ಧಾರವಾಡ: ಅನುಭವ ಮಂಟಪ-ವಚನ ಸಾಹಿತ್ಯ ಜಗತ್ತಿಗೇ ಮಾದರಿ

ಹೆಚ್ಚು ಬಸವ ತತ್ವ ಪ್ರಚಾರ ಮಾಡೋಣ

Team Udayavani, Mar 14, 2023, 5:25 PM IST

ಧಾರವಾಡ: ಅನುಭವ ಮಂಟಪ-ವಚನ ಸಾಹಿತ್ಯ ಜಗತ್ತಿಗೇ ಮಾದರಿ

ಧಾರವಾಡ: ಬಸವಾದಿ ಶರಣರು ರಚಿಸಿದ ಅನುಭವ ಮಂಟಪ ಹಾಗೂ ವಚನ ಸಾಹಿತ್ಯ ಈ ನಾಡಿಗೆ ಅಷ್ಟೇ ಅಲ್ಲದೆ ಜಗತ್ತಿಗೆ ಮಾದರಿಯಾಗಿದ್ದು, ಇದರ ಪ್ರಸಾರ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಸಪ್ತಗಿರಿ ಲೇಔಟ್‌ನಲ್ಲಿರುವ ಅಲ್ಲಮಪ್ರಭು ನಗರದಲ್ಲಿ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ ಸ್ಮಾರಕ ಭವನಕ್ಕೆ ಭೂಮಿಪೂಜೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಬಸವಾದಿ ಶರಣರು ವಚನಗಳನ್ನು ಸಂರಕ್ಷಣೆ ಮಾಡುವಲ್ಲಿ ತಮ್ಮ ಜೀವನವನ್ನೇ ತೆತ್ತರು. ತದನಂತರ ಡಾ| ಹಳಕಟ್ಟಿಯವರು ಶರಣರು ಸಂಚರಿಸಿದ ಜಾಗದಲ್ಲಿ ಹೋಗಿ ವಚನಗಳನ್ನು ಕ್ರೋಢೀಕರಿಸುವ ಕೆಲಸ ಮಾಡಿದ್ದರು. ವಚನ ಗ್ರಂಥಗಳನ್ನು ಸಿದ್ಧಪಡಿಸಿದರು. ಹಳಕಟ್ಟಿಯವರನ್ನು ನಾವು ನಿತ್ಯ ಸ್ಮರಿಸಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಡಾ| ಹಳಕಟ್ಟಿಯವರು ವಚನ ಸಾಹಿತ್ಯವನ್ನು ಜನಮನಕ್ಕೆ ತಲುಪಿಸಿದ ಕಾರಣ ಇಂದು ಜಗತ್ತಿಗೆ ಬಸವಣ್ಣನವರ ವಚನ ಹಾಗೂ ಅವರ ಅನುಭವ ಮಂಟಪದ ಮಾಹಿತಿ ಲಭ್ಯವಾಗಿದೆ. ಯುವ ಜನರು ಬಸವತತ್ವ ಪ್ರಚಾರ ಮಾಡುವುದರ ಜತೆಗೆ ಬಸವಾದಿ ಶರಣರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕು. ಸ್ಮಾರಕ ಭವನ ನಿರ್ಮಾಣದ ನಂತರ ಮಕ್ಕಳು ಹಾಗೂ ಯುವಜನರನ್ನು ಕರೆಯಿಸಿ ಅವರಿಗೆ ವಚನ ಸಾಹಿತ್ಯ ಹಾಗೂ ಬಸವಾದಿ ಶರಣರ ಸಂದೇಶಗಳನ್ನು ತಿಳಿಸಿಕೊಟ್ಟು ಮತ್ತಷ್ಟು ಹೆಚ್ಚು ಬಸವ ತತ್ವ ಪ್ರಚಾರ ಮಾಡೋಣ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಸವತತ್ವ ಪ್ರಸಾರ ಸಂಸ್ಥೆ ಅಧ್ಯಕ್ಷ ಡಾ| ಎಸ್‌.ಆರ್‌. ಗುಂಜಾಳ ಮಾತನಾಡಿ, ಹಳಕಟ್ಟಿಯವರ ಭವನ ಭೂಮಿಪೂಜೆ ಸಮಾರಂಭದಲ್ಲಿಯೇ ಅನೇಕ ಮಠಾಧೀಶರು, ಸಮಾಜ ಬಾಂಧವರು 25 ಲಕ್ಷಕ್ಕೂ ಅಧಿಕ ನೆರವಿನ ವಾಗ್ಧಾನ ಮಾಡಿರುವುದು ಸಂತಸದ ಸಂಗತಿ ಎಂದರು.

ತೋಂಟದಾರ್ಯ ಸಂಸ್ಥಾನಮಠದ ಡಾ| ತೋಂಟದ ಸಿದ್ದರಾಮ ಸ್ವಾಮೀಜಿ, ಜಮಖಂಡಿ ಓಲೆಮಠದ ಡಾ| ಅಭಿನವಕುಮಾರ ಚನ್ನಬಸವ ಸ್ವಾಮೀಜಿ, ಮುರುಘಾಮಠದ ಡಾ| ಮಲ್ಲಿಕಾರ್ಜುನ ಸ್ವಾಮೀಜಿ, ಸಂಶೋಧಕ ಡಾ| ವೀರಣ್ಣ ರಾಜೂರ, ಕಾರ್ಯದರ್ಶಿ ಡಾ| ಸುಲೋಚನಾ ಮಟ್ಟಿ , ರವಿಕುಮಾರ, ನಾಗರಾಜ ಪಟ್ಟಣಶೆಟ್ಟಿ, ಮಾರ್ಕಾಂಡೇಯ ದೊಡಮನಿ ಇದ್ದರು. ಪ್ರಭಾವತಿ ತಂಡದವರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ಕೂಡಲಪ್ಪ ಕೊಪ್ಪದ ನಿರೂಪಿಸಿದರು. ಮಹೇಶ ಬೆಲ್ಲದ ಸ್ವಾಗತಿಸಿದರು. ಶಕುಂತಲಾ ಮನ್ನಂಗಿ ವಂದಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.