ಪ್ರಧಾನಿ ಮೋದಿಯಿಂದ ಐತಿಹಾಸಿಕ ಪ್ಯಾಕೇಜ್‌ ಘೋಷಣೆ


Team Udayavani, May 15, 2020, 7:26 AM IST

ಪ್ರಧಾನಿ ಮೋದಿಯಿಂದ ಐತಿಹಾಸಿಕ ಪ್ಯಾಕೇಜ್‌ ಘೋಷಣೆ

ಹುಬ್ಬಳ್ಳಿ: ಕೋವಿಡ್ ವೈರಸ್‌ನಿಂದ ಇಡೀ ವಿಶ್ವವೇ ನಲುಗಿ ಮುಂದೇನು ಎಂದು ಬಲಿಷ್ಠ ರಾಷ್ಟ್ರಗಳೇ ಕೈಚಲ್ಲಿ ಕುಳಿತಿರುವ ಸಮಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಐತಿಹಾಸಿಕ ಪ್ಯಾಕೇಜ್‌ ಘೋಷಣೆ ಮಾಡಿರುವುದು ಇಡೀ ಜಗತ್ತೇ ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ.ಗಳ ಘೋಷಣೆ ಎಲ್ಲರನ್ನು ಅಚ್ಚರಿಗೊಳಿಸಿದೆ. ದೇಶದ ಆರ್ಥಿಕ ಬಲವನ್ನು ಪಾತಾಳಕ್ಕೆ ನೂಕಿ ಎದ್ದೇಳದಂತಹ ಪರಿಸ್ಥಿತಿ ನಿರ್ಮಾಣವಾಗಬಹುದೆಂಬ ಹಲವಾರು ಅರ್ಥಶಾಸ್ತ್ರಜ್ಞರ ಭಯ ನಿವಾರಿಸಿ ಮುಂಬರುವ ದಿನಗಳಲ್ಲಿ ಹಿಂದಿಗಿಂತಲೂ ಪ್ರಬಲವಾಗಿ ಆರ್ಥಿಕ ಪ್ರಗತಿಯತ್ತ ದಾಪುಗಾಲು ಹಾಕಿ 21ನೇ ಶತಮಾನವನ್ನು ಭಾರತದ ಶತಮಾನವನ್ನಾಗಿ ಮಾಡಲಿದೆ ಎಂಬ ಮೋದಿಯವರ ಧ್ಯೇಯವಾಕ್ಯ ದೇಶದಾದ್ಯಂತ ಉದ್ದಿಮೆ ಹಾಗೂ ವ್ಯಾಪಾರಸ್ಥರಲ್ಲಿ ಹೊಸ ಸಂಚಲನ ಮೂಡಿಸಿದೆ. “ಅನಿವಾರ್ಯತೆ ಆವಿಷ್ಕಾರದ ತಾಯಿ ‘ (Necessity is the mother of invention ) ಎಂದು ಹೇಳುವಂತೆ ಅತ್ಯಂತ ಭೀಕರ ವಿಷಮ ಪರಿಸ್ಥಿತಿಯನ್ನೇ ಅನುಕೂಲ ಸ್ಥಿತಿಯನ್ನಾಗಿ ಪರಿವರ್ತಿಸಬಲ್ಲ ಈ ವಿಶೇಷ ಆರ್ಥಿಕ ಪ್ಯಾಕೇಜ್‌ ಮೋದಿಯವರಂತಹ ದಿಟ್ಟ ನಾಯಕರಿಂದ ಮಾತ್ರ ಸಾಧ್ಯ.

ದೇಶದ ಇತಿಹಾಸದಲ್ಲಿಯೇ ಇದೊಂದು ದಾಖಲೆಯ ಪ್ಯಾಕೇಜ್‌ ಆಗಿದೆ. ಮೋದಿ ಅವರು ಘೋಷಿಸಿದ ಪ್ಯಾಕೇಜ್‌ ಆಧಾರದ ಮೇಲೆ ಕೇಂದ್ರ ಅರ್ಥಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ ವಲಯವಾರು ಹಣಕಾಸು ಹಂಚಿಕೆ ದೇಶದ ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆದಾರರಿಗೆ ಹೊಸ ಆಶಾಕಿರಣ ಮೂಡಿಸಿದೆ. ಆದಾಯ ತೆರಿಗೆ ಪಾವತಿದಾರರಿಗೆ ಟಿಡಿಎಸ್‌ನಲ್ಲಿ ಶೇ. 25ರಷ್ಟು ವಿನಾಯಿತಿ, ಈಗಾಗಲೇ ಪಾವತಿ ಮಾಡಿದವರಿಗೆ ಕರ ಮರುಪಾವತಿ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳ ಕಾರ್ಮಿಕರ ಆರು ತಿಂಗಳ ಪಿಎಫ್‌ ವಂತಿಕೆಯನ್ನು ಸರ್ಕಾರವೇ ಭರಿಸುವಂತೆ ನೀಡಿದ ಆದೇಶ ದೇಶದ 72 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ. ಸಣ್ಣ ಉದ್ದಿಮೆಗಳಿಗೆ 3 ಲಕ್ಷ ಕೋಟಿ ಅನುದಾನ, ಅತೀ ಸಣ್ಣ ಉದ್ದಿಮೆಗಳಿಗೆ ಅಡಮಾನವಿಲ್ಲದ ಸಾಲ, 200 ಕೋಟಿ ರೂ. ವರೆಗಿನ ಕಾಮಗಾರಿಗಳಿಗೆ ಜಾಗತಿಕ ಟೆಂಡರ್‌ ನಿಷೇಧ, ಕಾರ್ಮಿಕರಿಗೆ ಇಪಿಎಫ್‌ ಮೂಲಕ 2,500 ರೂ. ನೆರವಿನಂತಹ ಕ್ರಮಗಳು ಹಾಗೂ ಸ್ವಾವಲಂಬಿತ ದೇಶ ಆಧಾರಿತ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್‌ ಭಾಗವಾಗಿ ಸಚಿವೆ ನಿರ್ಮಲಾ ಸೀತಾರಾಮನ್‌ ಹಲವಾರು ರೈತ ಹಾಗೂ ಕಾರ್ಮಿಕ ಪರ ಆರ್ಥಿಕ ಸುಧಾರಣೆಗೆ ಕ್ರಮ ಘೋಷಿಸಿದ್ದಾರೆ.

