ಧಾರವಾಡ ಜಿಲ್ಲಾ ಕಸಾಪ ಚುನಾವಣೆ : ತಡೆಯಾಜ್ಞೆ ತೆರವು ಗೊಳಿಸಿದ ಹೈಕೋರ್ಟ್
Team Udayavani, Nov 15, 2021, 7:29 PM IST
ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಚುನಾವಣೆ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಪೀಠವು, ಇದೀಗ ತಡೆಯಾಜ್ಞೆ ತೆರವುಗೊಳಿಸಿ, ರಿಟ್ ಅರ್ಜಿಯನ್ನೇ ವಜಾಗೊಳಿಸಿದೆ.
ಡಾ|ಲಿಂಗರಾಜ ಅಂಗಡಿ ಅವರು ಕಸಾಪ ನಿಯಮಾವಳಿ ಮೀರಿ ಅದ್ಯಕ್ಷ ರಾಗಿದ್ದಾರೆ ಎಂದು, ಇದಲ್ಲದೇ ಕಸಾಪ ನಿಯಮಾವಳಿ ಪ್ರಕಾರ ಉಪವಿಭಾಗಾಧಿಕಾರಿ ಅಥವಾ ಅದಕ್ಕಿಂತ ಮೇಲಿನ ಅಧಿಕಾರಿಗಳನ್ನು ಚುನಾವಣಾಕಾರಿಯಾಗಿ ನೇಮಿಸಬೇಕು ಎಂಬ ನಿಯಮ ಕೂಡ ಪಾಲಿಸಿಲ್ಲ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ನಾಗರಾಜ ಕಿರಣಗಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಕಸಾಪ ಮತ್ತು ರಿಟ್ ಅರ್ಜಿಯಲ್ಲಿನ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ನ.15 ಕ್ಕೆ ವಿಚಾರಣೆ ಮುಂದೂಡಿತ್ತು.
ಇದೀಗ ಸೋಮವಾರ ಹೈಕೋರ್ಟ್ ಏಕಸದಸ್ಯ ಪೀಠದ ಎದುರು ಹಾಜರಾದ ಡಾ|ಲಿಂಗರಾಜ ಅಂಗಡಿ ಹಾಗೂ ಕಸಾಪ ಪರ ವಕೀಲರು, ಕಸಾಪ ನಿಯಮಾವಳಿ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ರಿಟ್ ಅರ್ಜಿಯನ್ನು ವಜಾಗೊಳಿಸಿ, ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ಮಾಡಿದೆ. ಕೇಂದ್ರ ಸಾಹಿತ್ಯ ಪರಿಷತ್ನ ಪರವಾಗಿ ಗುರುದೇವ ಗಚ್ಚಿನಮಠ, ಡಾ|ಲಿಂಗರಾಜ ಅಂಗಡಿ ಪರವಾಗಿ ಪ್ರಕಾಶ ಉಡಿಕೇರಿ ಹಾಗೂ ರಾಜಶೇಖರ ಅಂಗಡಿ ವಕಾಲತ್ತು ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?