ಎಟಿಎಂನಲ್ಲಿ ಮಹಿಳೆ ಮೇಲೆ ಎರಗಿದ ದುಷ್ಕರ್ಮಿ ಬಂಧನ
Team Udayavani, Sep 8, 2017, 7:55 AM IST
ಧಾರವಾಡ: ಬೆಂಗಳೂರಿನಲ್ಲಿ ಎಟಿಎಂನಿಂದ ಹಣ ತೆಗೆಯಲು ಹೋದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ವಿದ್ಯಾನಗರಿ ಧಾರವಾಡದಲ್ಲೂ ಎಟಿಎಂನಿಂದ ಹಣ ತೆಗೆಯುವಾಗ ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬರ ಮೇಲೆ ಎರಗಿ ಹಣ ಕಸಿದುಕೊಳ್ಳಲು ಯತ್ನಿಸಿದ ಘಟನೆ ಗುರುವಾರ ನಡೆದಿದೆ.
ಇಲ್ಲಿನ ವಿದ್ಯಾಗಿರಿಯ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಸೌಮ್ಯ ಸೀಸಾಲಿ ಗುರುವಾರ ಮಧ್ಯಾಹ್ನ 2:45ರ ಸುಮಾರಿಗೆ ಕಾಲೇಜಿನ ಆವರಣಕ್ಕೆ ಹೊಂದಿಕೊಂಡಿರುವ ಸಿಂಡಿಕೇಟ್ ಬ್ಯಾಂಕ್ ಎಟಿಎಂನಲ್ಲಿ ಹಣ ತೆಗೆಯಲು ಹೋಗಿದ್ದಾರೆ. ಹಣ ತೆಗೆದುಕೊಂಡು ಎಟಿಎಂನಿಂದ ಮರಳುತ್ತಿರುವಾಗ ಎಟಿಎಂ ಒಳಗೆ
ಪ್ರವೇಶಿಸಿದ ಶಿವಾಜಿ ತಾನಾಜಿ ಚೌಹಾØನ್ (27) ಎನ್ನುವ ದುಷ್ಕರ್ಮಿ, ಸೌಮ್ಯ ಅವರ ಮೇಲೆ ಎರಗಿ ಹಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಸೌಮ್ಯ ಪ್ರತಿರೋಧ ಒಡ್ಡಿದ್ದಾರೆ. ಕೊನೆಗೆ ಕೂಗಾಟ, ಚೀರಾಟ ಆರಂಭಿಸಿದ್ದಾರೆ.
ಎಟಿಎಂನಲ್ಲಿ ತಮ್ಮ ಉಪನ್ಯಾಸಕಿ ಇರುವುದನ್ನು ಮತ್ತು ಅವರೊಂದಿಗೆ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿರುವುದನ್ನು ನೋಡಿದ ಅದೇ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಟಿಎಂನ ಒಳಕ್ಕೆ ನುಗ್ಗಿ ಶಿವಾಜಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ದುಷ್ಕರ್ಮಿಯನ್ನು ಬಂಧಿಸಲಾಗಿದೆ.
ಕೃತ್ಯ ಎಸಗಿದ ಶಿವಾಜಿ ಮೂಲತಃ ಧಾರವಾಡದ ತೇಜಸ್ವಿ ನಗರದ ನಿವಾಸಿಯಾಗಿದ್ದು, ಈ ಹಿಂದೆಯೂ ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