ಭೂಮಿ ಮಂಜೂರಾತಿಗೆ ಆಗ್ರಹ
Team Udayavani, Aug 1, 2017, 12:22 PM IST
ಧಾರವಾಡ: ಶ್ರೀರಾಮನಗರ ವಸತಿ ನಿರಾಶ್ರಿತರಿಗೆ ನಿವೇಶನ ಮಂಜೂರಾತಿ ಹಾಗೂ ಬೇಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಬಗರಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಡಿಸಿ ಕಚೇರಿ ಎದುರು ಸೋಮವಾರ ಧರಣಿ ನಡೆಸಲಾಯಿತು.
ರಾಜ್ಯಾಧ್ಯಕ್ಷ ಬಿ. ಚನ್ನಕೃಷ್ಣಪ್ಪ ನೇತೃತ್ವದಲ್ಲಿ ಶ್ರೀರಾಮನಗರದ ನೂರಾರು ವಸತಿ ನಿರಾಶ್ರಿತರು ಕಡಪಾ ಮೈದಾನದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಸಂಜೆವರೆಗೆ ಧರಣಿ ಕೈಗೊಂಡು ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಡಿಸಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಮನೆ ಅಥವಾ ನಿವೇಶನ ಇಲ್ಲದವರ ಪಟ್ಟಿ ಸಿದ್ಧಪಡಿಸಿ ಅಗತ್ಯ ದಾಖಲೆಯೊಂದಿಗೆ ವರದಿ ಸಲ್ಲಿಸಿದರೆ ಅರ್ಹರಿಗೆ ವಸತಿ ಅಥವಾ ನಿವೇಶನಕ್ಕೆ ಕ್ರಮ ಕೈಗೊಳ್ಳುತ್ತೇನೆ. ಬಗರಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಈಗ ಅವಕಾಶವಿಲ್ಲ.
ಈ ಕಾಯ್ದೆ ತಿದ್ದುಪಡಿ ಸರಕಾರದ ವಿವೇಚನೆಗೆ ಬಿಟ್ಟಿದ್ದು. ಈ ಕುರಿತಂತೆ ಸರಕಾರದ ಗಮನ ಸೆಳೆಯಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಶ್ರೀರಾಮನಗರದ 900 ಕುಟುಂಬಗಳ ವಸತಿಗಾಗಿ ಲಕಮನಹಳ್ಳಿ ಸ.ನಂ.165/ಅ ರಲ್ಲಿ 27 ಎಕರೆ 8 ಗುಂಟೆ ಜಮೀನು ಮಂಜೂರು ಮಾಡಬೇಕು.
ಕೊಳಚೆ ನಿರ್ಮೂಲನಾ ಮಂಡಳಿಗೆ ಈ ಜಾಗ ನೀಡಿ ನಿವೇಶನ ಅಭಿವೃದ್ಧಿಪಡಿಸಿ ವಸತಿ ನಿರ್ಮಿಸಿ ನಿರಾಶ್ರಿತರಿಗೆ ಹಂಚಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ.
ಬೇಲೂರು ಗ್ರಾಪಂ ವ್ಯಾಪ್ತಿಯ ಹೆಗ್ಗೇರಿ, ಮುಮ್ಮಿಗಟ್ಟಿ, ಬೇಲೂರು, ಅಂಬ್ಲಿಕೊಪ್ಪ, ಮುಮ್ಮಿಗಟ್ಟಿ ತಾಂಡಾ, ತಡಸಿನಕೊಪ್ಪ ಸೇರಿದಂತೆ 98 ಬಗರ್ ಸಾಗುವಳಿದಾರರಿಂದ ಹೊಸದಾಗಿ ಅರ್ಜಿ ಸೀಕರಿಸಿ ಜಮೀನು ಮಂಜೂರು ಮಾಡುವಂತೆ ಸಿಎಂಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ. ಹನುಮಂತಪ್ಪ ಕಟ್ಟಿಮನಿ, ಜಿಲ್ಲಾ ಸಫಾಯಿ ಕರ್ಮಚಾರಿ ಸಂಘದ ಸದಸ್ಯ ಲಕ್ಷ್ಮಣ ಬಕ್ಕಾಯಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್