ಸಾಂಸ್ಕೃತಿಕ ಜಿಲ್ಲೆಯಲ್ಲಿ ಪಾಳೇಗಾರರ ಫೈಟ್‌


Team Udayavani, Apr 29, 2018, 6:15 AM IST

dharwad-assembly-constituen.jpg

ಸಾಂಸ್ಕೃತಿಕ ನಗರಿ, ವಿದ್ಯಾಕಾಶಿ ಎಂದೆಲ್ಲ ಬಿರುದು ಪಡೆದಿರುವ ಧಾರವಾಡ ಜಿಲ್ಲೆಯಲ್ಲಿ ಇದೀಗ ಈ ಅಂಶಗಳಾವವೂ ಚುನಾವಣಾ ವಿಷಯಗಳಾಗಿಲ್ಲ. ಬದಲಿಗೆ ಯೋಗೀಶಗೌಡ ಕೊಲೆ ಪ್ರಕರಣ, ಪಾಳೇಗಾರಿಕೆಯ ಖದರ್‌, ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮತ್ತು ವೈಯಕ್ತಿಕ ವರ್ಚಸ್ಸುಗಳ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ. 

ಜಿಲ್ಲೆಯ ಏಳು ಚುನಾವಣಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಕಾವೇರಿರುವ ಕ್ಷೇತ್ರ ಸಚಿವ ವಿನಯ್‌ ಕುಲಕರ್ಣಿ ಅವರು ಪ್ರತಿನಿಧಿಸುತ್ತಿರುವ ಧಾರವಾಡ ಗ್ರಾಮೀಣ. ಇಲ್ಲಿ ಕೈ-ಕಮಲ ಪಡೆಯ ಮಧ್ಯೆ ಬಿರುಸಿನ ಸೆಣಸಾಟ ನಡೆದಿದ್ದು, ಇಬ್ಬರು ಪಾಳೇಗಾರರ ಮಧ್ಯೆ ಫೈಟ್‌ ನಡೆಯುತ್ತಿದೆ. ಸಚಿವ ವಿನಯ್‌ ಕುಲಕರ್ಣಿ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದಲ್ಲಿ ಭಾಗಿಯಾಗಿದ್ದರಿಂದ ಬಿಜೆಪಿ ಹಿಟ್‌ಲಿಸ್ಟ್‌ನಲ್ಲಿದ್ದಾರೆ. ಇವರಿಗೆ ಸೋಲಿನ ರುಚಿ ತೋರಿಸಲೇಬೇಕೆಂದು ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಇವರ ವಿರುದ್ಧ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ಪಾಳೇಗಾರಿಕೆ ಕುಟುಂಬ ಹಂಗರಕಿ ದೇಸಾಯಿ ಮನೆತನದ ಅಮೃತ ದೇಸಾಯಿ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಕಮಲದ ಲೆಕ್ಕಚಾರ: ಕಮಲ ಪಕ್ಷ ಇಲ್ಲಿ ಮೊದಲಿನಿಂದಲೂ ಚೆನ್ನಾಗಿಯೇ ಇದೆ. 2008ರಲ್ಲಿ ಇದೇ ವಿನಯ್‌ ಕುಲಕರ್ಣಿ ಅವರನ್ನು ಬಿಜೆಪಿಯ ಸೀಮಾ ಮಸೂತಿ ಸೋಲಿಸಿದ್ದರು. 2013ರಲ್ಲಿ ವಿನಯ್‌ ಕುಲಕರ್ಣಿಯವರು 18 ಸಾವಿರಕ್ಕೂ ಅಧಿಕ ಮತ ಪಡೆದು ಗೆಲುವು ಸಾಧಿಸಿದ್ದರು. ಆಗ ಕೆಜೆಪಿ-21 ಸಾವಿರ, ಬಿಜೆಪಿ-16 ಸಾವಿರ ಮತ್ತು ಸದ್ಯದ ಬಿಜೆಪಿ ಅಭ್ಯರ್ಥಿ ಅಂದು ಜೆಡಿಎಸ್‌ ಅಭ್ಯರ್ಥಿಯಾ ಗಿದ್ದ ಅಮೃತ ದೇಸಾಯಿ 35 ಸಾವಿರ ಮತ ಪಡೆದುಕೊಂಡಿದ್ದರು. ಈ ಮೂವರು ಇದೀಗ ಬಿಜೆಪಿಯಲ್ಲಿದ್ದು ಕಳೆದ ಚುನಾವಣೆಯಲ್ಲಿ ಪಡೆದ ಎಲ್ಲ 70 ಸಾವಿರದಷ್ಟು ಮತಗಳು ಒಂದೆಡೆಯಾಗಿವೆ. ಹೀಗಾಗಿ ನಮ್ಮ ಗೆಲುವು ಸುಲಭ ಎನ್ನುತ್ತಿದೆ ಕಮಲ ಪಡೆ.

