ಭಾರತಕ್ಕಿದೆ ಮಾನವ ಸಹಿತ ಮಂಗಳಯಾನ ಸಾಮರ್ಥ್ಯ


Team Udayavani, Dec 3, 2018, 4:58 PM IST

3-december-18.gif

ಧಾರವಾಡ: 2020-22ರೊಳಗೆ ಮಾನವ ಸಹಿತ ಮಂಗಳಯಾನ ಮಾಡಿದ 4ನೇ ದೇಶವಾಗಿ ಹೊರ ಹೊಮ್ಮವ ಸಾಮರ್ಥ್ಯ ಭಾರತಕ್ಕಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ| ಕೆ. ಕಸ್ತೂರಿ ರಂಗನ್‌ ಹೇಳಿದರು. ನಗರದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಠ್ಠಲ ಮಕ್ಕಳ ಆಸ್ಪತ್ರೆ 40ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಸಾಧ್ಯವಾದರೆ ಕುಟುಂಬ ಸಮೇತ ಮಂಗಳ ಗ್ರಹಕ್ಕೂ ರಜೆ ದಿನ ಕಳೆಯಲು ಹೋಗುವ ದಿನಗಳು ದೂರವಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳಿಗೆ 2020-22ರೊಳಗೆ ಮಂಗಳ ಗ್ರಹದ ಮೇಲೆ ಮನುಷ್ಯನನ್ನು ಕಳುಹಿಸಬೇಕು ಎಂದು ತಿಳಿಸಿದ್ದಾರೆ. ಇಸ್ರೋ ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತರುವ ಸಾಮರ್ಥ್ಯ ಹೊಂದಿದ್ದು, ಅತೀ ಶೀಘ್ರ ನೆರವೇರಲಿದೆ. ಭೂಮಿ ಬಿಟ್ಟು ಬೇರೆ ಗ್ರಹಗಳ ಮೇಲೆ ಮನುಷ್ಯ ವಾಸಿಸುವ ಸರ್ವ ಲಕ್ಷಣ ಗೋಚರಿಸುತ್ತಿದೆ ಎಂದು ಹೇಳಿದರು.

ಮಕ್ಕಳಿಗೆ ಒತ್ತಡ ಬೇಡ: ಪೋಷಕರ ಒತ್ತಡದಿಂದ ಮಕ್ಕಳು ಖನ್ನತೆ ಒಳಗಾಗುತ್ತಿರುವುದು ಕಂಡು ಬರುತ್ತಿದೆ. ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ಬಿಡಬೇಕು. 8 ವರ್ಷದವರೆಗೆ ಮಕ್ಕಳ ಮೆದುಳು ಸಹಜವಾಗಿ ಬೆಳೆಯಬೇಕೇ ಹೊರತು ಅದಕ್ಕೆ ಒತ್ತಡ ಹಾಕಬಾರದು. ಮಗು ನೈಸರ್ಗಿಕವಾಗಿ ಬೆಳೆಯಲು ಪೂರಕ ವಾತಾವರಣ ನಿರ್ಮಿಸಬೇಕು ಎಂದರು.

ವೈದ್ಯರ ತಂಡ ನೀಡುವಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದ್ದು, ಸದ್ಯ ರಾಜ್ಯದಲ್ಲಿ 58 ಸಾವಿರ ವೈದ್ಯರಿದ್ದಾರೆ. ಆದರೆ ಇನ್ನೂ 16 ಸಾವಿರ ವೈದ್ಯರ ಕೊರತೆ ಇದೆ. ಈ ಕೊರತೆ ನೀಗಿಸುವ ಕೆಲಸವನ್ನು ಹಂತ-ಹಂತವಾಗಿ ಸರಕಾರ ಮಾಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿ, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೆಚ್ಚು ಒತ್ತು ನೀಡಿವೆ. ಆಯುಷ್ಮಾನ್‌ ಭಾರತ ಯೋಜನೆಗೆ ಕರ್ನಾಟಕ ಕೂಡಾ ನೆರವು ನೀಡಿದೆ. ಶಿಕ್ಷಣ ಮತ್ತು ಆರೋಗ್ಯ ವಾಣಿಜ್ಯೀಕರಣ ಆಗಬಾರದು. ಶಿಕ್ಷಣ ಸಂಸ್ಥೆಗಳು ಹಾಗೂ ಆರೋಗ್ಯ ಸಂಸ್ಥೆಗಳು ಹೆಚ್ಚು ದಾನ ಮಾಡಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.

