ಜೈನ ಮುನಿ ಕೊಲೆ ವಿಚಾರದಲ್ಲಿ ರಾಜಕಾರಣ ಬೇಡ: ಗೃಹ ಸಚಿವ ಡಾ.ಜಿ.ಪರಮೇಶ್ವರ


Team Udayavani, Jul 10, 2023, 12:45 PM IST

dr g parameshwar

ಹುಬ್ಬಳ್ಳಿ: ಚಿಕ್ಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಸ್ವಾಮೀಜಿ ಕೊಲೆ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಪೊಲೀಸರು ಕಾನೂನು ವ್ಯಾಪ್ತಿಯಲ್ಲಿ ಪ್ರಾಮಾಣಿಕ ತನಿಖೆ ಮಾಡುತ್ತಿದ್ದಾರೆ. ಆರೋಪಿಗಳ ರಕ್ಷಣೆ ಸೇರಿದಂತೆ ಇತ್ಯಾದಿಗಳು ಸುಳ್ಳು. ಇಂತಹ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಸೋಮವಾರ ಇಲ್ಲಿನ ವರೂರಿನ ಗುಣಧರ ನಂದಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು‌.

ಪ್ರಕರಣದ ತನಿಖೆಯು ಡಿವೈಎಸ್ಪಿ ಅಧಿಕಾರಿಯ ನೇತೃತ್ವದಲ್ಲಿ ನಡೆಯುತ್ತಿದೆ. ಪ್ರಕರಣವನ್ನು ಸಿಬಿಐ ಗೆ ವಹಿಸುವ ಅಗತ್ಯವಿಲ್ಲ. ಇದು ಯಾರ ವೈಫಲ್ಯದಿಂದ ನಡೆದ ಘಟನೆಯಲ್ಲ. ಇದು ಇತಿಹಾಸದಲ್ಲಿ ನೋಡದಂತಹ ಘಟನೆಯಾಗಿದೆ. ಈಗಾಗಲೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ತನಿಖೆಯ ನಂತರ ಇನ್ನಷ್ಟು ವಿಚಾರಗಳು ಬರಲಿವೆ. ಇಲಾಖೆಯ ಸಚಿವನಾಗಿ ತನಿಖೆಯ ಹಂತದಲ್ಲಿರುವ ಕೆಲ ವಿಚಾರಗಳನ್ನು ಹೇಳಲು ಬರುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಪ್ರಕರಣದ ತನಿಖೆಯಾಗಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಕಳುಹಿಸಲಾಗಿತ್ತು. ಸದ್ಯ ದೊರಕಿರುವ ಮಾಹಿತಿಯನ್ನು ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ:NCP Crisis; ಅಜಿತ್ ಕ್ಯಾಂಪ್ ಬಿಟ್ಟು ಶರದ್ ಪವಾರ್ ಗೆ ಬೆಂಬಲ ನೀಡಿದ ಮೂವರು ಶಾಸಕರು

ಘಟನೆಯ ನಂತರ ಗುಣಧರನಂದಿ ಸ್ವಾಮೀಜಿಗಳು ಬಹಳ ನೊಂದಿದ್ದಾರೆ. ಅವರನ್ನು ಭೇಟಿ ಮಾಡುವ ಉದ್ದೇಶದಿಂದಲೇ ಬಂದಿದ್ದೇನೆ. ಅವರೊಂದಿಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಅವರು ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡ ಕರೆ ಮಾಡಿ ಸ್ವಾಮೀಜಿಗಳೊಂದಿಗೆ ಮಾತನಾಡಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು. ಜೈನ ಮಂದಿರಗಳಿಗೆ ರಕ್ಷಣೆ ನೀಡಬೇಕು. ಜೈನ ಮುನಿಗಳು ತಂಗುವ ಜಾಗ ಅಧಿಕೃತ ಆಗಬೇಕು. ಜೈನ ಮಂಡಳಿ ಮಾಡಬೇಕು ಎನ್ನುವ ನಾಲ್ಕು ಬೇಡಿಕೆಗಳನ್ನು ಸ್ವಾಮೀಜಿ ಇಟ್ಟಿದ್ದಾರೆ‌. ಕೆಲವು ನಮ್ಮ ಹಂತದಲ್ಲಿ ಆಗಬಹುದಾದ ಬೇಡಿಕೆಗಳಾಗಿವೆ. ಜೈನ ಮಂಡಳಿ ಸ್ಥಾಪನೆ ಕುರಿತು ಎಂದು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದರು.

ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ‌. ರಾಜ್ಯದಲ್ಲಿ ಇಂತಹ ಘಟನೆ ಆಗಬಾರದು. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಅವರ ವಿರುದ್ಧ ಕಾನೂನು ಕ್ರಮವಾಗಲಿದೆ. ಸ್ವಾಮೀಜಿ ಕೊಲೆ ಪ್ರಕರಣದಲ್ಲಿ ವಿನಾಕಾರಣ ಗೊಂದಲ ಮೂಡಿಸುವ ಕೆಲಸ ಆಗಬಾರದು. ಜನಪ್ರತಿನಿಧಿಗಳಾದವರು ಈ ಬಗ್ಗೆ ಜಾಗರೂಕತೆಯಿಂದ ಮಾತನಾಡಬೇಕು ಎಂದರು.

ಆರೋಪಿಗಳ ಹೆಸರನ್ನು ಹಿಂದೆ ಮುಂದೆ ಮಾಡಲಾಗಿದೆ ಎನ್ನುವ ಶಾಸಕ ಅಭಯ ಪಾಟೀಲ ಆರೋಪಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ಅವರು ಹೇಳಿದಾಕ್ಷಣ ನಿಜ ಆಗುವುದಿಲ್ಲ. ಪೊಲೀಸರು ಕಾನೂನು ವ್ಯಾಪ್ತಿಯಲ್ಲಿ ತನಿಖೆ ಮಾಡುತ್ತಿದ್ದು, ತನಿಖೆಯ ನಂತರ ವಾಸ್ತವ ಬಹಿರಂಗವಾಗಲಿದೆ ಎಂದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.