ಗಂಟಲು-ಚಪ್ಪೇ ರೋಗದ ಆತಂಕ

•ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಭೀತಿ•ಪಶುವೈದ್ಯರಿಗೆ ರೈತಾಪಿ ಜನರ ಮೊರೆ

Team Udayavani, Jul 2, 2019, 1:24 PM IST

hubali-tdy-4..

ರೋಗ ಬಾಧಿತ ಹಸುವಿನ ಗೊರಸು (ಸಂಗ್ರಹ ಚಿತ್ರ)

ಧಾರವಾಡ: ಜಿಲ್ಲೆಯಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಆತಂಕ ಹೆಚ್ಚಾಗಿರುವ ಮಳೆಗಾಲದ ಸಮಯದಲ್ಲಿ ರೈತಾಪಿ ವರ್ಗದ ಜೀವನಾಡಿ ಜಾನುವಾರುಗಳಿಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಜಿಲ್ಲೆಯ ಅಲ್ಲಲ್ಲಿ ಗಳನೆ (ಗಂಟಲು) ಬೇನೆ, ಚಪ್ಪೇ ಬೇನೆ ಹಾಗೂ ಕಾಲುಬೇನೆ ರೋಗಗಳ ಲಕ್ಷಣ ಕಂಡುಬಂದಿದ್ದು, ಒಂದಿಷ್ಟು ಪ್ರಕರಣಗಳಲ್ಲಿ ಜಾನುವಾರುಗಳು ಮೃತಪಟ್ಟಿರುವ ಬಗ್ಗೆಯೂ ವರದಿಯಾಗುತ್ತಿವೆ. ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ಎರಡು ದಿನದ ಹಿಂದೆಯಷ್ಟೇ ಹಸುವಿನ ಕರುವೊಂದು ಚಪ್ಪೇ ರೋಗಕ್ಕೆ ಬಲಿ ಆಗಿದ್ದರೆ, ಎತ್ತೂಂದು ಗಂಟಲು ಬೇನೆ ರೋಗಕ್ಕೆ ಮೃತಪಟ್ಟಿದೆ. ಅದರಂತೆ ತಾಲೂಕಿನ ವಿವಿಧ ಗ್ರಾಮದಲ್ಲಿ ರೋಗದ ಲಕ್ಷಣಗಳು ಕಂಡು ಬಂದಿದ್ದು, ಚಿಕಿತ್ಸೆಗಾಗಿ ರೈತರು ಪಶು ವೈದ್ಯರಿಗೆ ಮೊರೆ ಇಡುತ್ತಿದ್ದಾರೆ.

ಆದರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಾತ್ರ ಈ ಬಗ್ಗೆ ಮಾಹಿತಿ ಇಲ್ಲ. ಹಿಂದಿನ ವರ್ಷಗಳಲ್ಲಿ ಹಾಗೂ ಈ ವರ್ಷದಲ್ಲಿ ಇಂತಹ ರೋಗಗಳಿಗೆ ಬಲಿಯಾದ ಜಾನುವಾರುಗಳ ಮಾಹಿತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಬಳಿಯೇ ಇಲ್ಲ.

 

ರೋಗ ಲಕ್ಷಣಗಳೇನು?:
ಚಪ್ಪೇ ರೋಗದ ಬ್ಯಾಕ್ಟೀರಿಯಾ ಜಾನುವಾರು ಸೇವಿಸುವ ಆಹಾರ ಮೂಲಕ ಹರಡಿದರೆ, ಗಂಟಲು ಬೇನೆ ಹಾಗೂ ಕಾಲುಬೇನೆ ರೋಗದ ಬ್ಯಾಕ್ಟೀರಿಯಾಗಳು ಗಾಳಿ ಮೂಲಕವೇ ಹರಡುತ್ತವೆ. ಗಂಟಲು ಬೇನೆಗೆ ಒಳಗಾಗುವ ಜಾನುವಾರಿಗೆ ಜ್ವರ, ಬಾಯಲ್ಲಿ ಜೊಲ್ಲು ಸೋರುವ ಲಕ್ಷಣಗಳು ಕಂಡು ಬರುತ್ತವೆ. ಇನ್ನೂ ಚಪ್ಪೇ ಬೇನೆ ರೋಗಕ್ಕೂ ಜ್ವರದೊಂದಿಗೆ ಜಾನುವಾರುಗಳ ಕಾಲುಗಳು ಶಕ್ತಿ ಕಳೆದುಕೊಳ್ಳುತ್ತವೆ. ಈ ಎರಡೂ ರೋಗಗಳಿಂದ ಆಹಾರ ತಿನ್ನಲಾಗದ ಸ್ಥಿತಿಗೆ ಬರುವ ಜಾನುವಾರುಗಳಿಗೆ ನಿಗದಿತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಹೋದರೆ ಸಾವು ಕಟ್ಟಿಟ್ಟ ಬುತ್ತಿ.
‘ಚಪ್ಪೇ’ ಸಾವಿನ ಪ್ರಮಾಣ ಹೆಚ್ಚು:

ಕಾಲುಬೇನೆ ರೋಗದಿಂದ ಜಾನುವಾರು ಮೃತಪಡುವ ಪ್ರಮಾಣ ಕಡಿಮೆ ಇದ್ದರೂ ನರಳಾಟ ಜಾಸ್ತಿ. ಗಂಟಲು ಬೇನೆಯಿಂದಲೂ ಸಾವಿನ ಪ್ರಮಾಣ ಕಡಿಮೆ ಇದೆ. ಆದರೆ ಚಪ್ಪೇ ರೋಗದಿಂದ ಸಾವಿನ ಪ್ರಮಾಣ ಹೆಚ್ಚು. ರೋಗ ಲಕ್ಷಣಕ್ಕೂ ಮುನ್ನ ಲಸಿಕೆ ಹಾಗೂ ರೋಗ ಕಂಡುಬಂದ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಜಾನುವಾರುಗಳನ್ನು ರಕ್ಷಿಸಲು ಸಾಧ್ಯವೇ ಇಲ್ಲ ಎಂದು ಹೇಳುತ್ತಾರೆ ಪಶು ವೈದ್ಯಾಧಿಕಾರಿ ಡಾ| ಬಿ.ಎಸ್‌. ಲಿಂಗರಾಜು.
ಹೊರಗಡೆಯಿಂದ ಔಷಧಿ:
ಮುಂಜಾಗೃತಾ ಕ್ರಮವಾಗಿ ವರ್ಷದಲ್ಲಿ 2-3 ಸಲ ಉಚಿತವಾಗಿ ಲಸಿಕೆ ಹಾಕುವ ಕಾರ್ಯ ಇಲಾಖೆಯಿಂದ ನಡೆಯುತ್ತಾ ಬಂದಿದೆ. ಆದರೆ ರೋಗಗಳಿಗೆ ತುತ್ತಾಗುವ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಲಭ್ಯ ಆಗುತ್ತಿಲ್ಲ. ರೋಗಕ್ಕೆ ತುತ್ತಾದ ಜಾನುವಾರುಗಳನ್ನು ಆಸ್ಪತ್ರೆಗೆ ಸಾಗಿಸುವುದೇ ಕಷ್ಟ. ಆಸ್ಪತ್ರೆಗೆ ಹೋದರೂ ನಿಗದಿತ ಸಮಯಕ್ಕೆ ವೈದ್ಯಾಧಿಕಾರಿಗಳೇ ಇರಲ್ಲ. ಒಂದು ವೇಳೆ ಇದ್ದರೂ ಚಿಕಿತ್ಸೆ ಕೊಡಲು ಸಿದ್ಧರಿದ್ದರೂ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಹೀಗಾಗಿ ಹೊರಗಡೆ ಹೋಗಿ ಔಷಧಿ ತರುವಂತೆ ಚೀಟಿ ಬರೆದು ಕೊಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಹುದ್ದೆಗಳು ಖಾಲಿ ಖಾಲಿ:

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಜಿಲ್ಲೆಗೆ 448 ಹುದ್ದೆ ಮಂಜೂರಾತಿ ಇದ್ದು, 228 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ 160 ಹುದ್ದೆಗಳು ನಾಲ್ಕೈದು ವರ್ಷಗಳಿಂದ ಖಾಲಿ ಇವೆ. 78 ಪಶು ವೈದ್ಯಾಧಿಕಾರಿಗಳ ಮಂಜೂರಾತಿ ಇದ್ದರೂ ಇನ್ನೂ 22 ಹುದ್ದೆಗಳು ಭರ್ತಿಯಾಗಿಲ್ಲ. ಧಾರವಾಡ 1, ಹುಬ್ಬಳ್ಳಿ 1, ಕಲಘಟಗಿ 3, ನವಲಗುಂದ 8 ಹಾಗೂ ಕುಂದಗೋಳದಲ್ಲಿ 9 ಪಶು ವೈದ್ಯಾಧಿಕಾರಿಗಳ ಕೊರತೆ ಇದೆ. ಡಿ ದರ್ಜೆ ಹುದ್ದೆಗಳು 97 ಖಾಲಿ ಇವೆ.
ಕಾರ್ಯಾರಂಭ ಮಾಡದ ಸಂಚಾರಿ ಚಿಕಿತ್ಸಾಲಯಗಳು:

ಜಿಲ್ಲೆಯಲ್ಲಿ ಧಾರವಾಡ ನಗರದಲ್ಲಿ ಮಾತ್ರವೇ ಪಾಲಿ ಕ್ಲಿನಿಕ್‌ ಕೇಂದ್ರ ಇದ್ದು, ಈ ಕೇಂದ್ರದ ಉಪನಿರ್ದೇಶಕ ಹುದ್ದೆ ಸಹ ಖಾಲಿ ಇದೆ. ನವಲಗುಂದ ತಾಲೂಕು ಹೊರತುಪಡಿಸಿ ಪ್ರತಿ ತಾಲೂಕಿನ ಎರಡು ಹೋಬಳಿ ಮಟ್ಟದಲ್ಲಿ ಪಶುಆಸ್ಪತ್ರೆ ಸೇರಿ ಒಟ್ಟು 11 ಪಶು ಆಸ್ಪತ್ರೆಗಳು ಇವೆ. 53 ಪಶು ಚಿಕಿತ್ಸಾಲಯ, 42 ಪ್ರಾಥಮಿಕ ಪಶುಚಿಕಿತ್ಸಾಲಯ ಇದ್ದು, ಇವುಗಳಲ್ಲಿ ಮೂಲಸೌಕರ್ಯ ಹಾಗೂ ವೈದ್ಯಾಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ. ಸಂಚಾರಿ ಪಶುಚಿಕಿತ್ಸಾಲಯಗಳ ಪೈಕಿ 3 ಮಾತ್ರವೇ ಕಾರ್ಯಾರಂಭ ಮಾಡಿವೆ. ಕುಂದಗೋಳ ಹಾಗೂ ನವಲಗುಂದದಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳು ಕಾರ್ಯಾರಂಭವನ್ನೇ ಮಾಡಿಲ್ಲ.

ಇಲಾಖೆಯ ರೋಗ ಅಧ್ಯಯನ ಶಾಖೆ ನೀಡಿರುವ ವರದಿಯಂತೆ ಜಿಲ್ಲೆಯ ಸಾಂಕ್ರಾಮಿಕ ರೋಗ ಕಂಡುಬರುವ ಪ್ರದೇಶದಲ್ಲಿ ಮುಂಜಾಗೃತಾ ಕ್ರಮವಾಗಿ ಲಸಿಕೆ ಹಾಕಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೊರತೆ ಇರುವ ಪಶು ವೈದ್ಯಾಧಿಕಾರಿಗಳ ನೇಮಕಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.•ಪರಮೇಶ್ವರ ನಾಯಕ, ಉಪನಿರ್ದೇಶಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

 

•ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.