ಗಿರಡ್ಡಿ ಸ್ನೇಹಮಯಿಯಾಗಿದ್ದರು: ಚಂದ್ರಶೇಖರ ಕಂಬಾರ
Team Udayavani, May 15, 2018, 4:33 PM IST
ಬೆಂಗಳೂರು: ಇತ್ತೀಚೆಗೆ ನಿಧನರಾದ ಖ್ಯಾತ ವಿಮರ್ಷಕ ಡಾ.ಗಿರಡ್ಡಿ ಗೋವಿಂದರಾಜ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸೋಮವಾರ ನುಡಿನಮನ ಸಲ್ಲಿಸಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಬಿರುಸು ಮಾತಿನ ಮಲ್ಲನಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ಹೃದಯದಲ್ಲಿ ಅಷ್ಟೇ ಸ್ನೇಹಮಯಿ ಆಗಿದ್ದರು. ಅವರು ಇತ್ತೀಚಗಷ್ಟೇ ಅನುವಾದಿಸಿದ್ದ ಕೃತಿ ‘ಜಯ’ ನನಗೆ ಬಹಳಷ್ಟು ಇಷ್ಟವಾಗಿತ್ತು. ವಿಮರ್ಶಕರಾಗಿಯೂ ನಾಡಿನ ಮನೆಮಾತಾಗಿದ್ದ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಾ ನಷ್ಟವನ್ನುಂಟು ಮಾಡಿದೆ ಎಂದು ಹೇಳಿದರು.
ಹಲವು ವಿಚಾರಗಳಲ್ಲಿ ನಾನು ಅವರು ವಿಭಿನ್ನ ದೃಷ್ಟಿಕೋನ ಹೊಂದಿದ್ದೆವು. ಆದರೆ, ಸಾಹಿತ್ಯ ವಿಚಾರ ಬಂದಾಗ ಒಂದಾಗುತ್ತಿದ್ದೇವು. ಅದರ ಕುರಿತಾಗಿಯೇ ಹರಟುತ್ತಿದ್ದೆವು. ಸ್ನೇಹಿತನ ಆಗಲಿಕೆ ತುಂಬಾ ದುಃಖ ತಂದಿದೆ ಎಂದರು.
ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಕಂಬಾರರ ಆಪ್ತ ಮಿತ್ರರಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲರನ್ನೂ ಆತ್ಮೀಯರಾಗಿ ಕಾಣುತ್ತಿದ್ದ ಅವರ ನಡವಳಿಕೆ ನಮಗೆ ಮಾದರಿ. ವಿಮರ್ಶಕ್ಷೇತ್ರದಲ್ಲಿ ಅವರು ಅಜರಾಮರವಾಗಿ ಉಳಿದಿದ್ದಾರೆ ಎಂದು ಬಣ್ಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?