“ಕೈ’ಗಿರುವ ವಿಶ್ವಾಸ: ಸಚಿವ ವಿನಯ್‌ ಕುಲಕರ್ಣಿ ಕಳೆದ ಚುನಾವಣೆಯಲ್ಲಿ 53 ಸಾವಿರ ಮತ ಪಡೆದುಕೊಂಡಿದ್ದರು.  ಆದರೆ ಸಚಿವ ಸ್ಥಾನ ಪಡೆದುಕೊಂಡ ಮೇಲೆ ಕ್ಷೇತ್ರದಲ್ಲಿ  700 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅಭಿವೃದ್ಧಿ  ಕೆಲಸ ಮಾಡಿದ್ದಾಗಿ ಹೇಳಿ ಮತ ಕೇಳುತ್ತಿದ್ದಾರೆ. ಅಲ್ಲದೆ,  ಅಹಿಂದ ಮತಬ್ಯಾಂಕ್‌ ಜತೆಗೆ ಕ್ಷೇತ್ರದಲ್ಲಿರುವ 91 ಸಾವಿರ ಲಿಂಗಾಯತರ ಪೈಕಿ ಅರ್ಧದಷ್ಟು ಲಿಂಗಾಯತರು ತಮ್ಮ ಕೈ ಹಿಡಿಯುತ್ತಾರೆ. ಹೀಗಾಗಿ ತಮ್ಮ ಗೆಲುವು ನಿಶ್ಚಿತ ಎನ್ನುತ್ತಿದ್ದಾರೆ.  

ಇನ್ನು, ಇಲ್ಲಿನ ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ ಜಮುನಾಳ ಯುವ ರಾಜಕಾರಣಿ. ಕುಮಾರಸ್ವಾಮಿ ಅವರ ಅವಧಿಯಲ್ಲಿನ ಅಭಿವೃದ್ಧಿ ಆಧರಿಸಿ ಮತ ಕೇಳುತ್ತಿದ್ದಾರೆ. ಆದರೆ ತೆನೆ ಮೇಲೆತ್ತುವುದೇ ಕಷ್ಟ.

ಯಾರ ಮೇಲಿದೆ ಲಿಂಗಾಯತರ ಅಭಯ?
ಲಿಂಗಾಯತ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದಕ್ಕೆ ನನ್ನನ್ನು ಬಿಜೆಪಿ ಟಾರ್ಗೆಟ್‌ ಮಾಡುತ್ತಿದೆ ಎನ್ನುತ್ತಲೇ ವಿನಯ್‌ ಕುಲಕರ್ಣಿ, ಈ ಕ್ಷೇತ್ರದಲ್ಲಿನ ಪ್ರಬಲ ಶಕ್ತಿಯಾಗಿರುವ ಲಿಂಗಾಯತರ ಅನುಕಂಪ ಪಡೆಯುತ್ತಿದ್ದಾರೆ. ಇನ್ನು ಲಿಂಗಾಯತರಲ್ಲಿ ಒಳ ಪಂಗಡಕ್ಕೆ ಬಂದರೆ ಬಿಜೆಪಿ ಅಭ್ಯರ್ಥಿ ಲಿಂಗಾಯತ ಸಾದರ ಸಮುದಾಯಕ್ಕೆ ಸೇರಿದ್ದಾರೆ. ಈ ಸಮುದಾಯದ ಮತಗಳು ಇಲ್ಲಿ ಕೇವಲ 7 ಸಾವಿರ ಮಾತ್ರ. ಆದರೆ, ಪಂಚಮಸಾಲಿ ಸಮುದಾಯ 45 ಸಾವಿರದಷ್ಟು, ಕುಲಬಾಂಧವರು ಸಚಿವ ವಿನಯ್‌ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಇನ್ನುಳಿದಂತೆ ಬಿಜೆಪಿ ನಿಷ್ಠರಾಗಿದ್ದ 32 ಸಾವಿರದಷ್ಟಿರುವ ಬಣಜಿಗರು ಈ ಬಾರಿ ತಮ್ಮ ಗುಟ್ಟು ಬಿಟ್ಟುಕೊಟ್ಟಿಲ್ಲ. ಇವರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದೇ ಕುತೂಹಲ.  

