Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು
ಮಹಿಳಾ ಪೊಲೀಸ್ ಸಿಬಂದಿಗೆ ಗಂಭೀರ ಗಾಯ... ಅಪರಿಚಿತ ವಾಹನ ಪರಾರಿ
Team Udayavani, Sep 20, 2023, 9:30 PM IST
ಧಾರವಾಡ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಛಬ್ಬಿ ಗಣೇಶನ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಮರಳುತ್ತಿದ್ದ ಪೊಲೀಸ್ ಪೇದೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹು-ಧಾ ಬೈಪಾಸ್ ನಲ್ಲಿ ಬಳಿ ನಡೆದಿದೆ.
ಹುಚ್ಚೇಶ ಮಲ್ಲನಗೌಡ ಹಿರೇಗೌಡರ ಮೃತಪಟ್ಟ ಪೊಲೀಸ್ ಆಗಿದ್ದು, ಇನ್ನು ಬೈಕಿನ ಹಿಂಬದಿ ಕುಳಿತಿದ್ದ ಲಕ್ಷ್ಮೀ ಎಂಬ ಮಹಿಳಾ ಪೊಲೀಸ್ಗೆ ಗಂಭೀರ ಗಾಯಗಳಾಗಿವೆ.
ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನ ಬಂದೋಬಸ್ತ್ಗಾಗಿ ಛಬ್ಬಿಗೆ ಕಳಿಸಲಾಗಿತ್ತು. ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ಪೊಲೀಸ್ ಮೃತ ದೇಹ ರಸ್ತೆಯುದ್ದಕ್ಕೂ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಾರಿಯಾಗಿರುವ ವಾಹನದ ಮಾಹಿತಿ ಪಡೆಯುತ್ತಿದ್ದಾರೆ.
ಜೂಜಾಡುತ್ತಿದ್ದ 16 ಜನರ ಬಂಧನ
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹದಿನಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗರಗ ಗ್ರಾಮದ ಸಾರ್ವಜನಿಕ ಜಾಗೆಯಲ್ಲಿ ಇಸ್ಪೀಟು ಆಡುತ್ತಿದ್ದ ಸಮಯದಲ್ಲಿ ದಾಳಿ ನಡೆಸಿ 16 ಜನರನ್ನು ಬಂಧಿಸಿದ್ದಾರೆ . ಆರೋಪಿತರಿಂದ 33,000 ರೂಪಾಯಿ ನಗದು ಮತ್ತು ಜೂಜಾಟ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ . ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಿಪಿಐ ಸಮೀರ ಮುಲ್ಲಾ ಅವರ ನೇತೃತ್ವದಲ್ಲಿ ಪಿಎಸ್ ಐ ಪ್ರಕಾಶ ಡಿ . ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು . ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