ಜಮೀನಿಗೆ ಚರಂಡಿ ನೀರು: ಆತ್ಮ ಹತ್ಯೆ ಬೆದರಿಕೆ


Team Udayavani, Aug 20, 2018, 5:48 PM IST

20-agust-22.jpg

ಕುಷ್ಟಗಿ: ಜಮೀನಿಗೆ ಕೊಳಚೆ ನೀರು ಹರಿಸಲು ಮುಂದಾದ ಪುರಸಭೆ ಕ್ರಮಕ್ಕೆ ಬೇಸತ್ತ ಜಮೀನು ಮಾಲೀಕ ವಿಷ ಸೇವಿಸಲು ಯತ್ನಿಸಿದ ಘಟನೆ ರವಿವಾರ ಪಟ್ಟಣದ 13ನೇ ವಾರ್ಡ್‌ನಲ್ಲಿ ನಡೆದಿದೆ. ಪಟ್ಟಣದ ಹೊರವಲಯದ ಹಳೆ ನಿಡಶೇಷಿ ರಸ್ತೆಗೆ ಹೊಂದಿಕೊಂಡಿರುವ ಸ.ನಂ. 201ರ 2 ಎಕರೆ ಪಟ್ಟಣದ ಮಹಮ್ಮದ್‌ ಅಫ್ತಾಬ್‌ ಅವರಿಗೆ ಸೇರಿದ್ದು, ಈ ಜಮೀನಿನಲ್ಲಿ ಪಟ್ಟಣದ ವಿವಿಧ ವಾರ್ಡ್‌ಗಳ ತ್ಯಾಜ್ಯದ ನೀರು ಸೇರುತ್ತಿದೆ.

ಈ ಹಿಂದೆ ಪುರಸಭೆ ಅವರು ಇವರ ಜಮೀನು ಒತ್ತುವರಿ ಮಾಡಿ ರಾಜಕಾಲುವೆ ನಿರ್ಮಿಸಿದ್ದಾರೆ. ಆದರೆ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಕಾಲುವೆ ನೀರು ಇವರ ಜಮೀನಿನಲ್ಲಿ ಸಂಗ್ರಹವಾಗುತ್ತಿದೆ. ಪಟ್ಟಣದ ಕೊಳಚೆ ನೀರು ಪ್ಲಾಸ್ಟಿಕ್‌ ತ್ಯಾಜ್ಯ ಸಮೇತ ಜಮೀನು ಸೇರದಂತೆ ರೈತ ಮಹ್ಮದ್‌ ಅಫ್ತಾಬ್‌ ಅವರು ಚರಂಡಿಗೆ ಮಣ್ಣಿನ ತಡೆಗೋಡೆ (ಒಡ್ಡು) ಹಾಕಿಕೊಂಡಿದ್ದರು. ಇದರಿಂದ ಚರಂಡಿ ನೀರು ಮುಂದೆ ಹರಿಯದೇ ಭರ್ತಿಯಾಗಿತ್ತು. ಮಳೆಯಾದರೆ ನೀರು ಮನೆ ನುಗ್ಗುವ ಅಪಾಯದ ಹಿನ್ನೆಲೆಯಲ್ಲಿ ಸ್ಥಳೀಯರು ಜಮೀನು ಮಾಲೀಕ ಹಾಕಿರುವ ಒಡ್ಡನ್ನು ತೆರವುಗೊಳಿಸುವಂತೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಪುರಸಭೆಯವರು ಜೆಸಿಬಿಯೊಂದಿಗೆ ಒಡ್ಡು ತೆರವುಗೊಳಿಸಿ, ಅವರ ಜಮೀನಿಗೆ ಕೊಳಚೆ ನೀರು ಹರಿಸಲು ಬಂದಿದ್ದರು. ಇದರಿಂದ ಆಕ್ರೋಶಗೊಂಡ ಮಹ್ಮದ್‌ ಅಫ್ತಾಬ್‌ ಒಡ್ಡು ತೆರವುಗೊಳಿಸಿದರೆ ವಿಷ ಸೇವಿಸುವುದಾಗಿ ಬೆದರಿಕೆಯೊಡ್ಡಿದ್ದರು. ಇದರಿಂದ ವಿಚಲಿತರಾದ ಪುರಸಭೆ ಸಿಬ್ಬಂದಿ ಜೆಸಿಬಿಯೊಂದಿಗೆ ವಾಪಸ್ಸಾದರು.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ವಿಷದ ಬಾಟಲಿ ವಶಕ್ಕೆ ತೆಗೆದುಕೊಂಡರು. ನಂತರ ಮಹ್ಮದ್‌ ಅಫ್ತಾಬ್‌ ಅವರನ್ನು ಪಿಎಸ್‌ಐ ವಿಶ್ವನಾಥ ಹಿರೇಗೌಡ್ರು ಠಾಣೆಗೆ ಕರೆಯಿಸಿಕೊಂಡು, ಸಮಾಧಾನಿಸಿ, ಸೊಮವಾರ ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಖುದ್ದು ಭೇಟಿ ನೀಡಿ ಸಮಸ್ಯೆ ಇತ್ಯರ್ಥಗೊಳಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.