ಬಾಲಕಿ ಪರವಾಗಿ ನಿಂತ ಧಾರವಾಡ ಹೈಕೋರ್ಟ್ ನಿಂದ ಮಹತ್ವದ ತೀರ್ಪು
Team Udayavani, Nov 30, 2021, 12:54 PM IST
ಧಾರವಾಡ: ಅಪ್ರಾಪ್ತ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಬುದ್ಧಿವಾದ ಹೇಳಿರುವ ಧಾರವಾಡ ಹೈಕೋರ್ಟ್, ಬಾಲಕಿಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗದಗನ ಬಾಲಕಿಯರ ಬಾಲ ಮಂದಿರಕ್ಕೆ ನಿರ್ದೇಶನ ನೀಡಿದೆ.
ಶಾಂತವ್ವ ಲಮಾಣಿ ಎಂಬುವವರು, ತಮ್ಮ ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರು ತಮ್ಮ ಮಗಳನ್ನು ಪತ್ತೆ ಹಚ್ಚಿಕೊಡಲು ವಿಳಂಬ ಮಾಡುತ್ತಿದ್ದಾರೆ ಎಂದು ಶಾಂತವ್ವ ಹೈಕೋರ್ಟ್ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.
ಹೀಗಾಗಿ ಪೊಲೀಸರು ಸೂಕ್ತ ತನಿಖೆ ನಡೆಸಿ ಶಾಂತವ್ವ ಅವರ ಪುತ್ರಿಯನ್ನು ಪತ್ತೆ ಮಾಡಿ ಹೈಕೋರ್ಟ್ ವಿಭಾಗೀಯ ಪೀಠದ ಎದುರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯಕ್ಕೆ ಹಾಜರಾದ ಬಾಲಕಿ, ನಾನು ಅಪ್ರಾಪ್ತಳಾಗಿದ್ದು, ಪೋಷಕರು ನನ್ನ ಮದುವೆ ಮಾಡಲು ಬಯಸಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಸ್ವ ಇಚ್ಛೆಯಿಂದ ಗೋವಾಕ್ಕೆ ತೆರಳಿ ಅಲ್ಲಿ ನನ್ನ ಸಹೋದರನ ಜೊತೆಗಿದ್ದೆ. ನನಗೆ ಶಿಕ್ಷಣ ಮುಂದುವರೆಸುವ ಆಸೆ ಇದೆ. ಆದ್ದರಿಂದ ನನ್ನ ಪಾಲಕರೊಂದಿಗೆ ನನ್ನನ್ನು ಕಳುಹಿಸದೇ ಬಾಲ ಮಂದಿರಕ್ಕೆ ಕಳುಹಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಳು.
ಇದನ್ನೂ ಓದಿ:ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ
ಇದನ್ನು ಪರಿಗಣಿಸಿದ ಹೈಕೋರ್ಟ್, ಆಕೆಯ ಭದ್ರತೆ ಮತ್ತು ಕಲ್ಯಾಣದ ದೃಷ್ಟಿಯಿಂದ ಗದಗನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಾಲಕಿಯರ ಬಾಲ ಮಂದಿರಕ್ಕೆ ಕಳುಹಿಸುವಂತೆ ಪೊಲೀಸರಿಗೆ ಸೂಚಿಸಿತು. ಅಲ್ಲದೇ ಬಾಲಕಿಯು ಪ್ರೌಢಾವಸ್ಥೆ ತಲುಪುವವರೆಗೆ ಅಥವಾ ಆಕೆಯು ತನ್ನ ಪೋಷಕರ ಜೊತೆ ತೆರಳುವ ಮನಸ್ಸು ಮಾಡುವವರೆಗೆ ಆಕೆಯನ್ನು ಬಾಲ ಮಂದಿರದಲ್ಲೇ ಇಟ್ಟುಕೊಳ್ಳಬೇಕು. ಜೊತೆಗೆ ಆಕೆ ಶಿಕ್ಷಣ ಮುಂದುವರೆಸುವ ಬಗ್ಗೆ ಖಾತ್ರಿಪಡಿಸುವಂತೆ ಬಾಲಮಂದಿರಕ್ಕೆ ಹೈಕೋರ್ಟ್ ಸೂಚಿಸಿದೆ.
ಒಂದು ವೇಳೆ ಬಾಲಕಿಯು ತಮ್ಮ ಪೋಷಕರ ಜೊತೆ ತೆರಳಲು ಬಯಸಿದರೆ ಆಕೆಯ ರಕ್ಷಣೆ ಮತ್ತು ಭವಿಷ್ಯದ ಖಾತ್ರಿ ಪಡೆದು ಆಕೆಯನ್ನು ಪೋಷಕರ ಜೊತೆ ಕಳುಹಿಸಬಹುದು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು