಮೊದಲ ಹಂತವಾಗಿ ಫೆ. 22ರಂದು ಬೆಳಗ್ಗೆ 10 ಗಂಟೆಗೆ ಡಿಸಿ ಕಚೇರಿ ಎದುರು ಮೌನ ಹಾಗೂ ಸಾಂಕೇತಿಕ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಕವಿಸಂನಲ್ಲಿ ಮಂಗಳವಾರ ಸಂಜೆ ವಿವಿಧ ಸಂಘ-ಸಂಸ್ಥೆಗಳು, ಹಿರಿಯ ನಾಗರಿಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹೋರಾಟದ ರೂಪುರೇಷೆ ಕುರಿತು ಸಮಗ್ರವಾಗಿ ಚರ್ಚಿಸಿ ಫೆ.22ರಿಂದ ಹೋರಾಟ ಆರಂಭಿಸಲು ನಿರ್ಧರಿಸಲಾಯಿತು.

ಸ್ಮಾರ್ಟ್‌ಸಿಟಿ ಬರೀ ಹುಬ್ಬಳ್ಳಿಗೆ ಮಾತ್ರ ಸೀಮಿತವಾಗಿದೆ. ಧಾರವಾಡ ದಿನದಿಂದ ದಿನಕ್ಕೆ ಹಿಂದುಳಿಯುತ್ತಿದೆ. ಜಿಲ್ಲಾ ಕೇಂದ್ರ ಧಾರವಾಡ ಇದ್ದರೂ ಸಹ ಪಾಲಿಕೆ ವಿಷಯದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಾಜಕಾರಣಿಗಳು ಸಹ ಧಾರವಾಡಕ್ಕೆ ಮಹತ್ವ ನೀಡದೇ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಬೇಸರದ ಸಂಗತಿ. ಈ ಕಾರಣದಿಂದಲೇ ಪ್ರತ್ಯೇಕ ಪಾಲಿಕೆ ಬೇಕು ಎಂದು ಸಭೆಯಲ್ಲಿದ್ದವರು ಒತ್ತಾಯಿಸಿದರು.

ಸಭೆಯ ಕುರಿತು ನಿರ್ಣಯಗಳನ್ನು ಮಂಡಿಸಿದ ನ್ಯಾಯವಾದಿ ಬಸವ ಪ್ರಭು ಹೊಸಕೇರಿ, ಪ್ರತ್ಯೇಕ ಪಾಲಿಕೆ ಚಿಂತನೆ-ಹೋರಾಟವು ಹುಬ್ಬಳ್ಳಿ ಅಥವಾ ಅದರ ಅಭಿವೃದ್ಧಿ ವಿರುದ್ಧವಲ್ಲ. ಪ್ರತ್ಯೇಕ ಪಾಲಿಕೆ ಕುರಿತಂತೆ ಕಾನೂನಾತ್ಮಕವಾಗಿ ಚಿಂತನೆ ಮಾಡುವುದು, ಮೊದಲ ಹೋರಾಟವಾಗಿ ಫೆ. 22ರಂದು ಮಂಗಳವಾರ ಡಿಸಿ ಕಚೇರಿ ಎದುರು ಎರಡು ಗಂಟೆ ಮೌನ ಪ್ರತಿಭಟನೆ ಜೊತೆಗೆ ಪ್ರತಿ ಶನಿವಾರ ನಿರ್ದಿಷ್ಟ ಸಮಯಕ್ಕೆ ಹೋರಾಟಗಾರರು ಸೇರಿ ಮುಂದಿನ
ರೂಪುರೇಷೆ ಹಾಕುವುದು. ಸಾರ್ವಜನಿಕರು, ಹೋರಾಟಗಾರರನ್ನು ಒಗ್ಗೂಡಿಸಲು ಆಯಾ ವಾರ್ಡ್‌ಗಳಲ್ಲಿ ಗುಂಪುಗಳ ರಚನೆ, ಹೋರಾಟಕ್ಕೆ ದಿಕ್ಕು ತೋರಿಸಲು ವಾಟ್ಸ್ ಆ್ಯಪ್‌ ಗ್ರುಪ್‌ ಸೇರಿದಂತೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದು ಹಾಗೂ ಹಂತ ಹಂತವಾಗಿ ಮಾಡಬೇಕಾದ ಕಾರ್ಯಗಳ ಬಗ್ಗೆ ಸಭೆ ಮಾಡುವುದನ್ನು ಸ್ಪಷ್ಟಪಡಿಸಿದರು. ಎಸ್‌.ವಿ. ಕುಲಕರ್ಣಿ, ಎಸ್‌.ಬಿ. ದ್ವಾರಪಾಲಕ, ಶಂಕರ ಹಲಗತ್ತಿ, ಮನೋಜ ಪಾಟೀಲ, ಕೆ.ಎಚ್‌. ನಾಯಕ, ವೀರಣ್ಣ ಒಡ್ಡೀನ ಮಾತನಾಡಿದರು.

