ಧಾರವಾಡ : ಆಕಾಶವಾಣಿಯಲ್ಲಿ ಇನ್ನಿಲ್ಲ ನಮ್ಮೂರ ಸಂಸ್ಕೃತಿ

 13 ರಿಂದ ಸದ್ದಿಲ್ಲದೇ ಹೊಸ ನಿಯಮ ಜಾರಿ! ­ಸ್ಥಳೀಯ ಕಾರ್ಯಕ್ರಮಗಳಿಗೆ ಕೊಕ್‌ !­ಬರೀ ಬೆಂಗಳೂರು-ದೆಹಲಿಗೆ ಒತ್ತು

Team Udayavani, Apr 17, 2021, 7:30 PM IST

fhyfghnr

ಧಾರವಾಡ: ಆಕಾಶವಾಣಿ, ಧಾರವಾಡ ಕೇಂದ್ರ, ಇದೀಗ ಜನಪದ ಸಂಗೀತ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದ ಶಾಂತವ್ವ ಗಲಗಲಿ ಹಾಗೂ ಸಂಗಡಿಗರು ಹಾಡಿರುವ ಸೋಬಾನೆ ಪದಗಳನ್ನು ಕೇಳಲಿದ್ದೀರಿ. ನಂತರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿಯ ಬೀರೇಶ್ವರ ತಂಡದಿಂದ ಡೊಳ್ಳಿನ ಪದ, ಮಧ್ಯಾಹ್ನ ಶ್ರೋತೃಗಳ ಪತ್ರಾಭಿಲಾಷೆಯ ಗಿಳಿವಿಂಡು ಕಾರ್ಯಕ್ರಮ. ಸಂಜೆ ವಚನಗಾಯನ, ರಾತ್ರಿ ನಾಟಕ, ಕೊನೆಗೆ ಸಿತಾರ್‌ ವಾದನ ಕೇಳಲಿದ್ದೀರಿ…

ಇನ್ನು ಮುಂದೆ ಹೀಗೆ ಧಾರವಾಡ ಆಕಾಶವಾಣಿಯಿಂದ ಯಾವುದೇ ಸ್ಥಳೀಯ ಕಾರ್ಯಕ್ರಮದ ವಿವರ ಬರುವುದಿಲ್ಲ. ಬದಲಿಗೆ ಎಲ್ಲವೂ ನೇರವಾಗಿ ಬೆಂಗಳೂರು ಮತ್ತು ದೆಹಲಿ ಆಕಾಶವಾಣಿ ಕೇಂದ್ರದ ಹಿಡಿತಕ್ಕೆ ಸೇರಿಕೊಂಡಿದ್ದು, ಇನ್ನೇನಿದ್ದರೂ ಖಾಸಗಿ ಮತ್ತು ವಿದೇಶಿ ಕಂಪನಿಗಳು ನೀಡುವ ಪ್ರಾಯೋಜಿತ ಕಾರ್ಯಕ್ರಮಗಳು ಮಾತ್ರ ಪ್ರಸಾರವಾಗಲಿವೆ. ಇಂತಹ ಒಂದು ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ಇದಕ್ಕೆ ಇಂಬು ನೀಡುವಂತೆಯೇ ಏ.13ರಿಂದ ಧಾರವಾಡ ಆಕಾಶವಾಣಿಯ ಕಾರ್ಯಕ್ರಮಗಳ ಪಟ್ಟಿಯೇ ಬದಲಾಗಿದೆ. ಎಲ್ಲವೂ ಬೆಂಗಳೂರು ಕೇಂದ್ರಿತ ಕಾರ್ಯಕ್ರಮಗಳು ಪ್ರಸಾರವಾಗುತ್ತಿವೆ.

ಧಾರವಾಡ ಆಕಾಶವಾಣಿ ದೇಶದಲ್ಲಿಯೇ ಅತ್ಯಂತ ಹಳೆಯದಾದ ಆಕಾಶವಾಣಿ ಕೇಂದ್ರ. 1950, ಜ.8ರಂದು ಅಂದಿನ ಕೇಂದ್ರ ಪ್ರಸಾರ ಖಾತೆ ಸಚಿವ ಆರ್‌.ಎರ್‌. ದಿವಾಕರ್‌ ಈ ಕೇಂದ್ರವನ್ನು ಉದ್ಘಾಟಿಸಿದ್ದರು. ಪಂ| ಗಂಗೂಬಾಯಿ ಹಾನಗಲ್‌ ವಂದೇ ಮಾತರಂ ಹಾಡುವ ಮೂಲಕ ಕಾರ್ಯಕ್ರಮ ಕೇಂದ್ರಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಉತ್ತರ ಕರ್ನಾಟಕ ಭಾಗದ ಕಲೆ, ಸಂಸ್ಕೃತಿ, ಜಾನಪದ ಸಂಗೀತ, ಸುಗಮ ಸಂಗೀತ, ವಾದ್ಯವೃಂದ, ವಾದ್ಯ ಸಂಗೀತ, ವಚನ ಸಂಗೀತ ಸೇರಿದಂತೆ ಅನೇಕ ಮೌಖೀಕ ಪರಂಪರೆಯ ಕಲಾ ಪ್ರಕಾರಗಳಿಗೆ ಜೀವಾಳವಾಗಿ ನಿಂತಿದ್ದ ಧಾರವಾಡ ಆಕಾಶವಾಣಿ ಇದೀಗ ನಿತ್ರಾಣಗೊಂಡಿದೆ. ಬೆಂಗಳೂರು ಆಕಾಶವಾಣಿ ಕೇಂದ್ರದ ಮುಷ್ಟಿಯಲ್ಲಿ ಸಿಲುಕಿಕೊಂಡಿದೆ.

