ಕಾರ್ಯಕ್ರಮ ಮುಖ್ಯಸ್ಥರಾಗಿ ಡಾ| ಬಸು ಅಧಿಕಾರ ಸ್ವೀಕಾರ
Team Udayavani, Jun 2, 2020, 8:07 AM IST
ಧಾರವಾಡ: ಧಾರವಾಡದ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾಗಿ ಕತೆಗಾರ ಡಾ| ಬಸು ಬೇವಿನಗಿಡದ ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿದ್ದ ಸತೀಶ ಪರ್ವತಿಕರ ಅವರು ಮೇ 31ರಂದು ನಿವೃತ್ತರಾದ ಕಾರಣ ಆ ಸ್ಥಾನಕ್ಕೆ ಹಿರಿಯ ಕಾರ್ಯಕ್ರಮ ಅಧಿಕಾರಿಯಾಗಿದ್ದ ಡಾ| ಬಸು ಬೇವಿನಗಿಡದ ಅವರನ್ನು ನೇಮಿಸಲಾಗಿದೆ. ಆಕಾಶವಾಣಿ ಮತ್ತು ದೂರದರ್ಶನದ ದಕ್ಷಿಣ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಡಾ|ರಾಜಕುಮಾರ ಉಪಾಧ್ಯಾಯ ಅವರು ನೇಮಕ ಆದೇಶ ಹೊರಡಿಸಿದ್ದಾರೆ.
ಬೇವಿನಗಿಡದ ಕುರಿತು: ಡಾ| ಬಸು ಬೇವಿನಗಿಡದ ಅವರು ಇದುವರೆಗೆ ಧಾರವಾಡ ಸೇರಿದಂತೆ ಕಲಬುರ್ಗಿ, ವಿಜಯಪುರ, ಕಾರವಾರ ಮುಂತಾದ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿ ರಾಷ್ಟ್ರೀಯ ವಾರ್ಷಿಕ ಸ್ಪರ್ಧೆಗಳಲ್ಲಿ ಸತತ ಎರಡು ಸಲ ಪ್ರಥಮ ಬಹುಮಾನ, ರಾಜ್ಯಮಟ್ಟದ ಆಕಾಶವಾಣಿ ಸ್ಪರ್ಧೆಗಳಲ್ಲಿ ಸತತ ಮೂರು ಸಲ ಪ್ರಥಮ ಬಹುಮಾನ ಪಡೆದಿದ್ದಾರೆ. ಗುಣಮಟ್ಟದ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಿ, ಹೊಸ ಹೊಸ ಪ್ರತಿಭೆಗಳನ್ನು ಗುರುತಿಸಿ ವಿಶಿಷ್ಟತೆ ಗಳಿಸಿದ್ದಾರೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಎರಡು ಸಲ ಸಾಹಿತ್ಯ ಅಕಾಡೆಮಿ ಬಹುಮಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