ಧಾರವಾಡದ 10 ಹಳ್ಳಿಗಳಲ್ಲಿ ಗೂಳಿ ಕಾಳಗವೇ ದೀಪಾವಳಿ!


Team Udayavani, Nov 8, 2018, 5:15 AM IST

page-1108.jpg

ಧಾರವಾಡ: ದೀಪಾವಳಿ ಹಬ್ಬ ಎಲ್ಲರ ಪಾಲಿಗೂ ದೊಡ್ಡ ಹಬ್ಬ. ದೀಪ ಬೆಳಗುವುದು, ಪೂಜೆ, ಪುನಸ್ಕಾರ ಮಾಡುವುದು, ರಂಗೋಲಿ ಹಚ್ಚುವುದು. ಬಣ್ಣ ಬಳಿಯುವುದು ಈ ಹಬ್ಬದ ವೈಶಿಷ್ಟÂ. ಆದರೆ ಧಾರವಾಡ ಜಿಲ್ಲೆಯ ಕೆಲವು ಹಳ್ಳಿಗರಿಗೆ ದೀಪಾವಳಿ ಎಂದರೆ ಗೂಳಿಗಳ ಕಾದಾಟ ಮಾಡಿಸುವುದು ಮತ್ತು ನೋಡುವುದು!

ಹೌದು, ಉತ್ತರ ಕರ್ನಾಟಕ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಈ ಹಬ್ಬವನ್ನು ಹಟ್ಟಿ ಹಬ್ಬ ಎಂದೇ ಕರೆಯುವುದುಂಟು. ಈ ಹಟ್ಟಿ ಹಬ್ಬದಂದು ರೈತನಿಗೆ ಕೃಷಿಯಲ್ಲಿ ಸಹಾಯಕ್ಕೆ ನಿಲ್ಲುವ ಜಾನುವಾರುಗಳಿಗೂ ಇಲ್ಲಿ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ತಮಿಳುನಾಡಿನ ಜಲ್ಲಿಕಟ್ಟು, ಕರಾವಳಿಯ ಕಂಬಳ, ಮಧ್ಯ ಕರ್ನಾಟಕದ ಹೋರಿ ಬೆದರಿಸುವ ಸ್ಪರ್ಧೆ ಸೇರಿ ಅನೇಕ ಕಾರಣಗಳಿಗಾಗಿ ರಾಜ್ಯಾದ್ಯಂತ ಸುದ್ದಿಯಾಗಿರಬಹುದು. ಇಂತಹದೇ ಮಾದರಿಯ ಗೂಳಿಗಳ ಕಾಳಗ (ಹೋರಿ ಕಾದಾಟ) ಧಾರವಾಡ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಹಳ್ಳಿಗರು ಈ ವರ್ಷವೂ ಸಂಭ್ರಮದಿಂದ ಹೋರಿಗಳ ಕಾದಾಟಕ್ಕೆ ಸಜ್ಜಾಗಿದ್ದಾರೆ.

ಧಾರವಾಡ ತಾಲೂಕಿನ ಮನಗುಂಡಿ, ಮನಸೂರು, ಬಾಡ ಮತ್ತು ದೇವರ ಹುಬ್ಬಳ್ಳಿ ಸೇರಿ ಸುತ್ತಲಿನ ಹತ್ತು ಗ್ರಾಮಗಳಲ್ಲಿ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹೋರಿ ಕಾದಾಟ ವರ್ಷದಿಂದ ವರ್ಷಕ್ಕೆ ಜನಪ್ರಿಯವಾಗುತ್ತಿದೆ. ಅನ್ನದಾತನೊಂದಿಗೆ ಹಗಲಿರುಳು ದುಡಿಯುವ ಎತ್ತುಗಳಿಗೆ ದೀಪಾವಳಿ ಸಂದರ್ಭದಲ್ಲಿ ಈ ಹಳ್ಳಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಹೂವು, ಹಣ್ಣು, ಬಣ್ಣ, ಬಲೂನುಗಳಿಂದ ಎತ್ತುಗಳನ್ನು ಶೃಂಗರಿಸಿ ಅವುಗಳನ್ನು ಮೆರವಣಿಗೆ ಮಾಡುವುದು ಈ ಹಳ್ಳಿಗಳಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಉತ್ತರ ಕರ್ನಾಟಕದಲ್ಲಿ ಕಾರು ಹುಣ್ಣಿಮೆಯಲ್ಲಿ ಹೆಚ್ಚಾಗಿ ಜಾನುವಾರುಗಳ ಮೆರವಣಿಗೆ ಮಾಡುವ ಸಂಪ್ರದಾಯವಿದೆ. ಆದರೆ ಈ ಗ್ರಾಮಗಳಲ್ಲಿ ದೀಪಾವಳಿ (ಹಟ್ಟಿ ಹಬ್ಬ)ಗೆ ರೈತರ ಮಿತ್ರರಾಗಿ ಕೆಲಸ ನಿರ್ವಹಿಸುವ ಜಾನುವಾರುಗಳಿಗೂ ಪೂಜೆ ಸಲ್ಲುತ್ತದೆ.