ಜಾತೀವಾರು ಲೆಕ್ಕಾಚಾರ
ಲಿಂಗಾಯತರು:    91,000
ಮುಸ್ಲಿಮರು:    31,000
ಎಸ್‌ಸಿ,ಎಸ್‌ಟಿ:    35,000
ಕುರುಬರು:    12,000
ಮರಾಠರು:    9,000
ಇನ್ನುಳಿದ ಜಾತಿಗಳು:    19,000
ಒಟ್ಟು ಮತಗಳು:    1,97,263

ನಾನು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮಾಡಿದ್ದಕ್ಕೆ ನನ್ನನ್ನು ಬಿಜೆಪಿ ಟಾರ್ಗೆಟ್‌ ಮಾಡುತ್ತಿದೆ. ಆದರೆ ನಾನು ಅಂಜುವವನಲ್ಲ. ಬಸವಣ್ಣನ ಕಾಯಕ ಮತ್ತು ಸಮಾನತೆಯ ತತ್ವ ನನ್ನ ಕ್ಷೇತ್ರದ ಜನರಿಗೂ ಗೊತ್ತು. ಬಿಜೆಪಿಯವರು ಏನೇ ಷಡ್ಯಂತ್ರ ಮಾಡಿದರೂ ನನ್ನ ಗೆಲುವು ನಿಶ್ಚಿತ. 
– ವಿನಯ್‌ ಕುಲಕರ್ಣಿ, ಕಾಂಗ್ರೆಸ್‌ ಅಭ್ಯರ್ಥಿ 

ಸಚಿವ ವಿನಯ್‌ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರವನ್ನು ರಣಾಂಗಣ ಮಾಡಿಟ್ಟಿದ್ದಾರೆ. ಇದನ್ನು ಸರಿಪಡಿಸಿ ಜನರಿಗೆ ನೆಮ್ಮದಿ ಜೀವನ ನಡೆಸುವುದ ಕ್ಕಾಗಿ ನನಗೆ ಮತ ಹಾಕುತ್ತಾರೆ ಎನ್ನುವ ವಿಶ್ವಾಸವಿದೆ. ಎರಡು ಬಾರಿ ನನಗೆ ಅವಕಾಶ ಕೊಟ್ಟಿಲ್ಲ. ಈ ಬಾರಿ ಕೊಡುತ್ತಾರೆ ಎನ್ನುವ ನಂಬಿಕೆ ಇದೆ. 
– ಅಮೃತ ದೇಸಾಯಿ, ಬಿಜೆಪಿ ಅಭ್ಯರ್ಥಿ. 

ನಾನು ಇಬ್ಬರು ಪಾಳೇಗಾರರ ಜತೆಗೆ ಸೆಣಸಾಟ ನಡೆಸುತ್ತಿದ್ದೇನೆ. ಆದರೆ ಇಂದು ಈ ಕ್ಷೇತ್ರದಲ್ಲಿನ ಜನರಿಗೆ ರೈತರ ಸಾಲ ಮನ್ನಾ ಮಾಡುವ ಮುಖ್ಯಮಂತ್ರಿ ಬೇಕಾಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ರೈತರು ನನ್ನ ಗೆಲ್ಲಿಸುವುದು ಖಂಡಿತ. 
– ಶ್ರೀಕಾಂತ ಜಮುನಾಳ, ಜೆಡಿಎಸ್‌ ಅಭ್ಯರ್ಥಿ 

– ಬಸವರಾಜ ಹೊಂಗಲ್‌ 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.