ಧಾರವಾಡ: ನವದುರ್ಗೆಯರ ಆರಾಧನೆಗೆ ಭಕ್ತ ಗಣ ಸಜ್ಜು

ಈ ವರ್ಷ ಒಂದೇ ಜಂಬೂಸವಾರಿ ಉತ್ಸವ: ಹುಣಸಿಮರದ

Team Udayavani, Sep 25, 2022, 3:28 PM IST

12

ಧಾರವಾಡ: ಪ್ರತಿವರ್ಷ ಪ್ರತ್ಯೇಕ ದಿನಗಳಲ್ಲಿ ಎರಡು ಜಂಬೂ ಸವಾರಿ ಉತ್ಸವ ನಡೆಯುತ್ತಿತ್ತು. ಈಗ ಎರಡು ಬಣ ಒಗ್ಗೂಡಿ ಒಂದೇ ಉತ್ಸವ ಮಾಡಲು ಅಣಿಯಾಗಿವೆ ಎಂದು ಧಾರವಾಡ ದಸರಾ ಜಂಬೂಸವಾರಿ ಉತ್ಸವ ಸಮಿತಿ ಅಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 4ರಂದು ಜಂಬೂ ಸವಾರಿ ನಡೆಯಲಿದ್ದು, ಅಂದು ಮಧ್ಯಾಹ್ನ 2:30 ಗಂಟೆಗೆ ಗಾಂಧಿನಗರದ ಬಂಡೆಮ್ಮ ದೇವಸ್ಥಾನದಿಂದ ಆರಂಭಗೊಳ್ಳಲಿದೆ. ಮಸಲಗಾರ ಓಣಿ, ಮಾರುತಿ ದೇವಸ್ಥಾನ, ರಾಯರಮಠ, ರಾಮ ಮಂದಿರ, ಹೊಸಯಲ್ಲಾಪುರ, ಗಾಂಧಿಚೌಕ್‌ ಮಾರ್ಗವಾಗಿ ಕಲಾಭವನದಲ್ಲಿ ಸಂಪನ್ನಗೊಳ್ಳಲಿದೆ.

ಐದು ಆನೆ, ಕುದುರೆಗಳು, ಕಲಾತಂಡ, ದಸರಾ ಬೊಂಬೆ ಕುಣಿತ, ಕರಡಿ ಮಜಲು, ಜಗ್ಗಲಿಗೆ ಮೇಳ ಸೇರಿ 25 ಸ್ಥಳೀಯ, 10 ಹೊರಜಿಲ್ಲೆ ಒಟ್ಟು 35 ಕಲಾತಂಡಗಳು ಮೆರಗು ತುಂಬಲಿವೆ. ಅ.5ರಂದು ರಾತ್ರಿ 9:30 ಗಂಟೆಗೆ ದೇವಿಮೂರ್ತಿ ವಿಸರ್ಜನೆ ಜರುಗಲಿದೆ ಎಂದರು.

26ರಿಂದ 5ರವರೆಗೆ ವಿವಿಧ ಕಾರ್ಯಕ್ರಮ: ದಸರಾ ಪ್ರಯುಕ್ತ ಸೆ.26ರಿಂದ ಅ. 5ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. 26ರಂದು ಸಂಜೆ 6:30 ಗಂಟೆಗೆ ವಿದ್ಯಾಗಿರಿ ಗಣೇಶ ದೇವಸ್ಥಾನದಿಂದ ತರುವ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ, ಮಂಜುಳಾ ಮುಂಜಿ ಮೂರ್ತಿ ಸೇವೆ ನೀಡಲಿದ್ದು, ನಂತರ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಸೆ.27ರಿಂದ ಸೆ. 29ರವರೆಗೆ ನಿತ್ಯ ಬೆಳಗ್ಗೆ 8 ಗಂಟೆಗೆ ದೇವಿಮೂರ್ತಿಗೆ ಭಕ್ತರಿಂದ ವಿಶೇಷ ಪೂಜೆ, ಸಂಜೆ 4 ಗಂಟೆಗೆ ವಿವಿಧ ಭಜನಾ ಮಂಡಳ ಸದಸ್ಯರಿಂದ ಭಜನೆ, ದೇವಿಯ ಪುರಾಣ ಪಠಣದ ನಂತರ ಪ್ರಸಾದ ವಿತರಣೆ ನಡೆಯಲಿದೆ.