ಏನಿದು ಗೂಳಿ ಕಾದಾಟ?: ಈ ಗ್ರಾಮಗಳಲ್ಲಿ 10-15 ವರ್ಷಗಳ ವಯಸ್ಸಿನ ಹರೆಯದ ಗೂಳಿಗಳನ್ನ ಚೆನ್ನಾಗಿ ಮೇಯಿಸಿ ಕಾದಾಟಕ್ಕೆ ಇಳಿಸುವ ಸಂಪ್ರದಾಯವಿದೆ. ಗ್ರಾಮಗಳಲ್ಲಿನ ರೈತ ಯುವಕರು ಈ ಕಾದಾಟಕ್ಕಾಗಿ ವರ್ಷಪೂರ್ತಿಯಾಗಿ ತಮ್ಮ ಗೂಳಿ ಹೋರಿಗಳನ್ನ ಪೌಷ್ಟಿಕ ಆಹಾರ ತಿನ್ನಿಸಿ ಮೇಯಿಸಿ ಕಾದಾಟಕ್ಕೆ ಸಜ್ಜುಗೊಳಿಸುತ್ತಾರೆ. ಹಟ್ಟಿ ಹಬ್ಬದಂದು ಊರಿನಲ್ಲಿ ಎತ್ತುಗಳ ಮೆರವಣಿಗೆ ಮುಗಿಯುತ್ತಿದ್ದಂತೆ ಹೋರಿಗಳ ಕಾದಾಟಕ್ಕೆ ಅಖಾಡ ಸಜ್ಜಾಗುತ್ತದೆ. ನೂರಾರು ಯುವಕರು ತಾವು ಮೇಯಿಸಿದ ಹೋರಿಗಳನ್ನು ಶಕ್ತಿ ಪ್ರದರ್ಶನಕ್ಕೆ ಬಿಟ್ಟು ತಮ್ಮ ಮೀಸೆ ಮೇಲೆ ಕೈ ಹಾಕಿ ನಿಲ್ಲುವ ಸಂಪ್ರದಾಯ ಈ ಹಳ್ಳಿಗಳಲ್ಲಿದೆ. ಗೂಳಿ ಕಾದಾಟಕ್ಕೆ ಮೊದಲು ಸಣ್ಣ ಸಣ್ಣ ವಯಸ್ಸಿನ ಹೋರಿಗಳ ಕಾದಾಟ. ನಂತರ ಬಲಿಷ್ಠ ಗೂಳಿಗಳ ಕಾದಾಟ. ಈ ಕಾದಾಟದಲ್ಲಿ ಗೆದ್ದ ಹೋರಿಗೆ ಬಹದ್ದೂರ್‌ ಗಂಡು ಎನ್ನುವ ಬಿರುದಿನೊಂದಿಗೆ ಊರಿನಲ್ಲಿ ಮೆರವಣಿಗೆ ಗೌರವ ಸಲ್ಲುತ್ತದೆ.

