Dharwad: ಪ್ರಧಾನಿ ಸ್ಮರಣಿಕೆಗಳ ಹರಾಜಿನಲ್ಲಿ “ಕಲಘಟಗಿ ತೊಟ್ಟಿಲು’
ನೈಸರ್ಗಿಕ ಬಣ್ಣ ಮಿಶ್ರಣ ಮಾಡಿ ಚಿತ್ರ ಬಿಡಿಸುತ್ತಾರೆ
Team Udayavani, Nov 10, 2023, 5:37 PM IST
ಮಿಶ್ರಿಕೋಟಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ ಸ್ಮರಣಿಕೆಗಳ ಐದನೇ ವಾರ್ಷಿಕ ಹರಾಜಿನಲ್ಲಿ ಧಾರವಾಡದಲ್ಲಿ ಉಡುಗೊರೆಯಾಗಿ ನೀಡಿದ್ದ ಕಲಘಟಗಿ ತೊಟ್ಟಿಲು ಸ್ಥಾನ ಪಡೆದಿದೆ. ಈ ಬಾರಿಯ ಹರಾಜು ಪ್ರಕ್ರಿಯೆ ಅ.2ರಂದು
ಪ್ರಾರಂಭವಾಗಿದ್ದು, ನ.15ರ ವರೆಗೆ ಇರಲಿದೆ.
ಜಿಲ್ಲೆಯಲ್ಲಿ ಕಳೆದ ಮಾ.12ರಂದು ನಡೆದ ಐಐಟಿ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಅವರಿಗೆ ಕಲಘಟಗಿಯ ತೊಟ್ಟಿಲು ಕಲಾವಿದ ಶ್ರೀಧರ ಸಾವಕಾರ ಅವರು ತಯಾರಿಸಿದ ಕಲಘಟಗಿಯ ಪಾರಂಪರಿಕ ಹೆಮ್ಮೆಯ ಪ್ರತೀಕವಾದ ಕೆಮಿಕಲ್ ರಹಿತ ಬಣ್ಣದ ತೊಟ್ಟಿಲನ್ನು ಉಡುಗೊರೆಯಾಗಿ ನೀಡುವ
ಮೂಲಕ ಜಿಲ್ಲೆಯ ಸಂಸ್ಕೃತಿ ಬಿಂಬಿಸಲಾಗಿತ್ತು.
ತೊಟ್ಟಿಲು ವಿಶೇಷತೆ: ಕೃಷ್ಣಾವತಾರ, ದಶಾವತಾರ, ರಾಮಾಯಣ-ಮಹಾಭಾರತದ ಕಥೆಗಳ ಚಿತ್ರಗಳನ್ನು ತೊಟ್ಟಿಲಿನ ಮೇಲೆ ಬಿಡಿಸಲಾಗುತ್ತದೆ. ಮಗು ದೇವರ ಸನ್ನಿಧಾನದಲ್ಲಿ ಆಡಲಿ ಎಂಬ ಉದ್ದೇಶದಿಂದ ಈ ಚಿತ್ರಗಳನ್ನು ಬರೆಯುತ್ತಾರೆ. ಹಿಂದೂ- ಮುಸ್ಲಿಂ-ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮದವರು ಕಲಘಟಗಿ ತೊಟ್ಟಿಲು ತೆಗೆದುಕೊಂಡು ಹೋಗುತ್ತಾರೆ. ಅರಗು
ಮತ್ತು ನೈಸರ್ಗಿಕ ಬಣ್ಣ ಮಿಶ್ರಣ ಮಾಡಿ ಚಿತ್ರ ಬಿಡಿಸುತ್ತಾರೆ. ಕಲಘಟಗಿಯ ಚಿತ್ರಗಾರ ಗಲ್ಲಿಯಲ್ಲಿ ನೆಲೆಸಿರುವ ಸಾವುಕಾರ ಕುಟುಂಬ ನಾಲ್ಕು ತಲೆಮಾರುಗಳಿಂದಲೂ ಈ ಕೆಲಸದಲ್ಲಿ ತೊಡಗಿದೆ. ಇವರು ತಯಾರಿಸುವ ತೊಟ್ಟಿಲು ಬೆಂಗಳೂರು, ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಮೆರಿಕ, ದುಬೈ, ಫ್ರಾನ್ಸ್ ದೇಶಗಳಲ್ಲೂ ತನ್ನ ವೈಶಿಷ್ಟ್ಯ ಸಾರಿದೆ.
ನಮಾಮಿ ಗಂಗೆಗೆ
ಕಲಘಟಗಿ ತೊಟ್ಟಿಲನ್ನು ಕೇಂದ್ರ ಸರ್ಕಾರದ ಜಾಲತಾಣ: https://pmmementos.gov.in ದಲ್ಲಿ ಪ್ರೊಡಕ್ಟ್ ಕೋಡ್: 23A0617 ಅಂತ ಹುಡುಕಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಕೊನೆಯ ದಿನಾಂಕ ನ.15 ಆಗಿದೆ. ಈ ಬಾರಿಯ 912 ಸ್ಮರಣಿಕೆಗಳ(ಉಡುಗೊರೆ) “ಇ-ಹರಾಜಿ’ನಿಂದ ಬರುವ ಆದಾಯವು ಪವಿತ್ರ ಗಂಗಾ ನದಿ ಪುನರುಜ್ಜೀವನಗೊಳಿಸುವ “ನಮಾಮಿ ಗಂಗೆ’ ಯೋಜನೆಗೆ ಹೋಗಲಿದೆ.
ನಮ್ಮ ತಂದೆ ಲಕ್ಷ್ಮಣ ಸಾವಕಾರ ಹಾಗೂ ದೊಡ್ಡಪ್ಪ ಗಂಗಾಧರ ಸಾವಕಾರ ಅವರ ಕಾಲದಿಂದ ಇಲ್ಲಿಯವರೆಗೂ ವಿವಿಧ ರಾಜಕಾರಣಿಗಳ ಮನೆಗಳಿಗೆ, ಅಧಿಕಾರಿಗಳ ಕುಟುಂಬಗಳಿಗೆ, ಡಾ| ರಾಜಕುಮಾರ ಅವರಂತಹ ಸಿನಿಮಾ ನಟರಿಗೆ ನಮ್ಮ ಕಲಘಟಗಿ ತೊಟ್ಟಿಲು ತಯಾರಿ ಮಾಡಿಕೊಡುತ್ತ ಬಂದಿದ್ದೇವೆ. ಆದರೆ ಈ ಬಾರಿ ಪ್ರಧಾನಿ ಮೋದಿಯವರಿಗೆ ನಮ್ಮ ಕಲಘಟಗಿಯ ತೊಟ್ಟಿಲು ನೀಡಿದ್ದೇ ಒಂದು ಸೌಭಾಗ್ಯವಾಗಿದೆ.
*ಶ್ರೀಧರ ಸಾವಕಾರ,
ಕಲಘಟಗಿ ತೊಟ್ಟಿಲು ತಯಾರಕರು
*ಗಿರೀಶ ಮುಕ್ಕಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