ನ್ಯೂನತೆ ಮಕ್ಕಳಿಗೆ ಪಾಲಕರಿಂದ ವಿಶೇಷ ಆರೈಕೆ ಅಗತ್ಯ


Team Udayavani, Aug 20, 2018, 5:06 PM IST

20-agust-19.jpg

ಹಾನಗಲ್ಲ: ಸಾಮಾನ್ಯ ಮಕ್ಕಳನ್ನು ನೋಡುವ ದೃಷ್ಟಿಕೋನದಂತೆ ಬೆಳವಣಿಗೆಯಲ್ಲಿ ನ್ಯೂನ್ಯತೆ ಹೊಂದಿದ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಕಲಿಸುವ ಮೂಲಕ, ನಮ್ಮಲ್ಲಿರುವ ವಿಚಾರ, ಮೌಲ್ಯಗಳನ್ನು ವಿಭಿನ್ನವಾಗಿ ವಿವಿಧ ರೀತಿಯಿಂದ ಪ್ರೀತಿ ಪೂರಕವಾಗಿ ಹಂಚಬೇಕು ಎಂದು ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತೀರ್ಣಾಧಿಕಾರಿ ಎಸ್‌.ಆನಂದ ಹೇಳಿದರು.

ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆ ಹಾನಗಲ್ಲ ಆಶ್ರಯದಲ್ಲಿ ಶೀಘ್ರ ಮಧ್ಯಸ್ಥಿಕೆ ಹಾಗೂ ಆರಂಭಿಕ ಶಿಕ್ಷಣ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ನಿರಾಮಯ ಆರೋಗ್ಯ ಕಾರ್ಡ್‌ ವಿತರಣೆ ಹಾಗೂ ಪಾಲಕರ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ದೇವರ ಸಮಾನ; ಅವರು ಹೇಗೆ ಇರಲಿ ಅವರ ಆರೈಕೆ ಮಾಡುವುದು ತಂದೆ ತಾಯಿಯ ಕರ್ತವ್ಯ. ವಿಶೇಷ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಇದರಿಂದ ಮಕ್ಕಳ ಬದಲಾವಣೆಗೆ ಒಂದು ಹೆಜ್ಜೆ ಮುಂದಿಟ್ಟಂತಾಗುತ್ತದೆ ಎಂದರು. ರೋಶನಿ ಸಂಸ್ಥೆ ನ್ಯೂನ್ಯತೆ ಹೊಂದಿರುವ ಮಕ್ಕಳಿಗೆ ದಾರಿ ದೀಪವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್‌ ಡಿಂಪಲ್‌ ಡಿಸೋಜಾ, ನಿರಾಮಯ ಆರೋಗ್ಯ ಕಾರ್ಡ್‌ ಎನ್ನುವುದು ಒಂದು ಸಾಮಾಜಿಕ ಭದ್ರತಾ ಯೋಜನೆಯಾಗಿದ್ದು, ಇದು ಕೇವಲ ಬುದ್ಧಿ ಮಾಂದ್ಯತೆ, ಮೆದುಳು ವಾತ, ಆಟಿಸ್‌ಂ ಹಾಗೂ ಬಹುವಿಧ ಅಂಗವಿಕಲತೆ ಉಳ್ಳವರಿಗಾಗಿಯೇ ನೀಡುವ ಸೌಲಭ್ಯವಾಗಿದೆ. ಪಾಲಕರು ದಿವ್ಯಾಂಗ ಮಕ್ಕಳನ್ನು ಆರೋಗ್ಯ ಸೇವೆಯಿಂದ ವಂಚಿತಗೊಳಿಸಬಾರದು ಎನ್ನುವ ಉದ್ದೇಶದಿಂದ ನ್ಯಾಷನಲ್‌ ಟ್ರಸ್ಟ್‌ ಅಡಿಯಲ್ಲಿ ಅಂತಹ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸುತ್ತದೆ. ಪಾಲಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲೆಂದೇ ಇರುವ ಈ ಯೋಜನೆ ಉಪಯೋಗವನ್ನು ಪ್ರತಿಯೊಬ್ಬ ಪಾಲಕರು ಪಡೆದುಕೊಳ್ಳಬೇಕು. ಮಕ್ಕಳನ್ನು ಶೀಘ್ರ ಮಧ್ಯಸ್ಥಿಕೆ ಕೇಂದ್ರಕ್ಕೆ ಕರೆತಂದು ಅವರ ಬದಲಾವಣೆಗೆ ಮುಂದಾಗಬೇಕು. ನ್ಯೂನ್ಯತೆ ಮಕ್ಕಳ ಆರೋಗ್ಯದಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಎಂ.ಎಂ. ಮುಲ್ಲಾ, ರೋಶನಿ ಸಂಸ್ಥೆಯವರು ನೀಡಿದ ಸಾಧನ ಸಲಕರಣೆಗಳನ್ನು ಸರಿಯಾಗಿ ಬಳಕೆ ಮಾಡಿ ಮಕ್ಕಳ ಆರೋಗ್ಯ ಸುಧಾರಣೆಗೆ ಶ್ರಮಿಸಬೇಕೆಂದರು. ನ್ಯೂನ್ಯತೆ ಮಗುವಿನ ಪಾಲಕರಾದ ಹೇಮಾವತಿ ಮಾತನಾಡಿ, ತಾವು ಒಂದು ವರ್ಷದಿಂದ ನಿರಾಮಯ ಆರೋಗ್ಯ ಕಾರ್ಡ್ನ್ನು ಬಳಸುತ್ತಿದ್ದು, ಅದರಿಂದಲೇ ತಮ್ಮ ಮಗುವಿನ ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನಲ್ಲಿ ಮಾಡಿಸಿಕೊಂಡಿದ್ದೇವೆ ಎಂದು ತಿಳಿಸಿದ ಅವರು, ಮಗುವಿನಲ್ಲಾದ ಬದಲಾವಣೆಯನ್ನು ಪಾಲಕರೊಂದಿಗೆ ಹಂಚಿಕೊಂಡರು.

ವೈದ್ಯಕೀಯ ಪ್ರಮಾಣ ಪತ್ರ ಪಡೆಯುವ ಹಾಗೂ ಚಿಕಿತ್ಸಾ ವೆಚ್ಚವನ್ನು ನಿರಾಮಯ ಯೋಜನೆಯ ಮೂಲಕ ಮಾಡಿಕೊಳ್ಳುವ ಕುರಿತು ಶಿವಕುಮಾರ ಮಾಂಗ್ಲೇನವರ ಮತ್ತು ಶಿವಬಸವನಗೌಡ ಪಾಟೀಲ್‌ ಅವರು ಪಾಲಕರಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ 15 ಮಕ್ಕಳಿಗೆ ನಿರಾಮಯ ಕಾರ್ಡ್‌ ವಿತರಿಸಲಾಯಿತು. ಪಾಲಕರಾದ ಗೌರಮ್ಮ ಪ್ರಾರ್ಥಿಸಿದರು. ಎಸ್‌.ವಿ.ಪಾಟೀಲ್‌ ಸ್ವಾಗತಿಸಿದರು, ಮಧುಮತಿ ನಿರೂಪಿಸಿದರು, ಅಣ್ಣಪ್ಪ ವಂದಿಸಿದರು.

ಟಾಪ್ ನ್ಯೂಸ್

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.