ಯಾವುದೇ ಕಾರಣಕ್ಕೂ ಧರ್ಮ ಇಬ್ಭಾಗ ಬೇಡ


Team Udayavani, Mar 12, 2018, 12:13 PM IST

hub-1.jpg

ಹುಬ್ಬಳ್ಳಿ: ವೀರಶೈವ ಹಾಗೂ ಲಿಂಗಾಯತ ಎಂದು ಧರ್ಮವನ್ನು ವಿಭಜನೆ ಮಾಡದೇ ಎಲ್ಲರೂ ಒಂದಾಗಿರಬೇಕು ಎಂದು ಮುಂಡರಗಿ ಮಠದ ನಾಡೋಜ ಡಾ| ಅನ್ನದಾನೇಶ್ವರ ಸ್ವಾಮೀಜಿ ಹೇಳಿದರು. 

ಹಾನಗಲ್ಲ ಶ್ರೀ ಕುಮಾರಸ್ವಾಮಿಯವರ 150ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ
ವಹಿಸಿ ಅವರು ಮಾತನಾಡಿದರು. ವೀರಶೈವ ಧರ್ಮ ಸೈದ್ಧಾಂತಿಕ ಧರ್ಮ. ವೀರಶೈವ-ಲಿಂಗಾಯತ ಬೇರೆಯಲ್ಲ. ವೀರಶೈವ ಪದದ ಅರ್ಥ ತಿಳಿದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಧರ್ಮ ಇಬ್ಟಾಗವಾಗ ಬಾರದು. ಒಂದೇ ಧರ್ಮವಾಗಿರುವುದರ ಮಹತ್ವವನ್ನು ಧರ್ಮ ಬಾಂಧವರು ಅರಿತುಕೊಳ್ಳಬೇಕು ಎಂದರು.

ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ನಾಡಿಗೆ ನೀಡಿದ ಕೊಡುಗೆ ಅಪಾರ. ಅವರು ವೀರಶೈವ ಮಹಾಸಭಾ ಆರಂಭಿಸುವ ಮೂಲಕ ಧರ್ಮ, ಸಭ್ಯತೆ, ಸಂಸ್ಕೃತಿ ತಿಳಿಸಿಕೊಟ್ಟರು. ಸಮಾಜಕ್ಕಾಗಿ ತಮ್ಮ ಜೀವನವನ್ನೇ
ಮುಡಿಪಾಗಿಟ್ಟವರು ಕುಮಾರ ಸ್ವಾಮೀಜಿ. ಅವರು ನಾಡಿಗೆ ಅಪಾರ ಶಿಷ್ಯ ಬಳಗವನ್ನು ನೀಡಿದ್ದಾರೆ ಎಂದು ಹೇಳಿದರು.
 
ಅಧ್ಯಕ್ಷತೆ ವಹಿಸಿದ್ದ ಕೋಡಂಗಲ್‌ ಶಿವಯೋಗೀಶ್ವರ ಸ್ವಾಮೀಜಿ ಮಾತನಾಡಿ, ಸಮಾಜ ಉಳಿಯಲು ಮಠಗಳು
ಬೇಕು. ಮಠಗಳು ಉಳಿಯಲು ಸಮರ್ಥ ಸ್ವಾಮೀಜಿಗಳು ಬೇಕು. ಇಂಥ ನೂರಾರು ಸ್ವಾಮೀಜಿಗಳನ್ನು ರೂಪಿಸಿದವರು ಕುಮಾರ ಸ್ವಾಮೀಜಿ. ಗುಡಿ-ಗುಂಡಾರಗಳನ್ನು ಕಟ್ಟುವುದು ಸುಲಭ, ಆದರೆ ಸ್ವಾಮೀಜಿಗಳನ್ನು ರೂಪಿಸುವುದು ಕಷ್ಟ ಎಂದರು.

ಸಂಪತ್ತು, ಕೀರ್ತಿ ಬಯಸದ ದ್ವಿತೀಯ ಬಸವಣ್ಣ ಎಂದೇ ಪರಿಗಣಿಸಲ್ಪಟ್ಟಿರುವ ಕುಮಾರ ಸ್ವಾಮಿಗಳ ಬಗ್ಗೆ ಕೂಡ ಕೆಲವರು ಟೀಕೆ ಮಾಡುತ್ತಾರೆ. ಸಮಾಜ ಉಳಿಸಲು ಅವರು ಅವತಾರ ಪುರುಷರಾಗಿ ಬಂದರು. ವೈಭೋಗದ ಕಡೆಗೆ ನೋಡದೇ ಕಷ್ಟಗಳನ್ನು ಆಹ್ವಾನಿಸಿಕೊಂಡರು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ನಾಡಿನ
ಸ್ವಾಮೀಜಿಗಳಿಗೆ ಸಮಾಜ ಸುಧಾರಣೆಯ ದಾರಿ ತೋರಿಸಿಕೊಟ್ಟವರು ಕುಮಾರ ಶಿವಯೋಗಿಗಳು. ಸರಳ ಬದುಕು, ಆಹಾರ, ವಿಹಾರದ ಬಗ್ಗೆ ತಿಳಿಸಿಕೊಟ್ಟು ಸ್ವಾಮೀಜಿಗಳಿಗೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.

ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿ ಮಾತನಾಡಿ, ವಿವೇಕಾನಂದ ಭಾರತದ ಬೆಳಕಾಗಿದ್ದರೆ, ಕುಮಾರ ಸ್ವಾಮೀಜಿ ಕರ್ನಾಟಕದ ಕಾಂತಿ. ಅವರ ಹೆಸರನ್ನು ನಾಡಿನ ಮನೆ ಮನೆಗೆ ಮುಟ್ಟಿಸಬೇಕು. ಹಿಂದೂ ಮಹಾಸಭಾ ಆರಂಭಕ್ಕೆ ಮುನ್ನವೇ ಅಖೀಲ ಭಾರತ ವೀರಶೈವ ಮಹಾಸಭೆ ಮಾಡುವ ಮೂಲಕ ವೀರಶೈವರನ್ನು ಸಂಘಟಿಸಿದರು ಎಂದರು.

ಶ್ರೀ ಜಯಶಾಂತಲಿಂಗ ಸ್ವಾಮೀಜಿ ಮಾತನಾಡಿ, ಅಂಧರು, ಅನಾಥರನ್ನು ಸಂಗೀತದ ಯೋಗಿ ಗಳಾಗಿಸಿದ ಕುಮಾರ
ಶಿವಯೋಗಿಗಳು ಬಸವಣ್ಣನಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಸಮಾಜ ಸೇವೆ ಮಾಡಿದರು ಎಂದರು.

ಶ್ರೀ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ಕುಮಾರ ಶಿವಯೋಗಿ ಗಳಿಲ್ಲದೆ ಇರದಿದ್ದರೆ ನಾಡಿನಲ್ಲಿ ಕಾವಿಧಾರಿ
ಗಳು ಸಿಗುತ್ತಿರಲಿಲ್ಲ. ಅವರು ಶಿಕ್ಷಣ, ಸಂಗೀತ, ಯೋಗ, ಆಯುರ್ವೇದವಲ್ಲದೇ ಗೋರಕ್ಷಾ ಕಾರ್ಯದಲ್ಲಿಯೂ ತಮ್ಮನ್ನು
ತೊಡಗಿಸಿಕೊಂಡರು. ಎಲ್ಲರೂ ಅವರ ತತ್ವ ಪಾಲಿಸಬೇಕು ಎಂದರು. 

ಧಾರವಾಡ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರಿದ್ದರು. ಜಿ.ಎಚ್‌. ಹನ್ನೆರಡುಮಠ ಅವರು ಕುಮಾರ ಶಿವಯೋಗಿಗಳ ಕುರಿತು ರಚಿಸಿದ “ಯುಗಪುರುಷ’ ಕೃತಿಯನ್ನು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಬಿಡುಗಡೆ ಮಾಡಿದರು. ಘಟಪ್ರಭಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸ್ವಾಗತಿಸಿದರು.

ಹಾವೇರಿಯ ಶ್ರೀ ಸದಾಶಿವ ಸ್ವಾಮೀಜಿ ವಂದಿಸಿದರು. ಮಾಜಿ ಸಚಿವ ಸಿ.ಎಂ. ಉದಾಸಿ, ವಿಧಾನ ಪರಿಷತ್‌
ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಪಾಲ್ಗೊಂಡಿದ್ದರು. 
 
ಧರ್ಮರಕ್ಷಣೆಗೆ ಚಿಂತನೆ ಸಮಾರಂಭದಲ್ಲಿ ಹಲವು ಮಠಾಧೀಶರು ತಮ್ಮ ಭಾಷಣದಲ್ಲಿ ವೀರಶೈವ-ಲಿಂಗಾಯತ
ಧರ್ಮ ಇಬ್ಭಾಗವಾಗುವುದಕ್ಕೆ ಅವಕಾಶ ನೀಡಬಾರದೆಂದು ಅಭಿಪ್ರಾಯಪಟ್ಟರು. ಧರ್ಮದ ಒಡೆಯುವುದಕ್ಕೆ ಆದ್ಯತೆ ನೀಡದೇ ಧರ್ಮರಕ್ಷಣೆ ಬಗ್ಗೆ ಚಿಂತನೆ ನಡೆಸಬೇಕೆಂದು ಸೂಚ್ಯವಾಗಿ ಹೇಳಿದರು. 

ವೀರಶೈವ ಧರ್ಮ ಸೈದ್ಧಾಂತಿಕ ಧರ್ಮ. ವೀರಶೈವ-ಲಿಂಗಾಯತ ಬೇರೆಯಲ್ಲ. ವೀರಶೈವ ಪದದ ಅರ್ಥ ತಿಳಿದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಧರ್ಮ ಇಬ್ಭಾಗವಾಗಬಾರದು. ಒಂದೇ ಧರ್ಮವಾಗಿರುವುದರ ಮಹತ್ವವನ್ನು ಧರ್ಮ ಬಾಂಧವರು ಅರಿತುಕೊಳ್ಳಬೇಕು.
 ಡಾ| ಅನ್ನದಾನೇಶ್ವರ ಸ್ವಾಮೀಜಿ, ಮುಂಡರಗಿ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.