ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕಲು ಆಗ್ರಹ


Team Udayavani, Aug 23, 2018, 5:26 PM IST

23-agust-27.jpg

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಮಲಪ್ರಭಾ ನದಿ ವ್ಯಾಪ್ತಿಯ ಮರಳು ಬ್ಲಾಕ್‌ನಲ್ಲಿ ಅಕ್ರಮ ವ್ಯವಹಾರ ಮಿತಿ ಮೀರಿದೆ. ಸರ್ಕಾರ ನಿಗದಿಪಡಿಸಿದ ದರಕ್ಕೆ ಮರಳು ಕೊಡದೇ ಲೀಜ್‌ದಾರರು ಅಕ್ರಮದಲ್ಲಿ ತೊಡಗಿದ್ದಾರೆ. ಈ ಕುರಿತು ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಹೇಳಿದರು ಪ್ರಯೋಜನವಾಗುತ್ತಿಲ್ಲ. ಕೂಡಲೇ ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೈ ಹನುಮಾನ ಟಿಪ್ಪರ್‌ ಮಾಲೀಕರ ಸಂಘದ ಅಧ್ಯಕ್ಷ ಮಹಾದೇವ ದೊಡಮನಿ ಎಚ್ಚರಿಕೆ ನೀಡಿದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿ ತಾಲೂಕಿನ ಜಾಲಿಹಾಳ, ನಶಬಿ, ಹೆಬ್ಬಳ್ಳಿ ಬಳಿ ಇರುವ ಮರಳು ಬ್ಲಾಕ್‌ನಲ್ಲಿ ಸರ್ಕಾರ ನಿಗದಿಪಡಿಸಿದ ರೂ. 4800 ಮೊತ್ತಕ್ಕೆ ಕೊಡದೇ ಮನಸೋ ಇಚ್ಛೆಯಂತೆ ಮರಳು ಕೊಡುತ್ತಿದ್ದಾರೆ. ಒಂದು ಕ್ಯೂಬಿಕ್‌ ಮೀಟರ್‌ ಗೆ ಸರ್ಕಾರ ದರ ನಿಗದಿ ಮಾಡಿದ್ದರೂ 12 ಸಾವಿರದಿಂದ 14 ಸಾವಿರ ಮೊತ್ತಕ್ಕೆ ಅಕ್ರಮವಾಗಿ ಮರಳು ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಮರಳು ಸಿಗದಂತಾಗಿದೆ ಎಂದರು.

ಮರಳು ಬ್ಲಾಕ್‌ನ ಲೀಜ್‌ ಪಡೆದಿರುವ ವ್ಯಕ್ತಿಗಳು, ತಮಗೆ ಬೇಕಾದವರಿಗೆ ಬೇಕಾದಂತೆ ದರ ನೀಡುತ್ತಿದ್ದು, ಬಾಗಲಕೋಟೆಯಿಂದ ಹೋಗುವ ನಮ್ಮ ಟಿಪ್ಪರ್‌ಗಳಿಗೆ ನಾಲ್ಕೈದು ದಿನಗಳಾದರೂ ಮರಳು ಕೊಡಲ್ಲ. ಅದು ಹೆಚ್ಚಿನ ಬೆಲೆಗೆ ನೀಡುತ್ತಿದ್ದಾರೆ. ಇದರಿಂದ ಮುಳುಗಡೆ ಸಮಸ್ಯೆಯಿಂದ ನಲುಗಿದ ಸಂತ್ರಸ್ತರು ಮನೆ ಕಟ್ಟಿಕೊಳ್ಳಲು ಪರದಾಡುವಂತಾಗಿದೆ ಎಂದು ತಿಳಿಸಿದರು.

ಲೀಜ್‌ದಾರರು, ಸರ್ಕಾರ ನಿಗದಿಪಡಿಸಿದ ದರದಂತೆ ಮರಳು ಕೊಡಲು ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಅಲ್ಲದೇ ಮರಳು ಬ್ಲಾಕ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಬಾಗಲಕೋಟೆ ಮುಳುಗಡೆ ಜಿಲ್ಲೆಯಾಗಿದ್ದರಿಂದ ಮನೆ ಕಟ್ಟಿಕೊಳ್ಳುವ ಸಾಮಾನ್ಯ ಜನರು ಹೆಚ್ಚಿದ್ದಾರೆ. ಅವರಿಗೆ ಕಡಿಮೆ ದರದಲ್ಲಿ ಮರಳು ಸಿಗುವಂತಾಗಬೇಕು. ಇಲ್ಲದಿದ್ದರೆ ನಮ್ಮ ಟಿಪ್ಪರಗಳ ಸಮೇತ ಜಿಲ್ಲಾಡಳಿತದ ಎದುರು ಧರಣಿ ನಡೆಸುತ್ತೇವೆ. ಮರಳು ಅಕ್ರಮ ದಂಧೆ ತಡೆಯುವ ಜತೆಗೆ ಸರ್ಕಾರ ನಿಗದಿಪಡಿಸಿದ ದರಕ್ಕೆ ಮರಳು ಕೊಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜೈ ಹನುಮಾನ ಟಿಪ್ಪರ ಮಾಲೀಕರ ಸಂಘದ ಉಪಾಧ್ಯಕ್ಷ ಗೋಪಾ ಲಮಾಣಿ, ಎಚ್‌.ಆರ್‌. ಹುಣಸಿಕಟ್ಟಿ, ಸುರೇಶ ಲಮಾಣಿ, ಎಸ್‌.ಬಿ. ಪುರಾಣಿಕಮಠ ಮುಂತಾದವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.