ಡಾ| ಪಾಪು ಸಿಂಹಧ್ವನಿ ಇಲ್ಲ

ಧಾರವಾಡ ಆಕಾಶವಾಣಿ ಕೇಂದ್ರದ ಅಭಿವೃದ್ಧಿ ಸೇರಿದಂತೆ ಈ ಕೇಂದ್ರದಲ್ಲಿನ ಎಲ್ಲಾ ಚಟುವಟಿಕೆಗಳ ಮೇಲೂ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರು ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದರು. ರೇಡಿಯೋದಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮಗಳಲ್ಲಿ ಕೊಂಚ ಏರುಪೇರಾದರೂ ನೇರವಾಗಿ ಆಕಾಶವಾಣಿ ನಿಲಯ ನಿರ್ದೇಶಕರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಅಷ್ಟೇಯಲ್ಲ, ಈ ಕೇಂದ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದ ಮಂತ್ರಿಗಳು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸುತ್ತಿದ್ದರು. ಆದರೆ ಇದೀಗ ಡಾ| ಪಾಪು ಇಲ್ಲ ಎನ್ನುವ ಕೊರಗು ಕೂಡ ಇದೆ.

ಆಗಿರುವುದೇನು?

ಪ್ರಸಾರ ಭಾರತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಕಾಶವಾಣಿ ಕೇಂದ್ರದಲ್ಲಿ ಏ.13ರಿಂದ ಹೊಸ ನಿಯಮಗಳು ಜಾರಿಯಾಗಿದ್ದು, ಸ್ಥಳೀಯ ದೇಶಿ ಸೊಗಡಿನ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕಲಾಗಿದೆ. ಚಿಂತನ, ರೈತರಿಗೆ ಸಲಹೆ, ಜನಪದ ಸಂಗೀತ, ಕೃಷಿ ರಂಗ, ಗಿಳಿವಿಂಡು, ಎಳೆಯರ ಬಳಗ, ಸುಗಮ ಸಂಗೀತ, ಬಸವ ಐಸಿರಿ, ಶ್ರೀಕೃಷ್ಣ ಪಾರಿಜಾತ, ದೊಡ್ಡಾಟ ಹೀಗೆ ಹತ್ತಾರು ಕಾರ್ಯಕ್ರಮಗಳಿಗೆ ಸದ್ಯಕ್ಕೆ ಬ್ರೇಕ್‌ ಬಿದ್ದಿದೆ. ಅದೂ ಅಲ್ಲದೇ ಯುವರಂಗದಂತಹ ಕಾರ್ಯಕ್ರಮದಲ್ಲಿ ದೇಶ, ಭಾಷೆ, ಸಂಸ್ಕೃತಿ ಸೇರಿದಂತೆ ಅನೇಕ ಉತ್ತಮ ಸಂಗೀತಗಳ ಮೇಲೆ ಬೆಳಕು ಚೆಲ್ಲುವ ಚಿಂತನ-ಮಂಥನ ನಡೆಸುವ ಹಾಗೂ ಅದರೊಂದಿಗೆ ಒಂದಿಷ್ಟು ಚಿತ್ರಗೀತೆಗಳನ್ನು ಪ್ರಸಾರ ಮಾಡುವ ಕಾರ್ಯಕ್ರಮಗಳು ಪ್ರಸಾರವಾಗುತ್ತಿಲ್ಲ.

