ಚೌತಿ ಹಬ್ಬಕ್ಕೆ ಗಣಪನಿಗೆ ಬಗೆಬಗೆಯ ರೂಪ 


Team Udayavani, Aug 23, 2018, 4:37 PM IST

23-agust-24.jpg

ಹೊನ್ನಾವರ: ಅತಿವೃಷ್ಟಿ, ಅನಾವೃಷ್ಟಿ ಏನೇ ಆಗಲಿ ಗಣೇಶ ಚೌತಿ ಹಬ್ಬಕ್ಕೆ ತಿಂಗಳಿರುವಾಗಲೇ ಜಿಲ್ಲೆಯಲ್ಲಿ ಚೌತಿ ಸಂಭ್ರಮ ಗರಿಗೆದರುತ್ತದೆ. ಈಗಾಗಲೇ ಗಣಪತಿ ಶಾಲೆಯಲ್ಲಿ ಜೇಡಿ ಮಣ್ಣಿನ ಗಣಪತಿ ರೂಪ ಪಡೆಯುತ್ತಿದ್ದಾನೆ.

ಕರ್ಕಿಯ ಭೂಸ್ವರ್ಗಕೇರಿಯಲ್ಲಿರುವ ಭಂಡಾರಿಗಳ ಗಣಪತಿ ಜಿಲ್ಲೆಯಲ್ಲಿ ಪ್ರಸಿದ್ಧ. ಇಲ್ಲಿ ಮೂರು ಕುಟುಂಬಗಳು 500ಕ್ಕೂ ಹೆಚ್ಚು ಗಣಪತಿ ಸಿದ್ಧಪಡಿಸುತ್ತವೆ. ಕರ್ಕಿ ಗದ್ದೆಯ ಜೇಡಿಮಣ್ಣನ್ನು ಮಳೆಗಾಲಕ್ಕೂ ಮೊದಲೇ ಸಂಗ್ರಹಿಸಿ ಅದರಲ್ಲಿದ್ದ ಕಲ್ಲುಗಳನ್ನು ಆಯ್ದು, ಮಣ್ಣನ್ನು ಮೃದುವಾಗಿಸಿ, ಕೈಯಿಂದಲೇ ಗಣಪತಿ ನಿರ್ಮಿಸಿ ಪರಿಸರ ಪೂರಕ ಬಣ್ಣಗಳಿಂದ ಅವುಗಳನ್ನು ಚೆಂದಗೊಳಿಸುವುದು ಭಂಡಾರಿ ಕುಟುಂಬದ ವಂಶಪಾರಂಪರ್ಯ ವೃತ್ತಿ. ಅಚ್ಚುಗಳನ್ನು ಬಳಸದ ಕಾರಣ ಪ್ರತಿ ಮೂರ್ತಿಯೂ ತನ್ನದೇಯಾದ ವಿಶಿಷ್ಟತೆಯಿಂದ ಕೂಡಿರುತ್ತದೆ. ದೇವಾಲಯಗಳಲ್ಲಿ ಪಂಚವಾದ್ಯ ನುಡಿಸುವ ಭಂಡಾರಿ ಸಮಾಜದವರು ಜಿಲ್ಲೆಯಲ್ಲಿ ದೇವಾಲಯದ ಪರಿಸರದಲ್ಲಿ ನೆಲೆಸಿದ್ದಾರೆ. ಬೇಸಿಗೆಯಲ್ಲಿ ಮೃದಂಗ, ಚಂಡೆ ವಾದಕರಾಗಿ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ದುಡಿಯುವ ಇವರು ವಾದ್ಯಗಳ ದುರಸ್ತಿ ಮತ್ತು ಮಳೆಗಾಲದಲ್ಲಿ ಮೂರ್ತಿ ತಯಾರಿಸುತ್ತಾರೆ. ಎಲ್ಲ ಕಲೆಗಳು ವಿಶೇಷ ಲಾಭ ತರದಿದ್ದರೂ ಕುಟುಂಬದ ವೃತ್ತಿಯೆಂದು ನಡೆಸಿಕೊಂಡು ಬಂದಿದ್ದಾರೆ.

