ಧಾರವಾಡ: ಸಂವಹನ ಮಾಧ್ಯಮದಿಂದ ಕಿರಿದಾದ ಜಗತ್ತು: ಪ್ರೊ|ಪ್ರಜ್ಞಾ

ರೇಡಿಯೋ ಅಕ್ಕಮ್ಮನ ಮಾತು ಕೇಳುವುದೇ ಎಲ್ಲರಿಗೂ ಕುತೂಹಲ

Team Udayavani, Feb 24, 2023, 3:26 PM IST

ಧಾರವಾಡ: ಸಂವಹನ ಮಾಧ್ಯಮದಿಂದ ಕಿರಿದಾದ ಜಗತ್ತು: ಪ್ರೊ|ಪ್ರಜ್ಞಾ

ಧಾರವಾಡ: ಸಂವಹನ ಮಾಧ್ಯಮದ ಪ್ರಭಾವದಿಂದ ಇಂದು ಇಡೀ ಜಗತ್ತೆ ಕಿರಿದಾಗಿದ್ದು, ಅಂಗೈಯಲ್ಲೇ ಜಗತ್ತು ಇರುವಂತಹ ಕ್ಷಿಪ್ರ ಬೆಳವಣಿಗೆ ಹೊಂದಿದೆ ಎಂದು ಕಿತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಪ್ರೊ.ಪ್ರಜ್ಞಾ ಮತ್ತಿಹಳ್ಳಿ ಹೇಳಿದರು.

ನಗರದ ಕವಿಸಂನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗ ಹಮ್ಮಿಕೊಂಡಿದ್ದ ಸುಶೀಲಾ ನಾಯಕ (ರೇಡಿಯೋ ಅಕ್ಕಮ್ಮ) ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಹಿಳೆ ಹಾಗೂ ಸಂವಹನ ಮಾಧ್ಯಮ ವಿಷಯ ಕುರಿತು ಅವರು ಮಾತನಾಡಿದರು.

40ರ ದಶಕದಲ್ಲಿ ಭಾರತೀಯ ಅನೇಕ ಮಹಿಳೆಯರು ಸಂವಹನ ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಖ್ಯಾತ ಪತ್ರಕರ್ತೆಯಾಗಿದ್ದ ಅಮೀತಾ ಮಲ್ಲಿಕ ದೇಶದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸಂದರ್ಶನ ದಿಟ್ಟತನದಿಂದ ಮಾಡಿದ್ದಲ್ಲದೇ, ಅನೇಕ ಅಂತಾರಾಷ್ಟ್ರೀಯ ಖ್ಯಾತ ವ್ಯಕ್ತಿಗಳನ್ನು ಸಂದರ್ಶನ ಮಾಡಿದ ಕೀರ್ತಿ ಅವರದ್ದಾಗಿದೆ.

ಕೇರಳದ ಇಂದಿರಾ ಜೊಶಫ್‌ ಸಹ ಒಬ್ಬ ಅತ್ಯುತ್ತಮ ಸುದ್ದಿ ನಿವೇದಕರಾಗಿ ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ಇಂತಹ ದಿಟ್ಟ ಪತ್ರಕರ್ತರ, ಸುದ್ದಿ ವಾಚಕರ ಸಾಧನೆ ಇಂದಿನ ಯುವ ವರದಿಗಾರರಿಗೆ ಪರಿಚಯಿಸುವ ಅಗತ್ಯವಿದೆ. ಜತೆಗೆ ಅಂತಹ ಸಾಧಕರ ಸಾಧನೆ ದಾಖಲೀಕರಣ ಮಾಡುವ ತುರ್ತು ಅಗತ್ಯವಿದೆ ಎಂದರು.

ಸಮುದಾಯ ರೇಡಿಯೋಗಳು ಸಹ ಹರಿಯಾಣ, ಜಾರ್ಖಂಡ್‌ ರಾಜ್ಯದಲ್ಲಿ ಪ್ರಾರಂಭವಾಗಿ ಆ ಪ್ರಾದೇಶಿಕ ಪ್ರದೇಶದ ಜನರ ಸಾಂಸ್ಕೃತಿಕ ಬದುಕಿನ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿವೆ. 2014ರಲ್ಲಿ ಬೆಂಗಳೂರಿನಲ್ಲೂ ಅಂತಹ ಸಮುದಾಯ ರೇಡಿಯೋ ಆರಂಭಿಸಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ|ರಾಜೇಶ್ವರಿ ಮಹೇಶ್ವರಯ್ಯ ಮಾತನಾಡಿ, 60ರ ದಶಕದಲ್ಲಿ ಧಾರವಾಡ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುತ್ತಿದ್ದ ಗಿಳಿವಿಂಡೊ ಕಾರ್ಯಕ್ರಮ ಹೆಚ್ಚು ಪ್ರಭಾರದಲ್ಲಿತ್ತು.

ಸುಶೀಲಾ ನಾಯಕರು (ರೇಡಿಯೋ ಅಕ್ಕಮ್ಮ) ನಡೆಸಿಕೊಡುತ್ತಿದ್ದ ಈ ಕಾರ್ಯಕ್ರಮದಲ್ಲಿ ರೇಡಿಯೋ ಅಕ್ಕಮ್ಮನ ಮಾತು ಕೇಳುವುದೇ ಎಲ್ಲರಿಗೂ ಕುತೂಹಲ, ಸಂತೋಷ. ಅವರ ನಡವಳಿಕೆ, ಧ್ವನಿ, ಸರಳತೆ ಎಲ್ಲರಿಗೂ ಅಚ್ಚಮೆಚ್ಚಾಗಿತ್ತು ಎಂದರು. ಶಿವಾನಂದ ಭಾವಿಕಟ್ಟಿ, ಶ್ರೀಧರ ಗಸ್ತಿ, ಮಹಾಂತೇಶ ನರೇಗಲ್‌, ಎಂ.ಎಂ. ಚಿಕ್ಕಮಠ, ನಿಂಗಣ್ಣ ಕುಂಟಿ, ಬಸಯ್ಯ ಶಿರೋಳ ಸೇರಿದಂತೆ ಹಲವರು ಇದ್ದರು.

ಕವಿವಿ ಪ್ರಸಾರಾಂಗ ನಿರ್ದೇಶಕ ಡಾ| ಚಂದ್ರಶೇಖರ ರೊಟ್ಟಿಗವಾಡ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಹಲಗತ್ತಿ ಸ್ವಾಗತಿಸಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಡಾ|ಧನವಂತ ಹಾಜವಗೋಳ ವಂದಿಸಿದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.