ಧಾರವಾಡ- ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ ಧಾರವಾಡ ಹೈಕೋರ್ಟ್ ತಡೆ
Team Udayavani, Apr 23, 2022, 8:40 AM IST
ಧಾರವಾಡ: ಧಾರವಾಡ- ಬೆಳಗಾವಿ ನೂತನ ರೈಲ್ವೆ ಮಾರ್ಗದ ಯೋಜನೆಗೆ ಸಂಬಂಧಸಿದಂತೆ 2021ರ ಅಕ್ಟೋಬರ್ 16ರಂದು ಹುಬ್ಬಳ್ಳಿಯಲ್ಲಿ ಸಂಸತ್ತಿನ ಸದಸ್ಯರು ತೆಗೆದುಕೊಂಡ ನಿರ್ಧಾರಕ್ಕೆ ಗುರುವಾರ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ, ದೇಸೂರು ಗ್ರಾಮದ ವ್ಯಾಪ್ತಿಯಲ್ಲಿ ಧಾರವಾಡ-ಬೆಳಗಾವಿ ರೈಲು ಮಾರ್ಗ ಹಾದು ಹೋಗಲಿದೆ. ಇದಕ್ಕೆ ಸಾಕಷ್ಟು ಕೃಷಿ ಭೂಮಿ ಬಳಕೆಯಾಗಲಿದೆ. ಹೀಗಾಗಿ ಕೆಲ ಜನಪ್ರತಿನಿಧಿಗಳು, ರೈತರ ಮುಖಂಡರು ಕೃಷಿ ಭೂಮಿ ಕೈ ಬಿಟ್ಟು ಪಕ್ಕದ ಸರಕಾರಿ ಭೂಮಿ ಬಳಕೆಗೆ ಸಲಹೆ ನೀಡಿದ್ದರು. ಇದರಿಂದ ರೈಲು ಮಾರ್ಗದ 5 ರಿಂದ 6 ಕಿ.ಮೀ. ಅಂತರ ಕಡಿಮೆಯಾಗಲಿದೆ ಎಂದು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ರೈಲ್ವೆ ಇಲಾಖೆ ಮರು ಸಮೀಕ್ಷೆ ಮಾಡಿತ್ತು.
ಬಳಿಕ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆ ಕೇಂದ್ರ ಕಚೇರಿಯಲ್ಲಿ 2021ರ ಅಕ್ಟೋಬರ್ 16ರಂದು ಜರುಗಿದ ಒಂಬತ್ತು ಜನ ಸಂಸತ್ತಿನ ಸದಸ್ಯರ ಸಭೆಯಲ್ಲಿ, ರೈತರು ಸೂಚಿಸಿದ ಮಾರ್ಗವನ್ನು ಬಿಟ್ಟು, ದೇಸೂರು ಮಾರ್ಗದಲ್ಲಿ ಕೃಷಿ ಭೂಮಿಯಲ್ಲಿಯೇ ಯೋಜನೆ ಪ್ರಾರಂಭಿಸಲು ಸಂಸತ್ತಿನ ಸದಸ್ಯರು, ರೈಲ್ವೆ ಇಲಾಖೆಯ ಎಂಜಿನಿಯರ್ಗಳಿಗೆ ಸೂಚಿಸಿದ್ದರು.
ಇದರಿಂದ ಕೃಷಿ ಭೂಮಿ ಕಳೆದುಕೊಳ್ಳುವ ದೇಸೂರು ಗ್ರಾಮದ ಪ್ರಸಾದ್ ಪಾಟೀಲ ಸೇರಿ 15ಕ್ಕೂ ರೈತರು, ಹುಬ್ಬಳ್ಳಿಯಲ್ಲಿ ಸಂಸತ್ತಿನ ಒಂಬತ್ತು ಸದಸ್ಯರು, ಧಾರವಾಡ- ಬೆಳಗಾವಿ ರೈಲ್ವೆ ನೂತನ ಮಾರ್ಗದ ನಿರ್ಮಾಣಕ್ಕೆ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರವೀಂದ್ರ ಗೋಕಾಕರ ಅವರು, ಉದ್ದೇಶಿತ ಮಾರ್ಗವು ಗುರ್ಲಗುಂಜಿ, ದೇಸೂರು, ರಾಜಹಂಸಗಡ, ನಂದಿಹಳ್ಳಿ, ನಾಗೇನಹಟ್ಟಿ, ನಾಗೇನಹಾಳ್, ಕೆಕೆ ಕೊಪ್ಪ ಮತ್ತು ಹಲಗಿಮರಡಿ ಗ್ರಾಮಗಳ ಮೂಲಕ ಹಾದುಹೋಗುತ್ತದೆ. ಈ ಮಾರ್ಗದಲ್ಲಿ ಸ್ವಾಧೀನಪಡಿಸಿಕೊಳ್ಳಬೇಕಾದ ಸುಮಾರು ಶೇ. 80ರಷ್ಟು ಕೃಷಿ ಭೂಮಿ ಫಲವತ್ತಾಗಿದೆ. ಜೊತೆಗೆ ಅಲ್ಲಿನ ನೂರಾರು ರೈತರು ಆ ಭೂಮಿಯನ್ನು ಅವಲಂಭಿಸಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿ ರೈಲ್ವೆ ನೂತನ ಮಾರ್ಗ ನಿರ್ಮಿಸಲು ಸಂಸತ್ತಿನ ಸದಸ್ಯರು ತೆಗೆದುಕೊಂಡ ನಿರ್ಧಾವನ್ನು ಅನೂರ್ಜಿತಗೊಳಿಸಬೇಕು ಎಂದು ನ್ಯಾಯಾಪೀಠಕ್ಕೆ ಮನವಿ ಮಾಡಿದರು.
ವಾದ ಆಲಿಸಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಟ್ಟು, ನೂತನ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ 2021ರ ಅ. 16ರಂದು ತೆಗೆದುಕೊಂಡ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು