ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ: ಶಾಸಕ ಮುರುಗೇಶ
Team Udayavani, Apr 9, 2019, 11:36 AM IST
ಬೀಳಗಿ: ಬಡವರ, ಜನಸಾಮಾನ್ಯರ ಪಕ್ಷವೆಂದರೆ ಅದು ಬಿಜೆಪಿ. ಬಿಜೆಪಿಯಿಂದ ಮಾತ್ರ ದೇಶದ ಸಮಗ್ರತೆ ಸಾಧ್ಯ. ಅಭಿವೃದ್ಧಿಯೇ ಬಿಜೆಪಿಯ ಮೂಲಮಂತ್ರವಾಗಿದೆ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.
ಹೊನರಳ್ಳಿ ಗ್ರಾಮದಲ್ಲಿ ಸೋಮವಾರ ಬಾಗಲಕೋಟೆ ಲೋಕಸಭೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸುಭದ್ರ ದೇಶ ಕಟ್ಟುವಲ್ಲಿ ಬಿಜೆಪಿ ಕೈಗೊಂಡ ಕಠಿಣ ನಿಲುವು ಹಿಂದೆ ಯಾವುದೇ ಪಕ್ಷಗಳು ತೆಗೆದುಕೊಂಡಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಹೆಮ್ಮೆಯಿಂದ ಬೀಗುವಂತಾಗಿದೆ. ದೇಶದ ಭದ್ರತೆಯನ್ನು ಹೆಚ್ಚಿಸಲು ಸೈನಿಕರಿಗೆ ಹೆಚ್ಚಿನ ಬಲ ನೀಡಿರುವುದು ಮೋದಿ ಸರಕಾರದ ಮಹೋನ್ನತ ಸಾಧನೆಯಾಗಿದೆ ಎಂದರು.
ಬಾಗಲಕೋಟೆ ಲೋಕಸಭೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಮೂರು ಬಾರಿ ಸಂಸದರಾಗಿ ಕ್ಷೇತ್ರಕ್ಕೆ ಉತ್ತಮ ಕೆಲಸ ಮಾಡಿದ್ದಾರೆ. ಒಂದೇ ಒಂದು ಕಪ್ಪುಚುಕ್ಕೆಯಿಲ್ಲದ, ಸರಳ-ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ನಾಲ್ಕನೇ ಬಾರಿಗೆ ಗದ್ದಿಗೌಡರ ಅವರನ್ನು ಲೋಕಸಭೆಗೆ ಕಳುಹಿಸುವ ಮೂಲಕ ಮೋದಿ ಪ್ರಧಾನಿಯಾಗಲು ಶಕ್ತಿ ನೀಡಬೇಕೆಂದು ಮನವಿ ಮಾಡಿದರು. ಹೂವಪ್ಪ ರಾಠೊಡ, ಶ್ರೀಶೈಲ ಗೌರಿ, ರಮೇಶ ಮೋರಟಗಿ, ಮಲ್ಲಿಕಾರ್ಜುನ ಗೌಡರ, ಹಿರೇಮಠ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