ಪೊಲೀಸ ಠಾಣೆಯಿಂದ ಆರಂಭಿಸಿ ಸಾಧಾರಣ ಎಲ್ಲ ಪ್ರಮುಖ ಸ್ಥಳಗಳಲ್ಲಿ ಜಿಲ್ಲೆಯಾದ್ಯಂತ ಸಾವಿರದಷ್ಟು ಸಾರ್ವಜನಿಕ ಗಣೇಶ ಮೂರ್ತಿಗಳ ಸ್ಥಾಪನೆಯಾಗುತ್ತದೆ. ಮನೆಮನೆಗಳಲ್ಲಿ ಗಣಪತಿ ಕೂರಿಸುತ್ತಾರೆ. ಜಗತ್ತಿನ ಅತ್ಯಂತ ಪುರಾತನ ಎರಡನೇ ಶತಮಾನದ ಗೋಕರ್ಣ ಮತ್ತು ಮೂರನೇ ಶತಮಾನದ ಇಡಗುಂಜಿಯ ಬಾಲಗಣೇಶ ಮೂರ್ತಿಗಳು ಜಿಲ್ಲೆಯಲ್ಲಿವೆ. ಆ ಕಾಲದಲ್ಲಿ ಗಣಪತಿಗೆ ಎರಡೂ ದಂತಗಳಿದ್ದವು. ಹಾವು, ಇಲಿ ಇರಲಿಲ್ಲ. ಗಣೇಶ ಪುರಾಣ ರಚನೆಯಾದ ಮೇಲೆ ಅದನ್ನು ಆಧರಿಸಿ 40 ಗಣಪತಿ ರೂಪಗಳು ರಚನೆಯಾದವು. ಈಗಂತೂ ಗಣಪತಿ ಸರ್ವರೂಪದಲ್ಲೂ ಸರ್ವರೀತಿಯ ವಾಹನದಲ್ಲಿ ಕಾಣಿಸಿಕೊಳ್ಳುತ್ತಾನೆ. ಚೌತಿಗಾಗಿ ವಿಶೇಷ ರೈಲು ಹೊರಡಲಿದೆ. ಚೌತಿಯ ಮೂರು ದಿನ ದುಪ್ಪಟ್ಟು ದರಕೊಟ್ಟು ಟಿಕೆಟ್‌ ಬುಕ್‌ ಆಗಿದೆ. ಪೌರಾಣಿಕ ಹಿನ್ನೆಲೆಯ ಜೊತೆಯಲ್ಲಿ ಮಹಾರಾಷ್ಟ್ರ ಭಾಗವಾಗಿದ್ದ ಉತ್ತರ ಕನ್ನಡದಲ್ಲಿ ತಿಲಕರು ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವದ ಪ್ರಭಾವ ದಟ್ಟವಾಗಿದ್ದು, ಸಮಗ್ರ ಜಿಲ್ಲೆಯಲ್ಲಿ ಈಗಲೇ ಚೌತಿಯ ಗಾಳಿ ಬೀಸತೊಡಗಿದೆ.

ಮೂರ್ತಿ ನೋಡಲು ಸರತಿಸಾಲು
ಚೌತಿಗೆ ನಾಲ್ಕು ದಿನ ಇರುವಾಗ ಭಂಡಾರಿ ಕೇರಿಯ ಗಣಪತಿ ನೋಡಲು ಜನ ಸಾಲುಗಟ್ಟಿ ನಿಲ್ಲುತ್ತಾರೆ. ಶಿವಲಿಂಗ ಗಣಪ, ಬೆಣ್ಣೆ ಗಣಪ, ಸಿಂಹ ಸವಾರಿ, ಯಕ್ಷಗಾಣ ವೇಷ, ತಿರುಪತಿ ತಿಮ್ಮಪ್ಪ ಹೀಗೆ ವೈವಿಧ್ಯಮಯ ಮೂರ್ತಿ ನೋಡಲು ವಿದ್ಯಾರ್ಥಿಗಳು ಪದೇ ಪದೇ ಬರುತ್ತಾರೆ. ಹೆದ್ದಾರಿಯಲ್ಲಿ ಹೋಗುವ ಪ್ರವಾಸಿಗರು ಕುತೂಹಲದಿಂದ ಬಂದು ಗಣಪತಿ ನೋಡಿ ಖುಷಿ ಪಡುತ್ತಾರೆ. ಈ ಅವಧಿಯಲ್ಲಿ ಕಲಾವಿದರಿಗೆ ಹಗಲು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹಗಲು ಬಂದವರಿಗೆ ಗಣಪತಿ ತೋರಿಸಿ ವಿವರಿಸುತ್ತಾರೆ. ನಮಗೆ ತೊಂದರೆಯಾದರೂ ಸರಿ ಸಾವಿರಾರು ಕಲಾಪ್ರೇಮಿಗಳು ನಮ್ಮ ಕೇರಿಗೆ ಆಗಮಿಸಿ ಖುಷಿ ಪಡುವುದು ನಮಗೆ ದೊಡ್ಡ ಉಡುಗೊರೆ ಎನ್ನುತ್ತಾರೆ. ಜಿಲ್ಲೆಯ ಎಲ್ಲೆಡೆ ಮೂರ್ತಿ ಕಲಾವಿದರ ಮನೆಗಳಲ್ಲಿ ಗಣಪತಿ ಸಿದ್ಧವಾಗುತ್ತಿದೆ. ಕೆಕ್ಕಾರ ಡಿ.ಜಿ. ಭಟ್‌ ಕೆಲವೇ ಕೆಲವು ಅಪರೂಪದ ಮೂರ್ತಿಗಳನ್ನು ರಚಿಸುತ್ತಾರೆ. ಮೂರ್ತಿ ಕಲಾವಿದರು ದೇಶದ ಪರಂಪರೆ, ಸಂಸ್ಕೃತಿ ಉಳಿಸಲು ಮಹತ್ವದ ಕೊಡುಗೆ ನೀಡಿದ್ದಾರೆ. 

ಜೀಯು ಹೊನ್ನಾವರ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.