ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ: ಬಿಎಸ್ ವೈ ಕೇಸ್ ಬಗ್ಗೆ ದಿನೇಶ್ ಗುಂಡೂರಾವ್
Team Udayavani, Mar 15, 2024, 12:37 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು. ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ನಾವು 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಇದೀಗ ಸಿಎಎ ತೆಗೆದುಕೊಂಡು ಬಂದಿದ್ದಾರೆ. ಕಳೆದ 10 ವರ್ಷದಲ್ಲಿ ಇವರ ಅಭಿವೃದ್ಧಿ ಶೂನ್ಯ. ಹೀಗಾಗಿಯೇ ಚುನಾವಣೆ ಸಂದರ್ಭದಲ್ಲಿ ಇಂತಹ ವಿಷಯಗಳನ್ನು ತಂದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿ ಆಗುವರೆಗೂ ದೇಶ ಇರಲಿಲ್ಲವೋ ಅಥವಾ ದೇಶದಲ್ಲಿ ಅಭಿವೃದ್ಧಿ ಆಗಿರಲಿಲ್ಲವೋ? ಇದೀಗ ಸ್ವರ್ಗ ಆಗಿದೆಯಾ? ಸುಮ್ಮನೆ ಜನರಿಗೆ ಮಂಕು ಬೂದಿ ಎರಚಿದ್ದಾರೆ. ಇದೀಗ ಬಹುತೇಕರಿಗೆ ಇವರ ನಿಜವಾದ ಬಣ್ಣ ಗೊತ್ತಾಗಿದೆ. ನಾವು ಹೇಳಿದಂತೆ ಮಾಡಿದ್ದೇವೆ. ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿ ಸಂಸದರು ನಮ್ಮ ಪಕ್ಷದ ಅಧ್ಯಕ್ಷರ ಜೊತೆಗೆ ಸಂಪರ್ಕದಲ್ಲಿರಬಹುದು. ಈ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
ದೇಶದ ಜನರ ಬಗ್ಗೆ ಇವರಿಗೆ ಕಾಳಜಿಯಿದ್ದರೆ 1000 ರೂ. ದರ ಇಳಿಸಬೇಕಿತ್ತು. ಸಿಕ್ಕಾಪಟ್ಟೆ ದರ ಏರಿಸಿ ಈಗ 100 ರೂ. ಇಳಿಸಿದ್ದಾರೆ. ಇದು ಚುನಾವಣಾ ಗಿಮಿಕ್ ವಿನಃ ಜನರ ಕಾಳಜಿಯಿಲ್ಲ. ಪ್ರಧಾನಿ ಮೋದಿಯವರಿಗೆ ನೈತಿಕತೆಯಿದ್ದರೆ 1000 ರೂ. ಇಳಿಸಬೇಕು ಎಂದರು.
ರಾಜ್ಯದಲ್ಲಿ ಕ್ಯಾಂಡಿ ನಿಷೇಧ ಕುರಿತು ಇಗಾಗಲೇ ಮಾಹಿತಿ ಕೊಟ್ಟಿದ್ದೇವೆ. ಕಲರ್ ಬಳಸಬಾರದು ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ಜನರು ಕೂಡ ಜಾಗೃತರಾಗಬೇಕು. ಒಂದು ವೇಳೆ ನಿಷೇಧಿತ ಬಣ್ಣ ಬಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