ಗಲಾಟೆಗೆ ಅವಕಾಶವಿಲ್ಲ: ಇಲ್ಲಿ ಗೂಳಿ ಸ್ಪರ್ಧೆಗೇನೂ ಶುಲ್ಕ ಭರಿಸಬೇಕಿಲ್ಲ. ಕೊಬ್ಬಿರುವ ಗೂಳಿಗಳನ್ನು ಕಾದಾಟಕ್ಕೆ ತಂದು ನಿಲ್ಲಿಸಿದರೆ ಸಾಕು. ಯಾವುದೇ ಕಾರಣಕ್ಕೂ ಕಾದಾಟದ ಗೂಳಿಗಳಿಗೆ ಹಿಂಸೆ ನೀಡುವಂತಿಲ್ಲ. ಈ ಸಂಬಂಧ ಯಾವುದೇ ಗದ್ದಲ ಗಲಾಟೆಗೂ ಈ ಗ್ರಾಮಗಳ ಹಿರಿಯರು ಅವಕಾಶ ನೀಡಿಲ್ಲ. ಹೀಗಾಗಿ ಯಾವುದೇ ಅಡ್ಡಿ, ಆತಂಕಗಳು ಇಲ್ಲದಂತೆ ಈ ಗ್ರಾಮಗಳಲ್ಲಿ ಗೂಳಿ ಕಾಳಗ ನಡೆಯುತ್ತಿದೆ. ಇನ್ನು ಕಾನೂನು ದೃಷ್ಟಿಯಿಂದಲೂ ಯಾವುದೇ ಲೋಪಗಳು ಇಲ್ಲಿ ನಡೆದ ಉದಾಹರಣೆಗಳು ಇಲ್ಲ.

ಹೆಚ್ಚುತ್ತಿದೆ ಕುತೂಹಲ
ಅನ್ನದಾತರಿಗೆ ಹಟ್ಟಿ ಹಬ್ಬ ದೊಡ್ಡ ಹಬ್ಬ. ಅಂದು ತಮ್ಮೆಲ್ಲ ಪೂಜೆ ಪುನಸ್ಕಾರಗಳ ಮಧ್ಯೆಯೂ ಹೋರಿ ಕಾದಾಟದ ಮೋಜು, ಮಸ್ತಿಗೆ ಸಮಯ ಮೀಸಲಿಡುತ್ತಾರೆ. ಹಳ್ಳಿಗರಿಗೂ ಹೋರಿ ಕಾದಾಟ ನೋಡುವ ಕುತೂಹಲ ಪ್ರತಿವರ್ಷವೂ ಇದ್ದೇ ಇರುತ್ತದೆ. ಶತಮಾನಗಳಿಂದಲೂ ನಡೆದುಕೊಂಡು ಬಂದಿರುವ ಈ ಹೋರಿ ಕಾಳಗ ಮಾತ್ರ ಯಾವುದೇ ದುರಂತ, ಆತಂಕ ಸೃಷ್ಟಿಸಿಲ್ಲ. ಇದು ಹಳ್ಳಿಗರ ಸಂಭ್ರಮಕ್ಕೆ ಮಾತ್ರ ಸಾಕ್ಷಿಯಾಗಿ ನಿಂತಿದೆ.

ನಮ್ಮ ಎತ್ತು ನಮ್ಮ ಹೆಮ್ಮೆಯ ಪ್ರತೀಕ. ನಾವು ಸಣ್ಣವರಿದ್ದಾಗಿಂದಲೂ ಈ ಹೋರಿ ಕಾಳಗ ನಡೆದುಕೊಂಡು ಬಂದಿದೆ. ಎತ್ತುಗಳಿಗೂ ಬಲಿಷ್ಠ ಕಾದಾಟದ ವೇದಿಕೆ ಇದು. ಇದನ್ನು ಬಹಳ ಅಚ್ಚುಕಟ್ಟಿನಿಂದ ನಡೆಸಿಕೊಂಡು ಬರುತ್ತಿದ್ದೇವೆ.
– ಕಲ್ಲನಗೌಡ ಪಾಟೀಲ, ಬಾಡ ಗ್ರಾಮಸ್ಥ

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.