ಡಿಕೆಶಿ ಮನೆಗೆ ಐಟಿ ದಾಳಿ ರಾಜಕೀಯ ಪ್ರೇರಿತ


Team Udayavani, Aug 3, 2017, 12:56 PM IST

hub4.jpg

ಧಾರವಾಡ: ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ ಅವರ ಮನೆ, ಕಚೇರಿ ಮೇಲೆ ಬಿಜೆಪಿಯವರ ರಾಜಕೀಯ ಪ್ರೇರಣೆಯಿಂದಲೇ ಐಟಿ ದಾಳಿ ಆಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರೆಸಾರ್ಟ್‌ನಲ್ಲಿ ತಂಗಿರುವ ಗುಜರಾತ್‌ ಶಾಸಕರನ್ನು ಡಿಕೆಶಿ ನೋಡಿಕೊಳ್ಳುತ್ತಿರುವುದನ್ನು ತಿಳಿದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಕೇಂದ್ರದ ಮಹತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಕೈಗೊಂಬೆಯಾಗಿ ಮಾಡಿಕೊಂಡಿರುವುದು ಖಂಡನೀಯ.

ಮೋದಿ-ಶಾ ಕೆಟ್ಟ ನಡವಳಿಕೆ ತೋರುತ್ತಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಂಚಿನಲ್ಲಿದೆ. ಐಟಿ ದಾಳಿಯಿಂದ ಡಿಕೆಶಿ ಧೃತಿಗೆಡಬಾರದು. ಕಾಂಗ್ರೆಸ್‌ ಅವರ ಬೆನ್ನಿಗಿದೆ. ಕಾಂಗ್ರೆಸ್‌ನ ಕೆಲವರೇ ಈ ದಾಳಿ ಮಾಡಿಸಿದ್ದಾರೆಂಬ ಆರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ದಾಳಿ ನಡೆಸುವ ಮೂಲಕ ಸಂದೇಶ ರವಾನಿಸಲಾಗುತ್ತಿದೆ. ಇದ್ಯಾವುದಕ್ಕೂ ಪಕ್ಷ ಹಿಂಜರಿಯುವುದಿಲ್ಲ. ಅಕ್ರಮ ಆಸ್ತಿ ಸಂಪಾದನೆ ಮಾಡಿದ ಎಲ್ಲರ ಮೇಲೂ ದಾಳಿ ನಡೆಸಲಿ. ಕೇಂದ್ರ ಸರಕಾರದ ಬಳಿ ಕಾಳಧನಿಕರ ಪಟ್ಟಿ ಇದೆ. ಅದನ್ನೇಕೆ ಹೊರ ಹಾಕುತ್ತಿಲ್ಲ ಎಂದು ಪ್ರಶ್ನಿಸಿದರು. 

ಪ್ರತ್ಯೇಕ ಧರ್ಮ ಆಗಲೇಬೇಕು: ಸದ್ಯ ಎದ್ದಿರುವ ವೀರಶೈವ ಅಥವಾ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್‌ ಸರಕಾರವಾಗಲಿ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿ ತಲೆ ಹಾಕಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎನ್ನುವುದು ಬಹಳ ಹಿಂದಿನಿಂದ ಇದ್ದ ಕೂಗು.

ಈಗ ಅದು ಪ್ರಬಲವಾಗಿದೆ ಅಷ್ಟೇ ಎಂದರು. ದೇಶದಲ್ಲಿಯೇ ಹುಟ್ಟಿರುವ ಜೈನ, ಸಿಖ್‌, ಬೌದ್ಧ ಧರ್ಮಗಳು ಪ್ರತ್ಯೇಕವಾಗಿ ಸರಕಾರದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ  ಎಲ್ಲ ಅರ್ಹತೆಯಿರುವ ಲಿಂಗಾಯತವೂ ಸ್ವತಂತ್ರ ಧರ್ಮವಾಗಬೇಕು. ಅದು ವೀರಶೈವ ಲಿಂಗಾಯತ ಧರ್ಮ ಎಂದಾದರೂ ಆಗಲಿ ಅಥವಾ ಲಿಂಗಾಯತ ಧರ್ಮ ಎಂದಾದರೂ ಆಗಲಿ ಎಂದು ಹೇಳಿದರು. 

ವೀರಶೈವ ಹಾಗೂ ಲಿಂಗಾಯತ ಹೆಸರಿನಲ್ಲಿ ಕೆಲವರು ಆರೋಪ-ಪ್ರತ್ಯಾರೋಪ ಮಾಡುತ್ತಿರುವುದು ನೋವು ತರಿಸುತ್ತಿದೆ. ಈ ವಿಷಯದಲ್ಲಿ ಪ್ರತಿಷ್ಠೆ ಬಿಟ್ಟು ಪರಸ್ಪರ ಚರ್ಚಿಸಿ, ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಬೇಕು. ವೀರಶೈವ ಮಹಾಸಭೆ ಈ ನಿಟ್ಟಿನಲ್ಲಿ ಸಭೆ ಆಯೋಜಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.  

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.