ಯಾರನ್ನೋ ಮೆಚ್ಚಿಸಲು ಈ ಹೇಳಿಕೆ

ಮಾನನಷ್ಟ ಮೊಕದ್ದಮೆ ಹೇಳಿಕೆ ಸ್ವಾರ್ಥದ ಪ್ರತೀಕ

Team Udayavani, Feb 18, 2021, 6:21 PM IST

Dingaleswar swamiji

ಹುಬ್ಬಳ್ಳಿ: ಮೂರುಸಾವಿರಮಠ ಉಳಿಯಬೇಕೆನ್ನುವ ಉದ್ದೇಶದಿಂದ ಹೋರಾಟ ಮಾಡುತ್ತಿರುವವರ  ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎನ್ನುವವರ ನಿಲುವು ಸ್ವಾರ್ಥದಿಂದ ಕೂಡಿದ್ದು, ಬುದ್ಧಿಗೇಡಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಯಾರನ್ನೋ ಮೆಚ್ಚಿಸಲು ಈ ಹೇಳಿಕೆ ನೀಡುತ್ತಿರುವುದು ಸ್ಪಷ್ಟವಾಗಿದೆ ಎಂದು ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಶ್ರೀಮಠ ಉಳಿಸಬೇಕೆನ್ನುವ ಹೋರಾಟ ಇಂದು ನಿನ್ನೆಯದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮಠದ ಪರವಾಗಿ ಹೋರಾಟ ಮಾಡುತ್ತಿರುವವರ ವಿರುದ್ಧ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿಕೆ ನೀಡುವವರು, ಶ್ರೀಮಠದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಬಹಿರಂಗ ಚರ್ಚೆಗೆ ವೇದಿಕೆ ಸಿದ್ಧಪಡಿಸಿದರೆ ನಾವು ಬರಲು ತಯಾರಿದ್ದೇವೆ.

ನಾಡಿನ ಭಕ್ತರಿಗೆ ಪ್ರತಿಯೊಂದು ವಿಚಾರವನ್ನು ದಾಖಲೆ ಮೂಲಕ ತಿಳಿಸುತ್ತೇನೆ. ಈ ಸಭೆಗೆ ಶ್ರೀಮಠದ ಜಗದ್ಗುರುಗಳು, ಕೆಎಲ್‌ಇ ಸಂಸ್ಥೆ, ಮಠದ ಉನ್ನತ ಸಮಿತಿ ಸದಸ್ಯರು, ಯಾರಾದರೂ ಮಠಾ ಧಿಪತಿಗಳು ಬರಬಹುದು. ಕೆಎಲ್‌ಇ ಪರವಾಗಿ ಹೇಳಿಕೆ ನೀಡುವುದನ್ನು ಬಿಟ್ಟು ಶ್ರೀಮಠದ ಗತವೈಭವ ಮತ್ತು ಇಂದಿನ ಪರಿಸ್ಥಿತಿಯನ್ನು ಗಮನಿಸಬೇಕು.

ನಮ್ಮ ಹೋರಾಟ ಕೆಎಲ್‌ಇ ಸಂಸ್ಥೆ, ವೈದ್ಯಕೀಯ ಬೋಧನಾ ಆಸ್ಪತ್ರೆ ವಿರುದ್ಧವಲ್ಲ. ಮಠ ಉಳಿದು ಬೆಳೆಯಬೇಕೆನ್ನುವುದಾಗಿದೆ. ಕೆಎಲ್‌ಇ ಸಂಸ್ಥೆ ಹುಬ್ಬಳ್ಳಿಯಲ್ಲಿ ನೂರಾರು ಎಕರೆ ಭೂಮಿ ಹೊಂದಿದ್ದು, ಮಠದ ಆಸ್ತಿ ಪಡೆದು ಮಠವನ್ನು ವಿವಾದದ ಕೇಂದ್ರವಾಗಿಸಿದ್ದಾರೆ. ಅವರ ಸ್ವಂತ ಭೂಮಿಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಾಡಿ ಮೂಜಗಂ ಅವರ ಹೆಸರು ನಾಮಕರಣ ಮಾಡಿ ಅಭಿಮಾನ ಮೆರೆಯಬೇಕು.

ಸತ್ಯದ ಅರಿವಿಲ್ಲದೆ ಯಾರದೋ ಒತ್ತಡ ಮತ್ತು ಪ್ರಭಾವಕ್ಕೆ ಒಳಗಾಗಿ ಹೇಳಿಕೆ ನೀಡುವುದು ಸರಿಯಲ್ಲ. ಮಠ, ಮಠದ ಉತ್ತರಾಧಿಕಾರ ವಿಚಾರವಾಗಿ ಮಾತನಾಡುವಾಗ ನಮ್ಮೊಂದಿಗೆ ಚರ್ಚಿಸಬೇಕು. ಈ ರೀತಿ ಹೇಳಿಕೆ ನೀಡುವುದರಿಂದ ಮಠದ ಘನತೆಗೆ ದಕ್ಕೆ ಕೆಲಸವಾಗಲಿದೆ. ಶ್ರೀಮಠದ ಆಸ್ತಿ ಪರಭಾರೆ ಮಾಡಿದ್ದು, ಕಾನೂನು ಬಾಹಿರ ಮತ್ತು ಸಮಾಜ ಬಾಹಿರವಾಗಿದೆ. ಕೆಎಲ್‌ಇ ಸಂಸ್ಥೆ ಬೆಳೆಯಬೇಕೆನ್ನುವುದು ಎಷ್ಟು ಮುಖ್ಯವೋ ಶ್ರೀಮಠ ಉಳಿದು ಬೆಳೆಯಬೇಕಿರುವುದು ಅದಕ್ಕಿಂತ ಹೆಚ್ಚು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.