ಸುಲಿಗೆಕೋರರ ಬಂಧನ: ಸಿಕ್ಕಿತು ವಾಹನ-ಆಭರಣ


Team Udayavani, Jun 25, 2018, 5:14 PM IST

25-june-20.jpg

ಹುಬ್ಬಳ್ಳಿ: ನಗರದ ಗೋಕುಲ ರಸ್ತೆ ಪೊಲೀಸರು ಕುಖ್ಯಾತ ಸುಲಿಗೆಕೋರರಿಬ್ಬರನ್ನು ಬಂಧಿಸಿ, ಅವರಿಂದ ಅಂದಾಜು 1.76 ಲಕ್ಷ ರೂ. ಮೌಲ್ಯದ ನಾಲ್ಕು ದ್ವಿಚಕ್ರ ವಾಹನ, ಮೊಬೈಲ್‌, ಎರಡು ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಹಳೇಹುಬ್ಬಳ್ಳಿ ಆನಂದನಗರ ರಸ್ತೆ ಸಂಗಮ ಕಾಲೋನಿಯ ಶಾಂತಪ್ಪ ಎಸ್‌. ವೀರಾಪುರ ಹಾಗೂ ಚನ್ನಪೇಟೆ ಅಂಬೇಡ್ಕರ್‌ ಕಾಲೋನಿಯ ಮಹದೇವ ಎಸ್‌. ಭರಮಣ್ಣವರ ಬಂಧಿತ ಸುಲಿಗೆಕೋರರಾಗಿದ್ದು, ಅಜೀಜ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಬಂಧಿತರು ಜೂ. 13ರಂದು ತಾರಿಹಾಳ ರಸ್ತೆ ಜಗದೀಶನಗರ ಕ್ರಾಸ್‌ ಬಳಿ ಟಾಟಾ ಏಸ್‌ ವಾಹನ ಅಡ್ಡಗಟ್ಟಿ ಅದರಲ್ಲಿದ್ದವರಿಗೆ ಚಾಕು ತೋರಿಸಿ ಹೆದರಿಸಿ ನಗ-ನಾಣ್ಯ, ಮೊಬೈಲ್‌ ದೋಚಿಕೊಂಡು ಹೋಗಲು ಯತ್ನಿಸಿದ್ದರು. ಆಗ ಅಡ್ಡಿಪಡಿಸಿದ್ದ ಓರ್ವನಿಗೆ ಚಾಕುವಿನಿಂದ ಇರಿದು ಗಾಯಪಡಿಸಿ ಪರಾರಿಯಾಗಿದ್ದರು. ಈ ಕುರಿತು ಕಲಘಟಗಿ ತಾಲೂಕು ಬಿಸರಳ್ಳಿ ಗ್ರಾಮದ ಜ್ಯೋತಿ ಹುಂಡಿ ಎಂಬುವರು ಗೋಕುಲ ರಸ್ತೆ ಠಾಣೆಯಲ್ಲಿ ದೂರು ಕೊಟ್ಟಿದ್ದರು.

ದೂರಿನನ್ವಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಶಾಂತಪ್ಪ ವೀರಾಪುರ ಹಾಗೂ ಮಹದೇವ ಭರಮಣ್ಣವರ ಎಂಬುವರನ್ನು ಶನಿವಾರ ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಶಾಂತಪ್ಪನು ಧಾರವಾಡದಲ್ಲಿ ಮೂರು ಹಾಗೂ ಹಳೇಹುಬ್ಬಳ್ಳಿಯಲ್ಲಿ ಒಂದು ದ್ವಿಚಕ್ರ ವಾಹನ ಕಳವು ಮಾಡಿ, ಆ ಮೂಲಕ ಸುಲಿಗೆ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ. ಜೊತೆಗೆ ಈತನ ವಿರುದ್ಧ ಹು-ಧಾದಲ್ಲಿ 13 ಸುಲಿಗೆ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಮಹದೇವ ವಿರುದ್ಧವೂ ಅವಳಿ ನಗರದಲ್ಲಿ 13 ಸುಲಿಗೆ ಪ್ರಕರಣಗಳು ದಾಖಲಾಗಿವೆ. ಇವರಿಬ್ಬರು ಸುಲಿಗೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ವಶದಲ್ಲಿದ್ದರು. ಮೂರು ತಿಂಗಳ ಹಿಂದಷ್ಟೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ, ಡಿಸಿಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್‌. ನೇಮಗೌಡ, ಎಸಿಪಿ ಎಚ್‌.ಕೆ. ಪಠಾಣ ಮಾರ್ಗದರ್ಶನದಲ್ಲಿ ಗೋಕುಲ ರಸ್ತೆ ಠಾಣೆ ಇನ್‌ ಸ್ಪೆಕ್ಟರ್‌ ಮಲ್ಲಯ್ಯ ಮಠಪತಿ, ಪಿಎಸ್‌ಐ ಎಸ್‌. ಎಚ್‌. ದೊಡ್ಡಮನಿ, ಸಿಬ್ಬಂದಿಗಳಾದ ಎಸ್‌.ಎಚ್‌. ತಹಶೀಲ್ದಾರ, ಸಂಜೀವ ಕುರಹಟ್ಟಿ, ಎನ್‌.ಐ. ನೀಲಗಾರ, ಬಸವರಾಜ ಬೆಳಗಾವಿ, ಎಸ್‌.ಎಫ್‌. ಕಣಬೂರ, ಆರ್‌. ವೈ. ಕೋತಂಬ್ರಿ, ಎಸ್‌.ಜಿ. ಹೊಸಮನಿ, ಕೆ.ಎಚ್‌. ನೀಲಪ್ಪಗೌಡರ ಸುಲಿಗೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿರುವ ಅಜೀಜ್‌ ಪತ್ತೆಗೆ ಜಾಲ ಬೀಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.