ಮುಂಬೈನ ಏಷಿಯನ್‌ ಕ್ಯಾನ್ಸರ್‌ ಇನ್ಸ್‌ಟಿಟ್ಯೂಟ್‌ ಚೇರ್‌ಮನ್‌ ಪದ್ಮಶ್ರೀ ಡಾ| ರಮಾಕಾಂತ ದೇಶಪಾಂಡೆ, ಎಸ್‌.ಆರ್‌. ಕೌಲಗುಡ್ಡ , ಜಿ.ಸಿ. ತಲ್ಲೂರ ಮಾತನಾಡಿದರು. ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ, ಜಿಲ್ಲಾಧಿಕಾರಿ ದೀಪಾ ಚೋಳನ್‌ ಸೇರಿದಂತೆ ಆಸ್ಪತ್ರೆಯ ಅಭಿಮಾನಿಗಳು, ದೇಶಪಾಂಡೆ ಕುಟುಂಬದ ಹಿತೈಷಿಗಳು ಇದ್ದರು.

ವಿಠ್ಠಲ ಮಕ್ಕಳ ಆಸ್ಪತ್ರೆ ಸಂಸ್ಥಾಪಕ ಡಾ| ರಾಜನ ದೇಶಪಾಂಡೆ ಪ್ರಾಸ್ತಾವಿಕ ಮಾತನಾಡಿದರು. ಡಾ| ಕವನ ದೇಶಪಾಂಡೆ, ಕವಿತಾ ದೇಶಪಾಂಡೆ ಸ್ವಾಗತಿಸಿದರು. ಡಾ| ಪಲ್ಲವಿ ದೇಶಪಾಂಡೆ ಪರಿಚಯಿಸಿ, ವಂದಿಸಿದರು. ಇದಕ್ಕೂ ಮುನ್ನ ಖ್ಯಾತ ಗಾಯಕಿ ಸಂಗೀತಾ ಕಟ್ಟಿ ಅವರಿಂದ ಸಂಗೀತ ಕಛೇರಿ ಜರುಗಿತು.

ಕರ್ನಾಟಕದ ಪ್ರಕೃತಿ, ಔಷಧ ಹಾಗೂ ಜಲಮೂಲಗಳ ಬಗ್ಗೆ ಕರ್ನಾಟಕ ಜ್ಞಾನ ಆಯೋಗ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ. ಈ ಪೈಕಿ ಕಾವೇರಿ ಗ್ಯಾಲರಿ ಯೋಜನೆ ಸಿದ್ಧಪಡಿಸಿದ್ದು, ಕಾವೇರಿ ನದಿಯ ಸಮಗ್ರ ಮಾಹಿತಿ ದೊರೆಯಲಿದೆ. ಜೊತೆಗೆ ಮಡಿವಾಳ ಕೆರೆಯಲ್ಲಿ ಜೀವ ವೈವಿಧ್ಯ ಪಾರ್ಕ್‌ ಸಹ ಮಾಡಲಾಗುತ್ತಿದೆ.
.ಡಾ| ಕೆ. ಕಸ್ತೂರಿ ರಂಗನ್‌,
ಅಧ್ಯಕ್ಷರು, ಕರ್ನಾಟಕ ಜ್ಞಾನ ಆಯೋಗ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.