Dharwad ಅನಿಲ ಸೋರಿಕೆ; ಅಂಡರ್ ಪಾಸ್ ನಲ್ಲಿ ಸಿಲುಕಿದ ಗ್ಯಾಸ್ ಟ್ಯಾಂಕರ್
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಬಂದ್
Team Udayavani, Aug 16, 2023, 9:43 PM IST
ಧಾರವಾಡ: ಅಡುಗೆ ಅನಿಲ ತುಂಬಿದ ಟ್ಯಾಂಕರ್ ಲಾರಿಯೊಂದು ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡಿದ್ದು, ಟ್ಯಾಂಕರ್ ನಿಂದ ಭಾರಿ ಪ್ರಮಾಣದಲ್ಲಿ ಅನಿಲ ಸೋರಿಕೆಯಾದ ಪರಿಣಾಮ ರಾಷ್ಟೀಯ ಹೆದ್ದಾರಿ 4 ಬಂದ್ ಮಾಡಿದ ಘಟನೆ ಧಾರವಾಡ ಹೈಕೋರ್ಟ್ ಬಳಿ ಬುಧವಾರ ನಡೆದಿದೆ.
ಅಡುಗೆ ಅನಿಲ ತುಂಬಿದ ಎಂಟು ಚಕ್ರವುಳ್ಳ ಲಾರಿಯನ್ನು ಹೈಕೋರ್ಟ್ ಬಳಿಯ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಚಾಲಕ ದಾಟಿಸಲು ಹೋಗಿದ್ದಾನೆ. ಆದರೆ ಅಂಡರ್ ಪಾಸ್ ಚಿಕ್ಕದು ಇರುವ ಕಾರಣ ದೊಡ್ಡದಾದ ಲಾರಿ ಸಿಲುಕಿಕೊಂಡಿದ್ದು, ಸಿಲುಕಿದ್ದ ಲಾರಿ ಹೊರ ತೆಗೆಯಲು ಚಾಲಕ ಪ್ರಯತ್ನಿಸಿದ್ದು, ಈ ವೇಳೆ ಟ್ಯಾಂಕರ್ ಗೆ ಧಕ್ಕೆಯಾಗಿ ಅನಿಲ ಸೋರಿಕೆ ಆರಂಭಗೊಂಡಿದೆ. ಇದರಿಂದ ಭಾರಿ ಪ್ರಮಾಣದಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಇದರಿಂದ ಗಾಬರಿಯಾದ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಈ ವೇಳೆ 500 ಮೀಟರ್ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿದ್ದು, ಸಂಜೆಯಿಂದ ರಾತ್ರಿವರೆಗೂ ಸೋರಿಕೆಯಾಗುತ್ತಲೇ ಇತ್ತು. ಇಡೀ ವಾತಾವರಣದಲ್ಲಿ ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆಯೇ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನೇ ಬಂದ್ ಮಾಡಲಾಗಿದೆ. ಹೀಗಾಗಿ ಈ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಮಾಡಿರುವ ಪೊಲೀಸರು, ಬ್ಯಾರಿಗೇಡ್ ಹಾಕಿ ರಾಷ್ಟೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಬಂದ್ ಮಾಡಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ಈ ಪ್ರಮಾದ ಆಗಿದೆ. ಇದನ್ನು ಹೊರ ತೆಗೆಯಲು ಪ್ರಯತ್ನ ನಡೆಯುತ್ತಿದ್ದು, ಸದ್ಯಕ್ಕೆ ರಾ.ಹೆ. 4 ರಲ್ಲಿ ವಾಹನ ಸಂಚಾರ ನಿಲ್ಲಿಸಿದ್ದು, ಶೀಘ್ರವೇ ಅನಿಲ ಸೋರಿಕೆ ಲಾರಿಯನ್ನು ಹೊರ ತೆಗೆಯಲಾಗುವುದು.
-ಲೋಕೇಶ ಜಗಳಾಸರ,ಎಸ್ಪಿ, ಧಾರವಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್