ಉದ್ಘೋಷಕರಿಗೂ ಕುತ್ತು

ಸದ್ಯಕ್ಕೆ ಆಕಾಶವಾಣಿ ಕೇಂದ್ರದಲ್ಲಿ ಬೆರಳೆಣಿಕೆ ಕಾಯಂ ನೌಕರರಿದ್ದಾರೆ. ಇನ್ನುಳಿದಂತೆ ಅರೆಕಾಲಿಕ ಮತ್ತು ಗುತ್ತಿಗೆ ನೌಕರರೇ ಇದ್ದಾರೆ. ಆಕಾಶವಾಣಿಯ ಜೀವಾಳವೇ ಆಗಿರುವ ಉದ್ಘೋಷಕರಿಗೆ ಇದೀಗ ಸಂಕಷ್ಟ ಎದುರಾಗಿದೆ. ತಾತ್ಕಾಲಿಕವಾಗಿ ಇಲ್ಲಿ ಉದ್ಘೋಷಕರಾಗಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ ತಿಂಗಳಿಗೆ 6 ದಿನ ಕಾರ್ಯಕ್ರಮ ನಿರ್ವಹಣೆ ನೀಡಲಾಗುತ್ತಿದ್ದು, ಪ್ರತಿ ಕಾರ್ಯಕ್ರಮಕ್ಕೆ 1300 ರೂ. ನೀಡಲಾಗುತ್ತಿದೆ. ಸ್ಥಳೀಯವಾಗಿರುವ ಸಂಸ್ಕೃತಿ, ಕಲೆ, ಕಲಾವಿದರು ಮತ್ತು ವಿಭಿನ್ನ ಪ್ರತಿಭೆಗಳನ್ನು ಗುರುತಿಸಿ ಕಾರ್ಯಕ್ರಮಗಳ ಮೂಲಕ ಪ್ರಸಾರ ಮಾಡುವುದು ಇವರೇ. ಈ ಕಾರ್ಯಕ್ರಮಗಳೇ ಇಲ್ಲದೆ ಹೋದರೆ ಉದ್ಘೋಷಕರು ಕೆಲಸ ಕಳೆದುಕೊಳ್ಳುವುದು ನಿಶ್ಚಿತ.

ಬರೀ ಧ್ವ ನಿಯಲ್ಲೋ ಅಣ್ಣಾ

ಧಾರವಾಡ ಆಕಾಶವಾಣಿ ಕೇಂದ್ರ ಬರೀ ಸಂಪರ್ಕ ಮಾಧ್ಯಮವಾಗಿ ಕೆಲಸ ನಿರ್ವಹಿಸಿಲ್ಲ. ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದ ಸಾಹಿತಿಗಳು, ಕಲಾವಿದರು, ಸಂಗೀತಗಾರರನ್ನು ಹುಟ್ಟು ಹಾಕಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡಿದೆ. ಹಿಂದೂಸ್ತಾನಿ ಸಂಗೀತದ ದಿಗ್ಗಜರಾದ ಪಂ| ಮಲ್ಲಿಕಾರ್ಜುನ ಮನ್ಸೂರ, ಪಂ| ಭೀಮಸೇನ್‌ ಜೋಶಿ, ಪಂ| ಗಂಗೂಬಾಯಿ ಹಾನಗಲ್‌ ಅಂತವರು, ಸಿತಾರ್‌ ವಾದನದಲ್ಲಿ ಬಾಲೆಖಾನ್‌ ಸಹೋದರರು, ಜಾನಪದ ಸಂಗೀತದಲ್ಲಿ ಬಾಳಪ್ಪ ಹುಕ್ಕೇರಿ, ರಂಗಭೂಮಿಯಲ್ಲಿ ನಾಡೋಜ ಡಾ| ಏಣಗಿ ಬಾಳಪ್ಪ, ಚಿಂತನ ಮತ್ತು ವಿಚಾರ ವಾಗ¾ಯದಲ್ಲಿ ಡಾ| ಎಂ.ಎಂ.ಕಲಬುರ್ಗಿ, ಡಾ| ಗಿರೀಶ ಕಾರ್ನಾಡ, ಜಾನಪದ ಕ್ಷೇತ್ರದಲ್ಲಿ ಡಾ| ಚಂದ್ರಶೇಖರ ಕಂಬಾರ, ಅಸಂಗತ ವೈಚಾರಿಕತೆ ಕುರಿತು ಪ್ರೊ| ಚಂಪಾ, ಡಾ| ಗಿರಡ್ಡಿ, ಡಾ| ಪಟ್ಟಣಶೆಟ್ಟಿ ಹೀಗೆ ದೊಡ್ಡ ಪಟ್ಟಿಯೇ ಆಕಾಶವಾಣಿಗೆ ಅಂಟಿಕೊಂಡು ನಿಲ್ಲುತ್ತದೆ. ಇಂತಹ ಆಕಾಶವಾಣಿಯಲ್ಲಿ ದೇಶಜ್ಞಾನ ಪರಂಪರೆಯ ಕೊಂಡಿಯೇ ಕಳಚಿದರೆ ಅಲ್ಲಿ ಇನ್ನೇನು ಉಳಿಯಲು ಸಾಧ್ಯ ಎನ್ನುತ್ತಿದ್ದಾರೆ ಶ್ರೋತೃಗಳು.

ಡಾ. ಬಸವರಾಜ್ ಹೊಂಗಲ್

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.