ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Nov 24, 2018, 12:21 PM IST

vij-1.jpg

ನಾಲತವಾಡ: ಇಲ್ಲಿನ ಪಟ್ಟಣ ಪಂಚಾಯತ್‌ನಲ್ಲಿ ವಸತಿ ಯೋಜನೆ ಅಡಿ ಹಗರಣ ನಡೆದಿದ್ದು ಕೂಡಲೇ ಆಯ್ಕೆ ಪಟ್ಟಿ ರದ್ದುಪಡಿಸಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹರಿಗೆ ಮನೆ ಹಂಚಿಕೆ ನಡೆಸುವುದು ಸೇರಿದಂತೆ ಕೆಲ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಪಂ ಕಚೇರಿ ಎದುರು ಯುವಜನ ಸೇನೆ ಸಂಘಟನೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡು ದಿನ ಪೂರೈಸಿದೆ. ಶನಿವಾರದಿಂದ ಬೇಡಿಕೆ ಈಡೇರುವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಸಂಘಟನೆ ಪದಾಧಿಕಾರಿಗಳು, ಸದಸ್ಯರು ತೀರ್ಮಾನಿಸಿದ್ದಾರೆ.

2017-18ನೇ ಸಾಲಿನ ಶಾಸಕರ ವಾಜಪೇಯಿ ನಗರ ವಸತಿ ಯೋಜನೆಯ 300 ಆಸರೆ ಮನೆಗಳ ವಿತರಣೆಯನ್ನು ಕಾನೂನು ಬಾಹೀರವಾಗಿ ನಡೆಸಲಾಗಿದೆ. ಕೆಲ ಸದಸ್ಯರೇ ಹಣ ಪಡೆದು ತಮಗೆ ಬೇಕಾದವರಿಗೆ ಮನೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅದನ್ನು ಮರುಪರಿಶೀಲನೆ ಮಾಡಿ ಅರ್ಹರಿಗೆ ಮಾತ್ರ ಮನೆ ಒದಗಿಸಿಕೊಡಬೇಕು.
 
ಅಲ್ಲಿವರೆಗೂ ಈಗ ನಡೆಸಲಾಗುತ್ತಿರುವ ಜಿಪಿಎಸ್‌ ಕಾರ್ಯ ಸ್ಥಗಿತಗೊಳಿಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಅವರನ್ನು ಅಮಾನತು ಮಾಡಬೇಕು. ಅಕ್ರಮವಾಗಿ ಹಣ ಪಡೆದ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಬೇಕು. ಮಹಿಳೆಯರಿಗೆ ಶೌಚಾಲಯ ನಿರ್ಮಿಸಬೇಕು. ಪ್ರತಿ ವಾರ್ಡುಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಬೇಕು. ಯಾವುದಾದರೂ ವೃತ್ತವೊಂದರಲ್ಲಿ ಶರಣ ವೀರೇಶ್ವರರ ಪುತ್ಥಳಿ ನಿರ್ಮಿಸಬೇಕು. ಬೀದಿ ದೀಪ ಅಳವಡಿಸಬೇಕು. ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಿಸಬೇಕು ಮುಂತಾದ ಬೇಡಿಕೆ ಇಟ್ಟು ಧರಣಿ ನಡೆಸಲಾಗುತ್ತಿದೆ. 

ಶಾಸಕರ ಬೆಂಬಲಿಗರ ಕೈವಾಡ ಆರೋಪ: ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆ ಅಧ್ಯಕ್ಷ ಶಿವಾನಂದ ವಾಲಿ, ಶಾಸಕರ ಕೆಲ ಬೆಂಬಲಿಗರೆ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದು ಶಾಸಕರ ಹೆಸರಿಗೆ ಕಳಂಕ ತರುವಂಥದ್ದಾಗಿದೆ.

ಶಾಸಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ತಪ್ಪಿತಸ್ಥ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮನೆ ವಿತರಿಸುವ ಕಮೀಟಿ ಅಧ್ಯಕ್ಷರು ಶಾಸಕರೇ ಆಗಿದ್ದು ಅರ್ಹರಿಗೆ ಮಾತ್ರ ಮನೆ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮಾತುಕತೆ ವಿಫಲ: ಧರಣಿ ವಿಷಯ ತಿಳಿದು ಮುದ್ದೇಬಿಹಾಳ ಪೊಲೀಸ್‌ ಠಾಣೆ ಪಿಎಸೈ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು. ಬೇಡಿಕೆಗಳ ಕುರಿತ ಮನವಿ ಸಲ್ಲಿಸಿದಲ್ಲಿ ಅದನ್ನು ಸಂಬಂಧಿಸಿದವರಿಗೆ ರವಾನಿಸಿ ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ. 

ಅಲ್ಲಿತನಕ ಧರಣಿ ಕೈಬಿಡುವಂತೆ ಮನವಿ ಮಾಡಿಕೊಂಡರು. ಇದನ್ನೊಪ್ಪದ ಧರಣಿ ನಿರತರು ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವವರೆಗೆ ಧರಣಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಮುತ್ತು ಹೊಸಮಠ, ಸಂಗಮೇಶ ಕೆಂಭಾವಿ, ಮಲ್ಲಿಕಾರ್ಜುನ ಕೆಂಭಾವಿ, ಮಾಳಿಂಗರಾಯ ವನಹಳ್ಳಿ, ಅಮರೇಶ ಲೊಟಗೇರಿ, ರಮೇಶ ಗಂಗನಗೌಡರ, ವರುಣಗೌಡ ಗಂಗನಗೌಡರ, ಮಹಾಂತೇಶ ಹೆಸರೂರ, ಗಂಗು ಜೋಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.