22ರಿಂದ ಧಾರವಾಡ ಕೃಷಿ ಮೇಳ
Team Udayavani, Sep 13, 2018, 5:27 PM IST
ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಸೆ.22ರಿಂದ 25ರ ವರೆಗೆ ಕೃಷಿ ಮೇಳ ಹಮ್ಮಿಕೊಳ್ಳಲಾಗಿದ್ದು, ಪ್ರಸಕ್ತ ಕೃಷಿ ಮೇಳದಲ್ಲಿ ವಸ್ತು ಪ್ರದರ್ಶನಕ್ಕೆ ಸುಮಾರು 800ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗಿದೆ. ಈ ಮೇಳಕ್ಕೆ ಆಗಮಿಸುವ ರೈತರಿಗೆ ತಾಂತ್ರಿಕತೆಗಳನ್ನು ಮನದಟ್ಟಾಗಿ ತಿಳಿಸಲು ಸಂಶೋಧನಾ ಕ್ಷೇತ್ರಗಳನ್ನು ವಿಜ್ಞಾನಿಗಳು ಸಿದ್ಧಪಡಿಸಿದ್ದಾರೆ. ಅದೇ ರೀತಿ ಪ್ರಸಕ್ತ ವರ್ಷದ ಕೃಷಿ ಮೇಳದ ಘೋಷವಾಕ್ಯವಾದ ಸಿರಿಧಾನ್ಯ ಬಳಸಿ-ಆರೋಗ್ಯ ಉಳಿಸಿ ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದು, ವಿಶೇಷವಾಗಿ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ. ಸಿರಿಧಾನ್ಯಗಳ ಬೀಜಗಳ ಮಾರಾಟದ ವ್ಯವಸ್ಥೆ, ತಾಂತ್ರಿಕ ವರ್ಗಾವಣೆ ಹಾಗೂ ಪ್ರಾತ್ಯಕ್ಷಿಕೆಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ.
ಅದರಂತೆ, ಕೃಷಿ ಮೇಳದ ಮುಖ್ಯ ಆಕರ್ಷಣಿಯ ಭಾಗವಾದ ಮತ್ಸ್ಯ ಮೇಳವನ್ನೂ ಕೂಡ ಬೃಹತ್ ಪ್ರಮಾಣದಲ್ಲಿ ಏರ್ಪಡಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಒಣಬೇಸಾಯ ತಾಂತ್ರಿಕತೆಗಳಿಗೆ ಹೆಚ್ಚು ಒತ್ತುಕೊಟ್ಟು ಕರ್ನಾಟಕ ಸರಕಾರದ ಕೃಷಿಭಾಗ್ಯ ಯೋಜನೆಯ ಅಂಶಗಳಾದ ಕೃಷಿ ಹೊಂಡ, ಸೂಕ್ಷ್ಮನೀರಾವರಿ, ಸಮಗ್ರ ಕೃಷಿ ಪದ್ಧತಿ, ಹಸಿರು ಮನೆಯಲ್ಲಿ ಹೂ ಮತ್ತು ತರಕಾರಿ ಬೆಳೆ ಬೆಳೆಯುವ ಕುರಿತು ರೈತರಿಗೆ ಮನವರಿಕೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜೈವಿಕ ಇಂಧನದ ಉತ್ಪಾದನೆ, ಸಂಸ್ಕರಣೆ ಮತ್ತು ಅದನ್ನು ವಾಹನಗಳಿಗೆ ಬಳಕೆ ಬಗ್ಗೆ ಮಾಹಿತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್