ಡಾ.ಪಾಟೀಲಗೆ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ
Team Udayavani, Nov 24, 2018, 6:20 AM IST
ಧಾರವಾಡ: ಚಿತ್ರಕಲಾ ಶಿಲ್ಪಿ ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನಿಂದ ಕೊಡ ಮಾಡುವ ಒಂದು ಲಕ್ಷ ರೂ. ನಗದು, ಸ್ಮರಣಿಕೆ ಒಳಗೊಂಡಿರುವ ಜೀವಮಾನ ಸಾಧನೆಯ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಗೆ ಕಲಬುರಗಿಯ ಡಾ.ಎ.ಎಸ್. ಪಾಟೀಲ ಭಾಜನರಾಗಿದ್ದಾರೆ.
ಇದಲ್ಲದೇ 50 ಸಾವಿರ ನಗದು,ಸ್ಮರಣಿಕೆ ಒಳಗೊಂಡ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿಗೆ ಸುರೇಖಾ ಹಾಗೂ
ತಲಾ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಓಡಿಶಾದ ಸಂತೋಷಕುಮಾರ ರೌತರಾಯ್ ಮತ್ತು ಪರಾಗ ದಿನೇಶ ಬೋರ್ಸೆ ಅವರನ್ನು ಆಯ್ಕೆ ಮಾಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಗೊಳಿಸಿದ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ನಗರದ ಸೃಜನಾ ರಂಗಮಂದಿರದಲ್ಲಿ ನ.29 ರಂದು ಸಂಜೆ 5.30 ಗಂಟೆಗೆ ಜರುಗುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು