ಬೇಂದ್ರೆ ನವೀಕರಣ ತೀರ್ಪು ಕಾಯ್ದಿರಿಸಿದ ಜಿಲ್ಲಾಧಿಕಾರಿ


Team Udayavani, Jul 9, 2019, 7:38 AM IST

hubali-tdy-3..

ಧಾರವಾಡ: ಡಿಸಿ ಕಚೇರಿಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ದೀಪಾ ಚೋಳನ್‌ ಮಾತನಾಡಿದರು.

ಧಾರವಾಡ: ಅವಳಿ ನಗರಗಳ ಮಧ್ಯೆ ಸಂಚಾರ ಮಾಡಲು ಬೇಂದ್ರೆ ನಗರ ಸಾರಿಗೆ ವಾಹನಗಳ ತಾತ್ಕಾಲಿಕ ರಹದಾರಿ ನವೀಕರಣ ಮಾಡುವ ಕುರಿತು ಡಿಸಿ ದೀಪಾ ಚೋಳನ್‌ ಅವರು ತಮ್ಮ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಹೈಕೋರ್ಟ್‌ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ತುರ್ತು ಸಭೆ ಅಧ್ಯಕ್ಷತೆ ವಹಿಸಿ ಡಿಸಿ ದೀಪಾ ಅವರು, ಬೇಂದ್ರೆ ನಗರ ಸಾರಿಗೆ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾದಗಳನ್ನು ಆಲಿಸಿದರು.

ಪ್ರಯಾಣಿಕ ವಾಹನಗಳಿಗೆ ವಿಶೇಷವಾಗಿ ಸಾರ್ವಜನಿಕರು ಹೆಚ್ಚು ಪ್ರಯಾಣ ಮಾಡುವ ಮಜಲು ವಾಹನಗಳು ಮತ್ತು ಒಪ್ಪಂದ ವಾಹನಗಳಿಗೆ ವಾಹನದ ಮೂಲ ನೋಂದಣಿ ದಿನಾಂಕದಿಂದ 15 ವರ್ಷಗಳ ವರೆಗೆ ಅವಧಿ ನಿಗದಿ ಪಡಿಸಿ ರಹದಾರಿ ನೀಡುವ ಕುರಿತು ಚರ್ಚೆ ನಡೆಯಿತು.

ಬೇಂದ್ರೆ ಸಾರಿಗೆ ವಾದವೇನು?: ಮಾನವೀಯತೆ ಆಧಾರದ ಮೇಲೆ ಸಂಸ್ಥೆಯ ವಾಹನಗಳಿಗೆ ತಾತ್ಕಾಲಿಕ ನವೀಕರಣ ನೀಡಬೇಕು. ಸುಮಾರು 400 ಜನ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ, ವಿಶೇಷ ವರ್ಗದವರಿಗೆ ಉಚಿತ ಮತ್ತು ರಿಯಾಯತಿ ದರದ ಬಸ್‌ ಪಾಸ್‌ಗಳನ್ನು ನೀಡಲಾಗಿದೆ. ಈಗಾಗಲೇ 3 ತಿಂಗಳ ತೆರಿಗೆ ಪಾವತಿಸಲಾಗಿದೆ. ಮೋಟಾರು ವಾಹನಗಳ ಕಾಯ್ದೆ 99(2) ಪ್ರಕಾರ ರಹದಾರಿಯನ್ನು ತಾತ್ಕಾಲಿಕವಾಗಿ ನವೀಕರಿಸಿ ಕೊಡಬೇಕು ಎಂದು ಬೇಂದ್ರೆ ನಗರ ಸಾರಿಗೆ ವಾಹನಗಳ ಪರವಾಗಿ ನ್ಯಾಯವಾದಿ ನಾಗೇಶ ಮನವಿ ಮಾಡಿದರು.

ವಾಕರಸಾ ತಕರಾರೇನು?: ಬೇಂದ್ರೆ ಸಾರಿಗೆ ವಾಹನಗಳ ನವೀಕರಣ ಅರ್ಜಿ ಪ್ರಾಧಿಕಾರದ ಮುಂದೆ ಬಾಕಿ ಇರದ್ದರಿಂದ ನವೀಕರಣ ಪ್ರಶ್ನೆ ಉದ್ಭವಿಸುವುದಿಲ್ಲ. ರಹದಾರಿ ಅವಧಿ ತಿಳಿದಿದ್ದರೂ ಉಚಿತ ಮತ್ತು ರಿಯಾಯತಿ ಬಸ್‌ ಪಾಸ್‌ ವಿತರಿಸಿದ್ದು ಹಾಗೂ ತೆರಿಗೆ ಪಾವತಿಸಿರುವುದು ಅನುಕಂಪ ಗಿಟ್ಟಿಸುವ ತಂತ್ರ. ವಿದ್ಯಾರ್ಥಿಗಳಿಗೆ ಹಾಗೂ ವಿಶೇಷ ವರ್ಗದವರಿಗೆ ನೀಡಿದ ಬಸ್‌ ಪಾಸ್‌ಗಳನ್ನು ವಾಕರಸಾ ಸಂಸ್ಥೆ ಮಾನ್ಯ ಮಾಡಿ ಅವರಿಗೆ ಸೇವೆ ಮುಂದುವರಿಸಲು ಸಿದ್ಧವಿದೆ. ಈಗಾಗಲೇ ವಾಕರಸಾ ಸಂಸ್ಥೆಯ 50 ಸಾಮಾನ್ಯ ವಾಹನಗಳು ಅವಳಿ ನಗರ ಮಧ್ಯೆ ಮಿಶ್ರ ಪಥದಲ್ಲಿ ಪ್ರತಿನಿತ್ಯ 587 ಸರತಿಗಳಲ್ಲಿ ಹಾಗೂ ಬಿಆರ್‌ಟಿಎಸ್‌ನ 98 ವಾಹನಗಳು ಪ್ರತಿನಿತ್ಯ 640 ಸರತಿಗಳಲ್ಲಿ ಪ್ರಯಾಣಿಕರಿಗೆ ಸಮರ್ಪಕ ಸೇವೆ ಒದಗಿಸುತ್ತಿವೆ. ಹೀಗಾಗಿ ಖಾಸಗಿ ವಾಹನಗಳಿಗೆ ರಹದಾರಿ ನೀಡುವ ಅಗತ್ಯ ಇಲ್ಲ ಎಂದು ವಾಕರಸಾ ಸಂಸ್ಥೆಯ ಪರವಾಗಿ ಕಾನೂನು ಅಧಿಕಾರಿ ನಾರಾಯಣಪ್ಪ ಮನವಿ ಮಾಡಿದರು.

ಎರಡೂ ಕಡೆಯ ವಾದ ಆಲಿಸಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಿಸಿ ದೀಪಾ ಅವರು, ತೀರ್ಪನ್ನು ಕಾಯ್ದಿರಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರವೀಂದ್ರ ಕವಲಿ, ಅಪ್ಪಯ್ಯ ನಾಲತವಾಡಮಠ, ನಗರ ಉಪ ಪೊಲೀಸ್‌ ಆಯುಕ್ತ ಡಾ| ಶಿವಕುಮಾರ ಗುಣಾರಿ, ಪ್ರೊಬೆಷನರಿ ಐಎಎಸ್‌ ಅಧಿಕಾರಿ ಅಕ್ರತಾ, ವಾಕರಾಸಾಸಂನ ವಿವೇಕಾನಂದ ವಿಶ್ವಜ್ಞ ಇನ್ನಿತರರಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.