ಕವಲಗೇರಿ ಗ್ರಾಮಕ್ಕೆ ಧಾರವಾಡ ಜಿಲ್ಲಾಧಿಕಾರಿ ಭೇಟಿ: ಚಿರತೆ ಪತ್ತೆ ಕೂಬಿಂಗ್ ಕಾರ್ಯದ ಪರಿಶೀಲನೆ
Team Udayavani, Sep 23, 2021, 11:59 AM IST
ಧಾರವಾಡ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಚಿರತೆ ಕಂಡು ಬಂದಿರುವ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮಕ್ಕೆ ತಡರಾತ್ರಿ ಭೇಟಿ ನೀಡಿ, ಕಾರ್ಯಾಚರಣೆ ಪರಿಶೀಲಿಸಿ, ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಂದ ಕೂಬಿಂಗ್ ಕಾರ್ಯದ ಕುರಿತು ಮಾಹಿತಿ ಪಡೆದರು.
ನಂತರ ಅವರು ಅಲ್ಲಿ ನೆರೆದಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ನಾಳೆಯಿಂದ ಚಿರತೆ ಪತ್ತೆ ಮಾಡಿ, ಸೆರೆ ಹಿಡಿಯುವ ಕಾರ್ಯ ತೀವ್ರಗೊಳಿಸಲಾಗುವುದು. ಗ್ರಾಮಸ್ಥರು ಸಹ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಐಎಎಸ್ ಪ್ರೊಬೇಷನರಿ ಅಧಿಕಾರಿ ಮಾಧವ ಗಿತ್ತೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ತಹಶೀಲ್ದಾರ ಡಾ.ಸಂತೋಷ ಬಿರಾದರ, ಅಮ್ಮಿನಭಾವಿ ಕಂದಾಯ ನಿರೀಕ್ಷಕ ರಮೇಶ ಬಂಡಿ, ಗ್ರಾಮಲೆಕ್ಕಾಧಿಕಾರಿ ಚೇತನ, ಕವಲಗೇರಿ ಗ್ರಾಮ ಪಂಚಾಯತ ಸದಸ್ಯ ಮುತ್ತು ಇಂಚಲ ಸೇರಿದಂತೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