ಹಜ್‌ ಯಾತ್ರಾರ್ಥಿಗಳಿಗೆ ದೋಖಾ!


Team Udayavani, Aug 21, 2017, 12:44 PM IST

hub1.jpg

ಹುಬ್ಬಳ್ಳಿ: ಹಜ್‌ ಯಾತ್ರೆಗೆಂದು ಸುಮಾರು 58 ಯಾತ್ರಾರ್ಥಿಗಳಿಂದ ಅಂದಾಜು 1.5 ಕೋಟಿ ರೂ. ಸಂಗ್ರಹಿಸಿದ್ದ ಟ್ರಾವೆಲ್ಸ್‌ ಏಜೆನ್ಸಿ ಏಜೆಂಟ್‌ ತಲೆಮರೆಸಿಕೊಂಡಿದ್ದು, ಹಣ ಕೊಟ್ಟವರು ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ರವಿವಾರ ನಡೆದಿದೆ. 

ಇಲ್ಲಿನ ಹಳೇಹುಬ್ಬಳ್ಳಿ ಆನಂದನಗರ ರಸ್ತೆ ಫತೇಶಾನಗರದ ಹಶಮತ್‌ರಜಾ ಖಾದ್ರಿ ಪರಾರಿಯಾದ ವ್ಯಕ್ತಿ. ಈತ ಇಲ್ಲಿನ ಕಾರವಾರ ರಸ್ತೆ ಚಾಟ್ನಿ ಕಾಂಪ್ಲೆಕ್ಸ್‌ನಲ್ಲಿ ಹಬೀಬಾ ಹರಮೇನ್‌ ಎಂಬ ಟ್ರಾವೆಲ್ಸ್‌ ಏಜೆನ್ಸಿ ಕಚೇರಿ ಹೊಂದಿದ್ದು, ಹಜ್‌ ಯಾತ್ರೆಗೆ ತೆರಳುವವರಿಗೆ ಊಟ, ವಸತಿ ಸೇರಿ 25, 35 ಹಾಗೂ 40 ದಿನಗಳ ಟೂರ್‌ ಪ್ಯಾಕೇಜ್‌ ವ್ಯವಸ್ಥೆ ಮಾಡಿಕೊಡುತ್ತಿದ್ದ.

ಯಾತ್ರೆಗಾಗಿ ಈತನಲ್ಲಿ ಮುಂಗಡ ಹಣ ಕೊಟ್ಟವರು ಆ. 23ರಂದು ನಗರದಿಂದ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹಶಮತ್‌ರಜಾ ಯಾತ್ರೆಗೆ ವ್ಯವಸ್ಥೆಯನ್ನೂ ಮಾಡದೆ, ಹಣವನ್ನೂ ಮರಳಿಸದೆ ಶನಿವಾರ ಮಧ್ಯಾಹ್ನವೇ ಕಚೇರಿ ಬಂದ್‌ ಮಾಡಿ ನಾಪತ್ತೆಯಾಗಿದ್ದಾನೆ. 

ಎಲ್ಲೆಲ್ಲಿಯವರು: ಹಶಮತ್‌ರಜಾನ ಬಳಿ ವಿಜಯಪುರದ 30, ಹುಬ್ಬಳ್ಳಿಯ 20, ಬೆಂಗಳೂರು ಮೂಲದ ನಾಲ್ಕು, ಬೆಳಗಾವಿಯ ಇಬ್ಬರು ಸೇರಿದಂತೆ ಒಟ್ಟು 58 ಜನರು ಹಣ ಜಮಾ ಮಾಡಿದ್ದರು. ಪ್ರತಿ ಯಾತ್ರಾರ್ಥಿಯಿಂದ 2.5 ಲಕ್ಷ ದಿಂದ 3.5 ಲಕ್ಷ ರೂ. ಮುಂಗಡ ಹಣ ಹಾಗೂ ಪಾಸ್‌ಪೋರ್ಟ್‌, ಆಧಾರ ಕಾರ್ಡ್‌, ಮತದಾರರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನೆಲ್ಲ ಪಡೆಯುತ್ತಿದ್ದ. ಜಿಎಸ್‌ಟಿ ಜಾರಿ ಬಳಿಕ ಹೆಚ್ಚುವರಿಯಾಗಿ 30 ಸಾವಿರ ರೂ. ಕೂಡ ಪಡೆದಿದ್ದ. 

23ರಂದು ತೆರಳಬೇಕಿತ್ತು: 58 ಯಾತ್ರಾರ್ಥಿಗಳು ಆ. 23ರಂದು ಬೆಳಗ್ಗೆ 10:00 ಗಂಟೆಗೆ ಇಲ್ಲಿನ ಹಳೇಹುಬ್ಬಳ್ಳಿ ಇಂಡಿ ಪಂಪ್‌ ಬಳಿಯ ಫತೇಶಾವಲಿ ದರ್ಗಾದಿಂದ ಮುಂಬಯಿಗೆ ಪ್ರಯಾಣ  ಳೆಸಬೇಕಿತ್ತು. 24ರಂದು ಬೆಳಗಿನ ಜಾವ 6:00 ಗಂಟೆಗೆ ಕುವೈತ್‌ ಏರ್‌ವೆಸ್‌ ಮೂಲಕ ಮುಂಬಯಿಂದ ಜೆದ್ದಾಹಕ್ಕೆ ತೆರಳಬೇಕಿತ್ತು. ಇವರೆಲ್ಲ ಮೆಕ್ಕಾದಲ್ಲಿ 14 ದಿನ ಹಾಗೂ ಮದೀನಾದಲ್ಲಿ 11 ದಿನ ಉಳಿದುಕೊಳ್ಳಬೇಕಿತ್ತು. ಸೆ. 28ರಂದು ಮದೀನಾದಿಂದ ಮುಂಬಯಿಗೆ ಮರಳಿ ಬರುವುದಿತ್ತು. 

ತನಿಖೆ ಆರಂಭ: ರೊಚ್ಚಿಗೆದ್ದ ಜನರು ಹಶಮತ್‌ ರಜಾನ ಮನೆಗೆ ಹೊಕ್ಕು ಹುಡುಕಾಡಿದರೂ ಸಿಗದಿದ್ದಾಗ, ಆತನ ತಂದೆಯನ್ನೇ ಠಾಣೆಗೆ ಕರೆದುಕೊಂಡು ಬಂದು ಪೊಲೀಸರೆದುರು ಹಾಜರುಪಡಿಸಿ ಆಕ್ರೋಶ ವ್ಯಕ್ತಪಡಿಸಿದರು.ಸ್ಥಳಕ್ಕೆ ಡಿಸಿಪಿ ರೇಣುಕಾ ಸುಕುಮಾರ ಆಗಮಿಸಿ ಮಾಹಿತಿ ಪಡೆದುಕೊಂಡರು. ಹಶಮತ್‌ರಜಾನಿಂದ ವಂಚನೆಗೊಳಗಾದವರು ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.