ಚಿಂತೆ ಬಿಡಿ, ಭಗವಂತನ ಚಿಂತನೆ ಮಾಡಿ: ಪರಮಾರೂಢ ಶ್ರೀ


Team Udayavani, Jun 28, 2017, 3:02 PM IST

hub3.jpg

ಹುಬ್ಬಳ್ಳಿ: ಸುಖ-ದುಃಖ ಚಿಂತಿಸಿದರೆ ಫ‌ಲವೇನು, ಅದರ ಬದಲಾಗಿ ಭಗವಂತನ ಚಿಂತನೆ ಮಾಡಿದರೆ ದೇವರ ಅನುಗ್ರಹವಾದರೂ ಸಿಕ್ಕೀತು ಎಂದು ಬಾಗಲಕೋಟೆ ರಾಮಾರೂಢಮಠದ ಶ್ರೀ ಪರಮಾರೂಢ ಸ್ವಾಮೀಜಿ ಹೇಳಿದರು. ಇಲ್ಲಿನ ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಮಂಗಳವಾರದಿಂದ ಆರಂಭಗೊಂಡ 11ನೇ ವರ್ಷದ ಭಗವತ್‌ಚಿಂತನ ಸಾಧನಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. 

ಜೀವನದಲ್ಲಿ ಚಿಂತೆ ಮಾಡಿದರೆ ಯಾವುದೇ ಫ‌ಲವಿಲ್ಲ. ಮನಸ್ಸಿಗೆ ಘಾಸಿಯಾಗುವುದು ಬಿಟ್ಟರೆ ಮತ್ತೇನು ಸಿಗುವುದಿಲ್ಲ. ಸಮಯ ವ್ಯರ್ಥ ಮಾಡದೆ ಭಗವಂತನ ಚಿಂತನೆ ಮಾಡಿ ಮನಸ್ಸನ್ನು ಶುದ್ಧೀಕರಿಸಿಕೊಳ್ಳಬೇಕು. ಯಾವುದೇ ಕೆಲಸ ಆರಂಭಿಸುವ ಮುನ್ನ ಅದನ್ನು ಪೂರ್ತಿ ಮಾಡುತ್ತೇವೆ, ಗುರಿ ಮುಟ್ಟುವವರೆಗೂ ನಿಲ್ಲಿಸುವುದಿಲ್ಲ ಎಂಬಂತಿದ್ದರೆ ಮಾತ್ರ ಆ ಕುರಿತು ಚಿಂತನೆ ಮಾಡಿ ಮುನ್ನುಗ್ಗಬೇಕು ಎಂದರು. 

ಹುಬ್ಬಳ್ಳಿ ನಾಶಿಕಶರಣಪ್ಪ ಮಠದ ಶ್ರೀ ವಾಸುದೇವಾನಂದ ಸ್ವಾಮೀಜಿ ಮಾತನಾಡಿ, ಇಂದು ಭಗವಂತನ ಚಿಂತನೆ ಮಾಡುವವರ ಸಂಖ್ಯೆ ತುಂಬಾ ವಿರಳ. ಅನೇಕರಿಗೆ ಸಂಸಾರದ ಚಿಂತೆ, ಸಮಾಜದ ಚಿಂತೆ ಮಾಡಲು ಸಮಯಾವಕಾಶವಿರುವುದಿಲ್ಲ. ಇನ್ನು ಭಗವಂತನ ಚಿಂತನೆ ಮಾಡುವುದೆಲ್ಲಿ. 

ಆದ್ದರಿಂದ ಎಲ್ಲರೂ ಆ ಭಗವಂತನ ಚಿಂತನೆ ಮಾಡುವ ಮೂಲಕ ಮನಸ್ಸು ಹಾಗೂ ಬುದ್ಧಿ ಶುದ್ಧೀಕರಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ಸಚ್ಚಿದಾನಂದ ಸ್ವಾಮೀಜಿ ಮಾತನಾಡಿ, ಸದ್ಗುರು ಶ್ರೀ ಸಿದ್ಧಾರೂಢರಂತಹ ಮಹಾತ್ಮರು ಮತ್ಯಾರು ಇಲ್ಲ. ಸಿದ್ಧಾರೂಢಸ್ವಾಮಿ ಮಠದಲ್ಲಿ ನಿರಂತರ ಜ್ಞಾನ ದಾಸೋಹ, ಅನ್ನದಾಸೋಹ ನಡೆಯುತ್ತಿರುವುದು ಶ್ಲಾಘನೀಯ ಎಂದರು. 

ರಾಜವಿದ್ಯಾಶ್ರಮದ ಶ್ರೀ ಷಡಕ್ಷರಿ ಸ್ವಾಮೀಜಿ ಮಾತನಾಡಿ, ಶ್ರೀಮಠದಲ್ಲಿ ಈ ಹಿಂದೆ ನಡೆದುಕೊಂಡು ಬಂದ ಸಂಗೀತ, ಜ್ಞಾನಾರ್ಜನೆಯಂತಹ ಕಾರ್ಯಕ್ರಮಗಳು ಯಾವುದೇ ಬದಲಾವಣೆಗೆ ಆಸ್ಪದ ನೀಡದೆ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು. ಕಾಡರಕೊಪ್ಪದ ಶ್ರೀ ದಯಾನಂದ ಸರಸ್ವತಿ ಸ್ವಾಮೀಜಿ, ಇಂಚಲ ಸಾಧುಸಂಸ್ಥಾನಮಠದ ಶ್ರೀ ಶಿವಾನಂದ ಭಾರತಿ ಸ್ವಾಮೀಜಿ ಇನ್ನಿತರರು ಮಾತನಾಡಿದರು. 

ಶ್ರೀಮಠದ ಟ್ರಸ್ಟ್‌ ಚೇರನ್‌ ಧರಣೇಂದ್ರ ಜವಳಿ ಅಧ್ಯಕ್ಷತೆ ವಹಿಸಿದ್ದರು. ಯೋಗಿರಾಜ ಶ್ರೀ ಸದಾಶಿವ ಗುರೂಜಿ, ಶ್ರೀ ಅತ್ಯಾನಂದ ಸ್ವಾಮೀಜಿ, ಶ್ರೀ ರಾಮಾನಂದ ಶ್ರೀಗಳು, ಪ್ರಭುದೇವ ಪಾಟೀಲ, ಶ್ರೀ ಶಶಿಕಲಾ ಮಾತಾಜೀ, ಶ್ರೀ ಸ್ವರೂಪಾನಂದ ಸ್ವಾಮೀಜಿ, ಧರ್ಮದರ್ಶಿಗಳಾದ ಗೀತಾ ಎಸ್‌.ಜಿ. ಜ್ಯೋತಿ ಸಾಲಿಮಠ, ನಾರಾಯಣಪ್ರಸಾದ ಪಾಠಕ, ಬಸವರಾಜ ಕಲ್ಯಾಣಶೆಟ್ಟರ, ನಾರಾಯಣ ನಿರಂಜನ ಇತರರಿದ್ದರು. ಧರ್ಮದರ್ಶಿ ಶಾಮಾನಂದ ಪೂಜೇರಿ ಸ್ವಾಗತಿಸಿದರು. ಶಿವಪುತ್ರಪ್ಪ ಪೂಜಾರ ಪ್ರಾರ್ಥಿಸಿದರು. ಎಸ್‌.ಐ. ಕೋಳಕೋರ ನಿರೂಪಿಸಿದರು.  

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.