ಧಾರಾನಗರಿಯಲ್ಲಿ ಧಾರಾಕಾರ ಮಳೆ
Team Udayavani, May 24, 2019, 10:17 AM IST
ಧಾರವಾಡ: ಕಳೆದ ಎರಡು ದಿನಗಳಿಂದ ಬರೀ ಮಿಂಚು, ಗಾಳಿಯೊಂದಿಗೆ ಸದ್ದು ಮಾಡುತ್ತಿದ್ದ ಮಳೆರಾಯ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿಸಿದ್ದು, ತಂಪಾದ ವಾತಾವರಣ ಉಂಟಾಗಿದೆ. ರಾತ್ರಿ 8 ಗಂಟೆಗೆ ಭಾರೀ ಪ್ರಮಾಣದಲ್ಲಿ ಗುಡುಗು, ಮಿಂಚು, ಸಿಡಿಲಿನ ಅಬ್ಬರೊಂದಿಗೆ ಆರಂಭಗೊಂಡ ಮಳೆ, ಸುಮಾರು ಅರ್ಧ ತಾಸಿಗೂ ಹೆಚ್ಚು ಸಮಯ ಧಾರಾಕಾರವಾಗಿ ಸುರಿಯಿತು. ಇದರಿಂದ ಬಿಸಿಲು ಹಾಗೂ ಸೆಕೆಯಿಂದ ಕೆಂಗೆಟ್ಟಿದ್ದ ಧಾರಾನಗರಿ ಜನತೆಗೆ ತಂಪಿನ ಮುದ ನೀಡಿದರೆ, ನಗರದ ಗಟಾರುಗಳು ಮಳೆ ನೀರಿನಿಂದ ಸ್ವಚ್ಛಗೊಂಡವು. ಇದಲ್ಲದೇ ರಸ್ತೆಯ ತುಂಬೆಲ್ಲ ನೀರು ತುಂಬಿದ್ದರಿಂದ ಟೋಲನಾಕಾ ಬಳಿ ಕೆಲ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಅಣ್ಣಿಗೇರಿಯಲ್ಲಿ ಭಾರೀ ಗಾಳಿ: ಗುರುವಾರ ಸಂಜೆ ಸುಮಾರು 20 ನಿಮಿಷಕ್ಕೂ ಹೆಚ್ಚು ಬೀಸಿದ ಬಿರುಗಾಳಿಗೆ ಪಟ್ಟಣದ ಜನ ಅಕ್ಷರಶಃ ಭಯಭೀತರಾಗಿದ್ದರು. ನೂರಾರು ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದವು. ವಿದ್ಯುತ್ ಕಂಬಗಳು ನೆಲ ಕಚ್ಚಿದವು. ವಾಹನಗಳ ಚಾಲನೆ ಮಾಡಲಾಗದೆ ಸವಾರರು ಪರದಾಡುವಂತಾಗಿತ್ತು. ಬಿರುಗಾಳಿ ನಿಂತ ನಂತರ ತಣ್ಣನೆಯ ಸಿಳ್ಳು ಗಾಳಿ ಬೀಸತೊಡಗಿತು. ರಾತ್ರಿಯಿಡೀ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆ ನಂತರವೇ ಪುನರಾರಂಭಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು