ಅರ್ಥಶಾಸ್ತ್ರ ವಿಷಯದಲ್ಲಿ ಹೊಸತನ ಅಗತ್ಯ 


Team Udayavani, Dec 12, 2018, 5:26 PM IST

12-december-24.gif

ಧಾರವಾಡ: ಇಂದಿನ ಉದ್ಯೋಗ ಮತ್ತು ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಅರ್ಥಶಾಸ್ತ್ರ ವಿಷಯದಲ್ಲಿ ಹೊಸತನ ತರಬೇಕಾಗಿದೆ ಎಂದು ಕವಿವಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಆರ್‌.ಆರ್‌. ಬಿರಾದಾರ ಹೇಳಿದರು.

ಕರ್ನಾಟಕ ಕಲಾ ಮಹಾವಿದ್ಯಾಲಯ ಮತ್ತು ಕವಿವಿ ವ್ಯಾಪ್ತಿಯ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಧ್ಯಾಪಕರ ಪರಿಷತ್ತು ಸಹಯೋಗದಲ್ಲಿ ಕಾಲೇಜಿನ ಬಿಬಿಎ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಹೊಸ ವಿಷಯಗಳ ಅಳವಡಿಕೆ ಸೇರಿದಂತೆ ಪಠ್ಯಕ್ರಮದಲ್ಲಿ ಹೊಸತನ ತರಬೇಕಾಗಿದೆ. ಜಾಗತಿಕರಣದ ಪ್ರಭಾವದಿಂದ ಮಾನವ ಸಂಪನ್ಮೂಲ ಬಲಪಡಿಸಲು ಅರ್ಥಶಾಸ್ತ್ರ ವಿಷಯ ಶಿಕ್ಷಣ ವ್ಯವಸ್ಥೆಯಲ್ಲಿ ಕಂಪ್ಯೂಟರ್‌ ತಂತ್ರಜ್ಞಾನ ಮತ್ತು ಸಂಖ್ಯಾಶಾಸ್ತ್ರ ವಿಷಯಗಳನ್ನು ಉದ್ಯೋಗದ ಬೇಡಿಕೆಯ ಅನುಗುಣವಾಗಿ ಮಾರ್ಪಾಡು ಮಾಡಬೇಕು ಎಂದರು.

ಪ್ರೊ| ಡಿ.ಎಂ. ನಂಜುಂಡಪ್ಪನರ ಹೆಸರಿನಲ್ಲಿ ಕವಿವಿಯಲ್ಲಿ ಒಂದು ಫೌಂಡೇಶನ್‌ ಸ್ಥಾಪಿಸಬೇಕು. ಅದರ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿದರೆ ಅರ್ಥಶಾಸ್ತ್ರ ಬೆಳವಣಿಗೆಗೆ ಸಹಾಯಕವಾಗಲಿದೆ. ಈ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದು ಹೇಳಿದರು. ಡಾ| ಕೆ.ಷಣ್ಮುಖಪ್ಪ ಮಾತನಾಡಿ, ಇಂದು ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಡಿಮೆ ಆಗುತ್ತಿದ್ದು, ಆತಂಕದ ವಿಷಯವಾಗಿದೆ. ಅರ್ಥಶಾಸ್ತ್ರ ಪ್ರಾಧ್ಯಾಪಕರು ಇದನ್ನು ಉಳಿಸಲು-ಬೆಳೆಸಲು ಪಣ ತೊಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ಪ್ರೊ| ಕಾಮನಹಳ್ಳಿ ಮಾತನಾಡಿ, ಇಂದಿನ ಯುವ ಶಿಕ್ಷಕರು ಅರ್ಥಶಾಸ್ತ್ರ ವಿಷಯವನ್ನು ಉಳಿಸಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ವಿದ್ಯಾರ್ಥಿಗಳನ್ನು ಈ ವಿಷಯಕ್ಕೆ ಬರಲು ಹೆಚ್ಚು ಆಕರ್ಷಿತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿವಿಧ ಕಾಲೇಜಿನ ನಿವೃತ್ತಿ ಹೊಂದಿದ ಪ್ರಾಧ್ಯಾಪಕರಾದ ಡಾ| ಬಿ.ಸಿ. ಜವಳಿ, ಪ್ರೊ| ಪಂಚಾಕ್ಷರಯ್ಯ ಮತ್ತು ಡಾ| ಬೆಟದೂರ ಅವರನ್ನು ಅರ್ಥಶಾಸ್ತ್ರ ಕಾಲೇಜು ಶಿಕ್ಷಕರ ಪರಿಷತ್ತಿನಿಂದ ಸನ್ಮಾನಿಸಲಾಯಿತು. ಡಾ| ಲಿಂಗರಾಜ ಅಂಗಡಿ ಮಾತನಾಡಿದರು. ಮುಂದಿನ ಎರಡು ವರ್ಷ ಅವಧಿಗೆ ಕವಿವಿ ವ್ಯಾಪ್ತಿಯ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಧ್ಯಾಪಕರ ಪರಿಷತ್ತಿಗೆ ಹೊಸ ಪದಾಧಿ ಕಾರಿಗಳನ್ನು ನೇಮಕ ಮಾಡಲಾಯಿತು. ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಡಾ| ಬಿ.ಎಫ್‌. ಚಾಕಲಬ್ಬಿ, ಕವಿವಿ ಕಾಲೇಜು ಶಿಕ್ಷಕ ಸಂಘಧ ಅಧ್ಯಕ್ಷ ಡಾ| ಬಸವರಾಜ ಬೆಳವಟಗಿ, ಡಾ| ಸಿ.ಎಚ್‌. ಪಾಟೀಲ, ಡಾ| ಶಾಂತಯ್ಯ ಡಾ| ಎನ್‌.ಸಿ. ಪಾಟೀಲ, ಡಾ| ಅನ್ನಪೂರ್ಣಾ ಎಸ್‌., ಪ್ರೊ| ರಮೇಶ ನಾಯ್ಕ ಇನ್ನಿತರರಿದ್ದರು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.