ರಾಜ್ಯಮಟ್ಟದ ಮಕ್ಕಳ ಸಂಘಟನೆಗಳ ಒಕ್ಕೂಟ ರಚನೆಗೆ ನಿರ್ಣಯ


Team Udayavani, May 23, 2019, 4:21 PM IST

hubali-tdy-1..

ಧಾರವಾಡ: ನಗರದಲ್ಲಿ ನಡೆದ ಮಕ್ಕಳ ಸಮಾವೇಶದಲ್ಲಿ ಪರಿಸರ ತಜ್ಞ ಪಿ.ವಿ.ಹಿರೇಮಠ ಮಾತನಾಡಿದರು.

ಧಾರವಾಡ: ಇಲ್ಲಿ ನಡೆದ ಮಕ್ಕಳ ಲೋಕದ ಮನಸುಗಳ ಚಿಂತನಾ ಸಮಾವೇಶದಲ್ಲಿ ರಾಜ್ಯಮಟ್ಟದ ಮಕ್ಕಳ ಸಂಘಟನೆಗಳ ಒಕ್ಕೂಟ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಒಕ್ಕೂಟ ರಚನೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಲು ಸಂಚಾಲಕರನ್ನಾಗಿ ಶಂಕರ ಹಲಗತ್ತಿ ಅವರನ್ನು ಆಯ್ಕೆ ಮಾಡಲಾಯಿತು.

ಅತಿಥಿಯಾಗಿದ್ದ ಪರಿಸರ ತಜ್ಞ ಪಿ.ವಿ. ಹಿರೇಮಠ ಮಾತನಾಡಿ, ಮುಂಬರುವ ಅಪಾಯ ಅರಿತು ಮಕ್ಕಳನ್ನು ಜಾಗೃತಗೊಳಿಸಬೇಕಾದರೆ ಅದಕ್ಕೊಂದು ಸಮರ್ಥವಾದ ಸಂಘಟನೆ ಇರಬೇಕು. ಆ ನಿಟ್ಟಿನಲ್ಲಿ ಪರಸರ ವಿನಾಶದಿಂದ ನಾವು ಎದುರಿಸುತ್ತಿರುವ ಸಮಸ್ಯೆಗಳ ಅರಿವು ಮೂಡಿಸುವ ಕಾರ್ಯ ತುರ್ತಾಗಿ ನಡೆಯಬೇಕು ಎಂದರು.

ಸಮಾರೋಪ ಸಮಾರಂಭದಲ್ಲಿ ಮೂರು ಪ್ರಮುಖ ವಿಷಯಗಳ ಕುರಿತು ಘೋಷಿಸಲಾಯಿತು. ಸರ್ವರೂ ಚಪ್ಪಾಳೆ ತಟ್ಟಿ ಈ ಮೂರೂ ಘೋಷಣೆಗಳನ್ನು ಅನುಮೋದಿಸುವ ಮೂಲಕ ಮಂಡಿಸಲಾಯಿತು. ಡಾ|ನಿಂಗು ಸೊಲಗಿ ಘೋಷಿಸಿದರು. ಅವು ಇಂತಿವೆ.

1)ಯಾವುದೇ ಸರಕಾರಿ ಯೋಜನೆಗಳು ರೂಪುಗೊಳ್ಳುವಾಗ, ಅನುಷ್ಠಾನಗೊಳ್ಳುವಾಗ ಮಕ್ಕಳ ಕೇಂದ್ರಿತ ಆಗು ಹೋಗುಗಳ ಬಗ್ಗೆ ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ಮಕ್ಕಳ ಕ್ಷೇತ್ರದ ತಜ್ಞರ ಸಮಿತಿಯೊಂದನ್ನು ಸರಕಾರ ರಚಿಸಿ, ಈ ಸಮಿತಿ ಸಲಹೆ ಮೇರೆಗೆ ಕಾರ್ಯ ಅನುಷ್ಠಾನಗೊಳಿಸುವುದು.

2)ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ, ಬಾಲಭವನ, ಮೊದಲಾದ ಸರಕಾರದ ಅಧಿಧೀನದಲ್ಲಿರುವ ಮಕ್ಕಳ ಕಾರ್ಯ ಕ್ಷೇತ್ರದ ಸಂಸ್ಥೆ, ಅಕಾಡೆಮಿ, ನಿಗಮ-ಮಂಡಳಿಗಳ ಯಾವುದೇ ಸ್ಥಾನಕ್ಕೆ ನೇಮಕ ಮಾಡುವಾಗ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ, ಸಂಘಟನೆ ಕ್ಷೇತ್ರದ ಗಣ್ಯರನ್ನೇ ನೇಮಕ ಮಾಡಬೇಕು.

3)ಶಾಲಾ ಶಿಕ್ಷಣದಲ್ಲಿನ ಗೊಂದಲಗಳ ನಿವಾರಣೆಯೊಂದಿಗೆ ಮಕ್ಕಳ ಸೃಜನಶೀಲತೆಯ ಪೋಷಣೆಯ ನಿಟ್ಟಿನಲ್ಲಿ ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು. ವಿಶೇಷ ಚೇತನ ಮಕ್ಕಳಿಗಾಗಿ ತಾಲೂಕು ಕೇಂದ್ರದಲ್ಲಿ ಸಂಯೋಜಿತ ಶಾಲಾ ಶಿಕ್ಷಣಕ್ಕೆ ಪೂರಕ ಮಕ್ಕಳ ಸ್ನೇಹಿ ವಾತಾವಣವಿರುವ, ಎಲ್ಲ ಸೌಲಭ್ಯ ಹೊಂದಿರುವ ಸಮನ್ವಯ ಸಂಪನ್ಮೂಲ ತರಬೇತಿ ಶಾಲೆಗಳ ನಿರ್ಮಾಣವಾಗಬೇಕು ಎಂದು ಘೋಷಿಸಲಾಯಿತು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.