ಸ್ಟಾರ್ಟಪ್‌ಗೆ ದೇಶಪಾಂಡೆ ಫೌಂಡೇಶನ್‌ ಗಾಡ್‌ಫಾದರ್‌

ತರಬೇತಿ-ತಾಂತ್ರಿಕ ಶಿಕ್ಷಣದಲ್ಲಿ ಸಂಸ್ಥೆ ಉತ್ತಮ ಕೆಲಸ ; ಉದ್ಯೋಗಿ ಮಾನಸಿಕತೆ ತೊರೆದು ಉದ್ಯಮಿಯಾಗಿ: ಶೆಟ್ಟರ

Team Udayavani, Oct 15, 2022, 2:42 PM IST

13

ಹುಬ್ಬಳ್ಳಿ: ಸಣ್ಣ ಉದ್ಯಮ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವವರಿಗೆ ದೇಶಪಾಂಡೆ ಫೌಂಡೇಷನ್‌ ಗಾಡ್‌ಫಾದರ್‌ ಇದ್ದಂತೆ ಎಂದು ಶಾಸಕ, ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ದೇಶಪಾಂಡೆ ಪ್ರತಿಷ್ಠಾನದ ಸ್ಟಾರ್ಟ್‌ಅಪ್ಸ್‌ನ ಸಣ್ಣ ಉದ್ದಿಮೆದಾರರ ಅಭಿವೃದ್ಧಿ ಕಾರ್ಯಕ್ರಮ (ಎಂಇಡಿಪಿ) ಸಂಘಟನೆಯು ಜೆಎಸ್‌ಡಬ್ಲ್ಯೂ ಫೌಂಡೇಶನ್‌ ಸಹಯೋಗದಲ್ಲಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಭವನದಲ್ಲಿ ಮೂರು ದಿನಗಳ ವರೆಗೆ ಆಯೋಜಿಸಿರುವ ಮೆಗಾ ಉದ್ಯಮಿ ಸಂತೆಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ನವ ಉದ್ಯಮಿಗಳಿಗೆ ತರಬೇತಿ, ತಾಂತ್ರಿಕ ಶಿಕ್ಷಣ ನೀಡುವಲ್ಲಿ ದೇಶಪಾಂಡೆ ಫೌಂಡೇಷನ್‌ ಉತ್ತಮ ಕೆಲಸ ಮಾಡುತ್ತಿದೆ. ಸ್ವಾವಲಂಬನೆಗೆ ಹೆಚ್ಚು ಪ್ರೋತ್ಸಾಹ ಹಾಗೂ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು ಮತ್ತು ಆರ್ಥಿಕವಾಗಿ ಸಬಲರಾಗಲು ಸಹಕಾರಿ ಆಗಿದೆ. ಆ ಮೂಲಕ ಪ್ರತಿಷ್ಠಾನವು ನವೋದ್ಯಮಿಗಳಿಗೆ ಗಾಡ್‌ ಫಾದರ್‌ ಆಗಿದೆ ಎಂದರು.

ನಮ್ಮಲ್ಲಿರುವ ಕೌಶಲ ಹೇಗೆಲ್ಲ ಸದ್ಬಳಕೆ ಮಾಡಿಕೊಂಡು ಉದ್ಯಮಿಯಾಗಬಹುದು ಎನ್ನುವುದಕ್ಕೆ ದೇಶಪಾಂಡೆ ಫೌಂಡೇಶನ್‌ ನಡೆಸುತ್ತಿರುವ ಮೆಗಾ ಉದ್ಯಮಿ ಮೇಳ ನಿದರ್ಶನವಾಗಿದೆ. ಇಂದಿನ ಯುವ ಜನಾಂಗವು ಸರಕಾರಿ ಹಾಗೂ ದೊಡ್ಡ ಖಾಸಗಿ ಕಂಪನಿಗಳ ಉದ್ಯೋಗಿ ಆಗಬೇಕೆನ್ನುವ ಮಾನಸಿಕತೆಯಿಂದ ಹೊರಬಂದು, ತಾವೇ ಉದ್ಯಮ ಸ್ಥಾಪಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗಲು ಮುಂದಾಗಬೇಕು. ಇದಕ್ಕೆ ದೇಶಪಾಂಡೆ ಫೌಂಡೇಷನ್‌ ಸೂಕ್ತ ಮಾರ್ಗದರ್ಶನ ನೀಡಲಿದೆ. ನೌಕರಿ ಬಗ್ಗೆ ಯುವಕರು ಮತ್ತು ಅವರ ಪಾಲಕರಲ್ಲಿರುವ ಮಾನಸಿಕತೆ ಹೋಗಲಾಡಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗಲು ಮೆಗಾ ಉದ್ಯಮ ಸಂತೆ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.

ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಯೂರ ಕಾಂಬಳೆ ಮಾತನಾಡಿ, ದೇಶಪಾಂಡೆ ಫೌಂಡೇಶನ್‌ ಮತ್ತು ನಬಾರ್ಡ್‌ನ ಸಹಯೋಗದಲ್ಲಿ 90 ಮಹಿಳೆಯರಿಗೆ ಆರಿ ಎಂಬ್ರಾಯಡರಿ ತರಬೇತಿ ನೀಡಲಾಗುತ್ತಿದೆ. ಮುಂದೆ ಇವರು ಸ್ವಾವಲಂಬಿ ಸಖೀ ಉತ್ಪಾದಕರ ಕಂಪನಿಯಲ್ಲಿ ಸೇರ್ಪಡೆಯಾಗಲಿದ್ದಾರೆ. ಹೆಚ್ಚಿನ ಆದಾಯ ತರುವಂತಹ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡು ಕೌಶಲ ಮತ್ತು ವ್ಯಾಪಾರದ ಅವಶ್ಯಕತೆಯಿದೆ. ಆ ಮೂಲಕ ಇನ್ನಷ್ಟು ಜನರಿಗೆ ನೌಕರಿ ಕೊಡಬಹುದಾಗಿದೆ. ಸಂಸ್ಥೆಯ ಕೃಷಿ ಹೊಂಡ ಪ್ರೊಜೆಕ್ಟ್‌ನಲ್ಲಿ ರೈತರ ಆದಾಯ ವೃದ್ಧಿಯಾಗಿದೆ. ಇದು ಭಾರತದ ಟಾಪ್‌ 3 ಪ್ರೊಜೆಕ್ಟ್‌ನಲ್ಲಿ ಒಂದಾಗಿದೆ. ಸಂಸ್ಥೆಯಿಂದ ನಗರದ ವಿಮಾನ ನಿಲ್ದಾಣದಲ್ಲಿ ಮಳಿಗೆ ನಿರ್ಮಿಸಲಾಗಿದ್ದು, ಇದು ರಾಜ್ಯದಲ್ಲೇ ಮೊದಲನೆಯದ್ದಾಗಿದೆ. ಮಹಿಳೆಯರು ಮತ್ತು ಸಣ್ಣ ಉದ್ದಿಮೆದಾರರಿಗೆ ಉತ್ತಮ ಪ್ಲಾಟ್‌ಫಾರ್ಮ್ ಸಿಗಬೇಕೆಂಬುವುದೆ ನಮ್ಮ ಉದ್ದೇಶವಾಗಿದೆ ಎಂದರು.

ಮಹಿಳಾ ನವೋದ್ಯಮಿಗಳು ಮತ್ತು ಸ್ಟಾರ್ಟ್ ಅಪ್‌ ಉದ್ಯಮಿಗಳಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಲಾಯಿತು. ಸ್ವಯಂ ಶಿಕ್ಷಣ ಪ್ರಯೋಗದ ಕಾರ್ಯಕ್ರಮ ನಿರ್ದೇಶಕ ಉಪಮನ್ಯು ಪಾಟೀಲ, ದೇಶಪಾಂಡೆ ಸ್ಟಾರ್ಟ್‌ಅಪ್ಸ್‌ನ ಹಿರಿಯ ನಿರ್ದೇಶಕ ವಿಜಯ ಪುರೋಹಿತ ಮೊದಲಾದವರಿದ್ದರು. ಸುರೇಖಾ ಪ್ರಾರ್ಥಿಸಿದರು. ಮಂಜುಳಾ ಕರಡಿ ನಿರೂಪಿಸಿದರು. ಶಿವಾನಂದ ಸೋಮಣ್ಣವರ ವಂದಿಸಿದರು. ‌

ಸಣ್ಣ ಉದ್ಯಮಿಗಳೇ ಹೀರೋಗಳು

ದೇಶಪಾಂಡೆ ಸ್ಟಾರ್ಟ್‌ಅಪ್ಸ್‌ ಸಿಇಒ ಅರವಿಂದ ಚಿಂಚೋರೆ ಮಾತನಾಡಿ, ಸಂಸ್ಥೆಯು 12 ವರ್ಷದ ಹಿಂದೆ 100ರಷ್ಟು ಸಣ್ಣ ಉದ್ಯಮಿಗಳಿಗೆ ಕೌಶಲ ತರಬೇತಿ ನೀಡುತ್ತಿತ್ತು. ಇದೀಗ 10 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ತರಬೇತಿ ಪಡೆದು ಸಣ್ಣ ಉದ್ಯಮಿಗಳಾಗಿದ್ದಾರೆ. ನಮ್ಮ ಸಂಸ್ಥೆಗೆ ಸಣ್ಣ ಉದ್ಯಮಿಗಳೇ ನಿಜವಾದ ಹೀರೋಗಳು. ಅವರೇ ನಮಗೆ ಪ್ರೇರಣೆ. ಇನ್ನಷ್ಟು ಪ್ರಗತಿ ಸಾಧಿಸಲು ಮುಂದಾಗಬೇಕು. ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಸಣ್ಣ ಉದ್ಯಮಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮೌಲ್ಯ ಕೊಂಡಿ ಮಾದರಿಯಲ್ಲಿ ಫುಡ್‌ ಕ್ಲಸ್ಟರ್‌ ಮಾಡಲು ಸಂಸ್ಥೆ ಸಿದ್ಧವಿದೆ. ಮಾವು ಹಾಗೂ ಇತರೆ ಹಣ್ಣುಗಳನ್ನು ಶೂನ್ಯತ್ಯಾಜ್ಯದೊಂದಿಗೆ ಉತ್ಪಾದಿಸಲು ಯೋಜಿಸಲಾಗಿದೆ. ಆ ಮೂಲಕ ಬ್ರಾಂಡ್‌ ನೇಮ್‌ ಕ್ರಿಯೇಟ್‌ ಮಾಡಿ ವ್ಯಾಪಾರ ವಹಿವಾಟು ಹೆಚ್ಚಿಸಿಕೊಳ್ಳಬಹುದು ಎಂದರು.

ಟಾಪ್ ನ್ಯೂಸ್

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.