ಸೆ.30ರಂದು ಬೆಳಗ್ಗೆ 8 ಗಂಟೆಗೆ ಭಕ್ತರಿಂದ ಪೂಜೆ, ಬೆಳಗ್ಗೆ 9 ಗಂಟೆಗೆ ಉತ್ಸವ ಸಮಿತಿ ಸದಸ್ಯರು ಹಾಗೂ ಗಾಂಧಿನಗರ ಯುವಜನ ಸಂಘದಿಂದ ದುರ್ಗಾ ಹೋಮ ನಡೆಯಲಿದೆ. ಸಂಜೆ 4 ಗಂಟೆಗೆ ಸಾಯಿ ಲಲಿತ ಭಜನಾ ಮಂಡಳಿಯಿಂದ ಕುಂಕುಮಾರ್ಚನೆ ಜರುಗಲಿದೆ ಎಂದು ತಿಳಿಸಿದರು.

ಸೆ.30ರಂದು ಯುವ ಜನೋತ್ಸವ-ಮಕ್ಕಳ ವಿವಿಧ ಸ್ಪರ್ಧೆಗೆ ಕವಿಸಂನಲ್ಲಿ ಬೆಳಗ್ಗೆ 10 ಗಂಟೆಗೆ ಚಾಲನೆ ನೀಡಲಾಗುತ್ತದೆ. ಅ.1ರಂದು ಸಂಗೀತ, ಹಾಸ್ಯ, ನೃತ್ಯ ನಡೆಯಲಿದೆ. ಬಾಡಿ ಬಿಲ್ಡರ್ಸ್‌ ಅಸೋಸಿಯೇಶನ್‌, ದಸರಾ ಉತ್ಸವ ಸಮಿತಿ ಸಹಯೋಗದಲ್ಲಿ ಅ.2ರ ಸಂಜೆ 4 ಗಂಟೆಗೆ “ದೇಹದಾರ್ಡ್ಯ ಸ್ಪರ್ಧೆ: ದಸರಾಶ್ರೀ-2020′ ನಡೆಯಲಿದೆ. ವಿಜೇತರಿಗೆ ಪ್ರಥಮ 7,500 ರೂ., ದ್ವಿತೀಯ 3,000 ರೂ. ಬಹುಮಾನ-ಟ್ರೋಫಿ ನೀಡಲಾಗುತ್ತದೆ.

ಇನ್ನು ಯುವಜನೋತ್ಸವ-ಮಕ್ಕಳ ಸ್ಪರ್ಧೆಗೆ ಭಾಗವಹಿಸಲು ಮೊ:7411131983 ಮತ್ತು 8050421364, ಮಹಿಳಾ ಸ್ಪರ್ಧೆಗೆ ಪಾಲ್ಗೊಳ್ಳಲು ಮೊ:9449049380 ಮತ್ತು 9448861500, ದೇಹದಾರ್ಡ್ಯ ಸ್ಪರ್ಧೆಗೆ ಭಾಗವಹಿಸುವವರು ಮೊ:9141028473ಕ್ಕೆ ಸಂಪರ್ಕಿಸಬಹುದು ಎಂದರು.

ಅ.1 ರಿಂದ 3ರವರೆಗೆ ಲಿಂಗಾಯತ ಭವನದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿದೆ. ಅ.1 ರಂಗೋಲಿ ಮತ್ತು ಅಡುಗೆ ಸ್ಪರ್ಧೆ, ಅ.2 ನಾಡಗೀತೆ ಸಮೂಹ ಗಾಯನ ಮತ್ತು ದೇವಿ ನೃತ್ಯ ಸ್ಪರ್ಧೆ, ಅ.3ರಂದು ಫ್ಯಾಷನ್‌ ಶೋ, ಕಿರು ಆಟೋಟà ಸ್ಪರ್ಧೆ ಜರುಗಲಿದೆ. ಪ್ರತಿದಿನ ಸಂಜೆ 7 ಗಂಟೆಗೆ ಗಾಂಧಿನಗರದ ಈಶ್ವರ ದೇವಸ್ಥಾನದಲ್ಲಿ ಜನಪದ ಗೀತೆ, ಕರೋಕೆ, ಪದ್ಮಶ್ರೀ ಪಂ| ವೆಂಕಟೇಶಕುಮಾರ ಸಂಗೀತೋತ್ಸವ, ಝೀ ಕನ್ನಡ ಕಾಮಿಡಿ ಕಿಲಾಡಿಗಳ ಹಾಸ್ಯೋತ್ಸವ, ನೃತ್ಯ, ವಿವಿಧ ಕಾರ್ಯಕ್ರಮಗಳು ದಸರಾ ಉತ್ಸವಕ್ಕೆ ಮೆರಗು ತುಂಬಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಂಜುಗೌಡ ಪಾಟೀಲ, ನಾರಾಯಣ ಕೋರ್ಪಡೆ, ವಿಲಾಸ ತಿಬೇಲಿ, ಯಶವಂತರಾವ್‌, ಭೀಮಣ್ಣ ಮಲ್ಲಿಗವಾಡ ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.