ಹೋರಾಟಕ್ಕೆ ಸಲಹೆಗಳು: ಕರಬಾಕಿ ಕಟ್ಟದೇ ಧರಣಿ ಮಾಡೋಣ ಎಂದು ಮಲ್ಲಿಕಾರ್ಜುನ ಚಿಕ್ಕಮಠ, ಹೈಕೋರ್ಟ್‌ ಮಾದರಿಯಲ್ಲಿ ಈ ಹೋರಾಟ ನಡೆಯಲಿ ಎಂದು ರಾಜ್ಯ ವಕೀಲರ ಪರಿಷತ್‌ ಸದಸ್ಯ ವಿ.ಡಿ. ಕಾಮರಡ್ಡಿ, ಧಾರವಾಡದ ಪಾಲಿಕೆ ಕಚೇರಿಗೆ ಬೀಗ ಹಾಕೋಣ ಎಂದು ಚನ್ನಬಸ್ಸು ಮಾಳಗಿ, ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕೋಣ ಎಂದು ಮಹಾದೇವ ದೊಡಮನಿ, ಆಡಳಿತದ ದೃಷ್ಟಿಯಿಂದ ಧಾರವಾಡ, ಹಾವೇರಿ, ಗದಗ ಜಿಲ್ಲೆ ಪ್ರತ್ಯೇಕ ಮಾಡಿದಂತೆ ಹುಬ್ಬಳ್ಳಿಯಿಂದ ಧಾರವಾಡ ಸಹ ಪ್ರತ್ಯೇಕ ಮಾಡಲು ಸರ್ಕಾರಕ್ಕೆ ಅವಕಾಶವಿದೆ ಎಂದು ಲಿಂಗರಾಜ ಸರದೇಸಾಯಿ ತಮ್ಮ ಅಭಿಪ್ರಾಯ ಪ್ರತಿಪಾದಿಸಿದರು.

ಕೆಎಂಸಿ ಕಾಯ್ದೆ ಪ್ರಕಾರ 4 ಲಕ್ಷ ಜನಸಂಖ್ಯೆ ಹೊಂದಿದ ನಗರಕ್ಕೆ ಮಹಾನಗರ ಪಾಲಿಕೆಯ ಅರ್ಹತೆ ಇದೆ. ಅದನ್ನು ಧಾರವಾಡ ಹೊಂದಿದೆ. ಸದ್ಯ 29 ಪಾಲಿಕೆ ಸದಸ್ಯರಿದ್ದಾರೆ. ಪ್ರತ್ಯೇಕ ಪಾಲಿಕೆಯಾದರೆ ಇನ್ನಷ್ಟು ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ. ಪ್ರತ್ಯೇಕ ಬಜೆಟ್‌ ಮಂಡಿಸಲು ಅವಕಾಶ ದೊರೆಯಲಿದ್ದು, ಧಾರವಾಡದ ಅಭಿವೃದ್ಧಿ ಸಾಧ್ಯವಾಗಲಿದೆ.
ವೆಂಕಟೇಶ ಮಾಚಕನೂರ,
ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸದಸ್ಯ

ಹುಬ್ಬಳ್ಳಿಯಲ್ಲಿ ಅಧಿಕಾರ, ರಾಜಕೀಯ ಎಲ್ಲವೂ ಕೇಂದ್ರೀಕೃತವಾಗಿದ್ದು ಅವರಿಂದ ಧಾರವಾಡ ಬಿಡಿಸಿಕೊಳ್ಳುವುದು ತುಸು ಕಷ್ಟ. ಆದ್ದರಿಂದ ಪ್ರತ್ಯೇಕ ಪಾಲಿಕೆ ಹೋರಾಟ ಜನಪರ ಚಳವಳಿಯಾಗಬೇಕು. ಈ ಹೋರಾಟಕ್ಕೆ ಧಾರವಾಡದ ಎಲ್ಲ ವಾರ್ಡ್ ಗಳ ಸದಸ್ಯರು, ಜನರ ಬೆಂಬಲ ಸಿಗಬೇಕು.
ಎಂ.ಬಿ. ಕಟ್ಟಿ, ಹೋರಾಟಗಾರ

931 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳೆಲ್ಲವೂ ಹುಬ್ಬಳ್ಳಿಯಲ್ಲಿಯೇ ನಡೆಯುತ್ತಿವೆ. ಶೇ.78 ಅನುದಾನ ಹುಬ್ಬಳ್ಳಿಗೆ ಸೀಮಿತವಾಗಿದ್ದು ಬೇಸರದ ಸಂಗತಿ. ಭೌತಿಕ ಚಳವಳಿ ಜೊತೆಗೆ ಸಾಮಾಜಿಕ ಮಾಧ್ಯಮಗಳ ಮೂಲಕವೂ ಹಕ್ಕು ಪ್ರತಿಪಾದಿಸಬೇಕಿದೆ.
ರವಿ ಮಾಳಿಗೇರ, ಕವಿವಿ ಸಿಂಡಿಕೇಟ್‌ ಸದಸ್ಯ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.