ಇದರನ್ವಯ ಈಗಾಗಲೇ ರೈತರು ಪಡೆದ 4 ಲಕ್ಷ ಕೋಟಿ ರೂ. ಕೃಷಿ ಸಾಲದ ಮೇಲಿನ ಬಡ್ಡಿ ವಿನಾಯಿತಿಯನ್ನು ಮೇ 31ರ ವರೆಗೆ ವಿಸ್ತರಿಸಲು 30,000 ಕೋಟಿ ರೂ., ಬಾಂಡ್‌ ಸಾಲ ಮತ್ತು 2.5 ಲಕ್ಷ ಕೋಟಿ ರಿಯಾಯ್ತಿ ದರದಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಸಾಲ, ಅಂತಾರಾಜ್ಯ ವಲಸೆ ಬಂದ ಕೃಷಿ ಕಾರ್ಮಿಕರಿಗೆ ಅವರು ವಲಸೆ ಬಂದ ಸ್ಥಳದಲ್ಲಿ ನರೇಗಾ ಉದ್ಯೋಗ ಲಭ್ಯತೆ, ಕಾರ್ಮಿಕರ ಕೆಲಸಕ್ಕಾಗಿ ಅಭೂತಪೂರ್ವ ಸುಧಾರಣಾ ಕ್ರಮ, ಕಾರ್ಮಿಕರ ವೇತನದಲ್ಲಿನ ತಾರತಮ್ಯ ನಿವಾರಣೆ, ಕಾರ್ಮಿಕರ ಕೆಲಸ ಕಾರ್ಯಗಳ ಸ್ಥಿತಿಗತಿಗಳಲ್ಲಿ ಸುಧಾರಣೆ, ಕಾರ್ಮಿಕ ರಾಜ್ಯ ವಿಮಾ ವ್ಯವಸ್ಥೆಯಲ್ಲಿ ದೇಶಾದ್ಯಂತ ಒಂದೇ ವ್ಯವಸ್ಥೆ, ಅಂತಾರಾಜ್ಯ ವಲಸೆ ಕಾರ್ಮಿಕರ ಕೆಲಸಕ್ಕೆ 10 ಕೋಟಿ ರೂ. ಯೋಜನೆ, ವಲಸೆ ಕಾರ್ಮಿಕರಿಗೆ ನಗರ ಪ್ರದೇಶಗಳಲ್ಲಿ ಬಾಡಿಗೆ ಮನೆ ಯೋಜನೆ, “ಒನ್‌ ನೇಶನ್‌-ಒನ್‌ ರೇಶನ್‌’ ವಿತರಣೆ ವ್ಯವಸ್ಥೆ ಇನ್ನಿತರರಘೋಷಣೆಗಳನ್ನು ಮಾಡಿದ್ದಾರೆ. ಪ್ರಧಾನಿ ಆಶಯದಂತೆ ದೇಶವನ್ನು ಹೊರದೇಶಗಳ ಮೇಲಿನ ಅವಲಂಬನೆ ತಪ್ಪಿಸಿ ಒಂದು ಸಂಪೂರ್ಣ ಸ್ವಾವಲಂಬಿ ರಾಷ್ಟ್ರವನ್ನಾಗಿ

ಪರಿವರ್ತಿಸುವ ಹಾಗೂ (Local should be vocal) ಎಂಬ ರಾಷ್ಟ್ರ ಕಲ್ಪನೆಯ ರಚನಾತ್ಮಕ ಕ್ರಮಗಳಾಗಿವೆ. 1918ರಲ್ಲಿ ಇಡೀ ವಿಶ್ವವನ್ನೇ ವಿನಾಶದತ್ತ ನೂಕುವಂತಹ ಸ್ಪಾನಿಶ್‌ ಫ್ಲ್ಯೂ ಮಹಾಮಾರಿ ಲಕ್ಷಾಂತರ ಜನರ ಆಹುತಿ ಪಡೆದ ಸಂದರ್ಭ ಒದಗಿದಾಗ ಅಮೆರಿಕಾದ ಆಗಿನ ಅಧ್ಯಕ್ಷ ವುಡ್‌ರೋ ವಿಲ್ಸನ್‌ ಕೈಗೊಂಡ ಅಭೂತಪೂರ್ವ ಆರ್ಥಿಕ ಕ್ರಮಗಳಿಂದ ಮೈ ಕೊಡವಿಕೊಂಡು ಎದ್ದಿತ್ತು ಅಮೆರಿಕಾ. ಕ್ರಮೇಣ ವಿಶ್ವದ ದೊಡ್ಡಣ್ಣನೇ ಆಯಿತು. ನಮ್ಮ ಪ್ರಧಾನಿ ಕೈಗೊಂಡ ಕ್ರಮದಿಂದ ಭಾರತ ದೊಡ್ಡಣ್ಣನಾಗದೆ, ವಿಶ್ವದ ಅಣ್ಣನಾಗಿ ವಿಶ್ವಾಸಗಳಿಸುವುದರಲ್ಲಿ ಸಂದೇಹವೇ ಇಲ್ಲವೆಂದು ಹೇಳಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.