ಸಮಾಜ-ಭಕ್ತರ ದಾರಿ ತಪ್ಪಿಸ್ತಿದೆ ಕೆಎಲ್‌ಇ : ಶ್ರೀ 


Team Udayavani, Feb 12, 2021, 1:15 PM IST

Dingaleswar shri

ಹುಬ್ಬಳ್ಳಿ: ಸಂಕಷ್ಟದಲ್ಲಿರುವ ಮೂರುಸಾವಿರ ಮಠದ ಆಸ್ತಿ ದಾನ ಪಡೆದಿರುವ ಕೆಎಲ್‌ಇ ಸಂಸ್ಥೆಯವರು ಸಮಾಜ ಹಾಗೂ ಭಕ್ತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಠದ ಆಸ್ತಿ ಪರಭಾರೆಗೆ ಯಾರ ಅನುಮತಿಯೂ ಬೇಕಿಲ್ಲ ಎಂಬ ಪ್ರಭಾಕರ ಕೋರೆ ಅವರ ಹೇಳಿಕೆ ಸರಿಯಲ್ಲ ಎಂದು ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭಕ್ತರು ಸಮಾಜದ ಕಲ್ಯಾಣಕ್ಕೆ ಮಠಕ್ಕೆ ಆಸ್ತಿ ನೀಡಿರುತ್ತಾರೆ ವಿನಃ ಶ್ರೀಮಂತ ಸಂಸ್ಥೆಗಳಿಗೆ ದಾನ ಮಾಡಲು ಅಲ್ಲ. ಕೆಎಲ್‌ಇ ಸಂಸ್ಥೆಯ ಡಾ|ಪ್ರಭಾಕರ ಕೋರೆ, ಶಂಕರಣ್ಣ ಮುನವಳ್ಳಿ ಅವರ ಪ್ರತಿಯೊಂದು ಹೇಳಿಕೆಗೆ ಪ್ರತಿಯಾಗಿ ಸತ್ಯದ ದಾಖಲೆಗಳು ನನ್ನ ಬಳಿಯಿವೆ. ಕೆಎಲ್‌ಇ ಸಂಸ್ಥೆಯವರು ಮಠದ ಈ ಆಸ್ತಿ ಪಡೆಯಲು ಅಸುಂಡಿ ಕುಟುಂಬದವರಿಗೆ 14 ಎಕರೆ ಭೂಮಿ ಹಾಗೂ ಕೋಟ್ಯಂತರ ರೂ. ನೀಡಿರುವುದಾಗಿ ಒಪ್ಪಿದ್ದಾರೆ. ಹಾಗಾದರೆ ಕೋಟ್ಯಂತರ ರೂ. ಆಸ್ತಿ ದಾನ ಪಡೆದ ನಂತರ ಮಠಕ್ಕೆ ಏನಾದರೂ ನೀಡಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದರು.

ಹಿಂದೆ ರುದ್ರಮುನಿ ಶ್ರೀಗಳು ಮಠದ ಆಸ್ತಿ ಪರಭಾರೆಗೆ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು ಎನ್ನುವ ಕಾರಣಕ್ಕೆ ಮೂಜಗಂ ಅವರು ಐಕ್ಯರಾದಾಗ ಕೋರೆಯವರು ರುದ್ರಮುನಿ ಶ್ರೀಗಳನ್ನು ಕುತ್ತಿಗೆ ಹಿಡಿದು ಹೊರ ಹಾಕಿದ್ದರು. ಆದರೀಗ ರುದ್ರಮುನಿ ಸ್ವಾಮೀಜಿ ಪರಮಾಪ್ತರಾಗಿದ್ದಾರೆ. ಮಠದ ಆಸ್ತಿ ಉಳಿಸಲು ಮುಂದಾಗಿರುವುದಕ್ಕೆ ನಾನು ವಿರೋ ಧಿಯಾಗಿದ್ದೇನೆ. ಮಠ ಹಾಳು ಮಾಡುವ ಇಂತಹ ಕೂಟದಿಂದಲೇ ಪ್ರಸಿದ್ಧ ಮಠ ಇಂತಹ ಸ್ಥಿತಿಗೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ :ಜೀವನದಲ್ಲಿ ವಿಶ್ವಾಸ ಕಳೆದುಕೊಂಡರೆ ಸಾಧನೆ ಅಸಾಧ್ಯ: ನಟ ಅಮೀರ್‌ಖಾನ್‌

ಚಿಕಿತ್ಸೆ ಕೊಡುತ್ತೇನೆ: ದಿಂಗಾಲೇಶ್ವರ ಶ್ರೀಗಳು ನೀಡುತ್ತಿರುವ ಮಾನಸಿಕ ಹಿಂಸೆಯಿಂದ ನಾನು  ಸಾಯಬಹುದೆಂದು ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಹೇಳಿದ್ದಾರೆ. ಒಂದು ವೇಳೆ ಹಾಗೇನಾದರೂ ಅನಾರೋಗ್ಯ ಉಂಟಾದರೆ ನಮ್ಮ ಮಠದ ಖರ್ಚಿನಿಂದ ಚಿಕಿತ್ಸೆ ಕೊಡಿಸುತ್ತೇನೆ. ಪ್ರಭಾಕರ ಕೋರೆ ಅವರಿಗೆ ಸಮಾಜದ ಬಗ್ಗೆ ಕಾಳಜಿಯಿದ್ದರೆ ಕಾಲೇಜುವೊಂದಕ್ಕೆ ತಮ್ಮ ಹೆಸರು ನಾಮಕರಣ ಮಾಡದೆ ಸಂಸ್ಥೆ ಕಟ್ಟಿದ ಸಪ್ತಋಷಿಗಳ ಅಥವಾ ಜಗಜ್ಯೋತಿ ಬಸವಣ್ಣನವರ ಹೆಸರು ಇಲ್ಲವೇ ಮಹಾನ್‌ ವ್ಯಕ್ತಿಗಳ ಹೆಸರು ನಾಮಕರಣ ಮಾಡಬಹುದಿತ್ತು. ಇದನ್ನು ನೋಡಿದರೆ ಇವರ ಸಾಮಾಜಿಕ ಕಾಳಜಿ ಅರ್ಥವಾಗುತ್ತದೆ. ಮಠದ ಮೇಲಿನ ಮೋಹದಿಂದ ಹೋರಾಟಕ್ಕೆ ಮುಂದಾಗಿಲ್ಲ. ಉತ್ತರಾಧಿಕಾರಿ ಆಗಬೇಕೆಂದು ಒಪ್ಪಿದವರು ಕತೃ ಗದ್ದುಗೆಗೆ ಬಂದು ನಾವು ಒಪ್ಪಿಲ್ಲ ಎಂದು ಹೇಳಿದರೆ ಹಿಂದೆ ಸರಿಯುತ್ತೇನೆ ಎಂದರು. ನಿರಂಜನ ಹಿರೇಮಠ, ಭೀಮಣ್ಣ ಬಡಿಗೇರ, ಪ್ರಕಾಶ ಇನ್ನಿತರರಿದ್ದರು.

 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.